ದೇವಸ್ಥಾನದ ಗೋಶಾಲೆಯಲ್ಲಿ ದನ ಕಳವಿಗೆ ಯತ್ನ – ಇಬ್ಬರು ಆರೋಪಿಗಳು ಅಂದರ್

ಕುಂದಾಪುರ : ಕಮಲಶಿಲೆ ದೇವಸ್ಥಾನದ ಗೋಶಾಲೆಯ ದನಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ವರನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ರಾಜು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ವಾಜೀದ್ ಜೆ (26) ಮತ್ತು ಫೈಜಲ್ (40 ) ಬಂಧಿತರು. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಹುಂಡೈ ಕ್ರೆಟಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಕಮಲಶಿಲೆ ದೇವಸ್ಥಾನದಲ್ಲಿ ಗೋ ಕಳ್ಳತನಕ್ಕೆ ಯತ್ನ; ಸಿಸಿಟಿವಿ ಮಾನಿಟರಿಂಗ್ ತಂಡದ ಸಮಯ ಪ್ರಜ್ಞೆಯಿಂದ ಕಳ್ಳತನ ವಿಫಲ

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ