ದೇವಸ್ಥಾನದ ಗೋಶಾಲೆಯಲ್ಲಿ ದನ ಕಳವಿಗೆ ಯತ್ನ – ಇಬ್ಬರು ಆರೋಪಿಗಳು ಅಂದರ್

ಕುಂದಾಪುರ : ಕಮಲಶಿಲೆ ದೇವಸ್ಥಾನದ ಗೋಶಾಲೆಯ ದನಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ವರನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ರಾಜು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ವಾಜೀದ್ ಜೆ (26) ಮತ್ತು ಫೈಜಲ್ (40 ) ಬಂಧಿತರು. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಹುಂಡೈ ಕ್ರೆಟಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಕಮಲಶಿಲೆ ದೇವಸ್ಥಾನದಲ್ಲಿ ಗೋ ಕಳ್ಳತನಕ್ಕೆ ಯತ್ನ; ಸಿಸಿಟಿವಿ ಮಾನಿಟರಿಂಗ್ ತಂಡದ ಸಮಯ ಪ್ರಜ್ಞೆಯಿಂದ ಕಳ್ಳತನ ವಿಫಲ

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ