ರೆಡ್ ಅಲರ್ಟ್ ಹಿನ್ನೆಲೆ : ದ.ಕ.ಜಿಲ್ಲೆಯ ಶಾಲೆ – ಪಿಯು ಕಾಲೇಜುಗಳಿಗೆ ಇಂದು (ಜು.6) ರಜೆ

ಮಂಗಳೂರು : ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಕಾರಣದಿಂದ ದ.ಕ.ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಫ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಇಂದು (ಜು.6ರಂದು) ರಜೆಯನ್ನು ಘೋಷಿಸಲಾಗಿದೆ.

ಹವಾಮಾನ ಇಲಾಖೆ ಜೂ.6ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಎಸೆಸೆಲ್ಸಿ ಮರುಮೌಲ್ಯಮಾಪನ : ಸಾಯಿಸ್ಪರ್ಶಗೆ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ – 625 ಅಂಕ

ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ : ಯಶ್‌ಪಾಲ್ ಸುವರ್ಣ ಆಕ್ರೋಶ