ಪ್ರತಿಷ್ಟಿತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

ಬೈಂದೂರು : ಜಿಲ್ಲೆಯ ಪ್ರತಿಷ್ಠಿತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ. ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಉಪಸ್ಥಿತರಿದ್ದರು.

Related posts

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ