ಬ್ಯಾಡ್ಮಿಂಟನ್ ಸಾಧಕರನ್ನು ಸನ್ಮಾನಿಸಿದ ವಿಧಾನಸಭಾ ಸ್ಪೀಕರ್

ಉಡುಪಿ : ಇಲ್ಲಿನ ಅಜ್ಜರಕಾಡು ಬಳಿ ಇರುವ ಬ್ಯಾಡ್ಮಿಂಟನ್ ಇಂಡೋರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ಸ್ಯರಾಜ ಟ್ರೋಫಿ ಕ್ರೀಡಾಕೂಟ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ ಬ್ಯಾಡ್ಮಿಂಟನ್ ಸಾಧಕರನ್ನು ಸನ್ಮಾನಿಸಿದರು. ಕ್ರೀಡಾ ಸಂಯೋಜಕರಿಗೆ ಅಭಿನಂದನೆ ಸಲ್ಲಿಸಿದರು.ಮುಂದಿನ ದಿನಗಳಲ್ಲಿ ಕಬಡ್ಡಿ ಪಂದ್ಯಾಟವನ್ನು ನಡೆಸುವಂತೆ ಸಂಯೋಜಕರಿಗೆ ತಿಳಿಸಿದರು.

ನಂತರ ಇಂಡೋರ್ ಸ್ಟೇಡಿಯಂನಲ್ಲಿ ಬ್ಯಾಡ್ಮಿಂಟನ್ ಆಡಿ ಕ್ರೀಡಾ ಸ್ಪೂರ್ತಿ ಮೆರೆದರು. ಕಾರ್ಯಕ್ರಮ ಸಂಯೋಜಕ ಹಿರಿಯರಾದ ಕಾಂಗ್ರೆಸ್ ಮುಖಂಡ ಕೇಶವ ಎಂ ಕೋಟ್ಯಾನ್ ಮಲ್ಪೆ, ಅಭಿನಂದನ್ ಕೋಟ್ಯಾನ್ ಕಲ್ಮಾಡಿ, ಅಭಿಜಿತ್ ಕೋಟ್ಯಾನ್ ಕಲ್ಮಾಡಿ ಮತ್ತಿತರರು ಜೊತೆಗಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ