ಆಟೋ ಚಾಲಕನಿಗೆ ಚೂರಿ ಇರಿತ : ಆರೋಪಿ ಅರೆಸ್ಟ್

ಬಂಟ್ವಾಳ : ಯುವಕನೋರ್ವ ಆಟೋ ಚಾಲಕನಿಗೆ ಚೂರಿ ಇರಿದ ಘಟನೆ ಆ. 18ರ ಭಾನುವಾರ ಇಡ್ಕಿದು ಗ್ರಾಮ ಪಂಚಾಯತ್‌ನ ಎದುರಲ್ಲಿ ಸಂಭವಿಸಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್‌ನಲ್ಲಿ ಓರ್ವ ವ್ಯಕ್ತಿಗೆ ಎಲ್ಲರ ಕಣ್ಣಮುಂದೆಯೇ ಆರೋಪಿ ಚೂರಿ ಇರಿದಿದ್ದಾನೆ. ಎಂಎಂಎಸ್‌ ಆಟೋ ಚಾಲಕ ಶರೀಫ್ ಚೂರಿ ಇರಿತಕ್ಕೆ ಒಳಗಾದವರು. ಕಾರ್ಯಾಡಿ ನಿವಾಸಿ ಆಫೀಲ್ ಚೂರಿ ಇರಿದ ವ್ಯಕ್ತಿ.

ಸದ್ಯ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಗಂಭೀರ ಗಾಯಗೊಂಡ ಶರೀಫ್‌ನನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಉರಿಮಜಲು ಮತ್ತು ಕಾರ್ಯಾಡಿ ಎಂಬಲ್ಲಿ ಗಾಂಜಾ ವ್ಯಸನಿಗಳ ಕಾಟ ಹೆಚ್ಚಾಗುತ್ತಿದೆ. ಇಂತಹ ಅಪರಾಧಿ ಚಟುವಟಿಕೆಗಳು ಹೆಚ್ಚಲು ಗಾಂಜಾ ಸೇವನೆಯೇ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಗಾಂಜಾ ವ್ಯಸನಿಗಳನ್ನು ಮಟ್ಟ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ