ಬಂಕೇರಕಟ್ಟ ಸೇತುವೆ ಮುಳುಗಡೆ : ಜಿಲ್ಲಾಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಉಡುಪಿ : ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇರಕಟ್ಟ ಸೇತುವೆ ಮಳೆಗಾಲದಲ್ಲಿ ಮುಳುಗಡೆಯಾಗಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ‌ಕುಮಾರಿ ಕೆ. ಯವರೊಂದಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಮಳೆ ನೀರು ಸರಾಗವಾಗಿ ಹರಿಯಲು ತಾತ್ಕಾಲಿಕವಾಗಿ ಸೇತುವೆಯ ಕೆಳಭಾಗದ ಹೂಳು ಹಾಗೂ ಕಸಕಡ್ಡಿಗಳನ್ನು ತಕ್ಷಣ ತೆರವು ಮಾಡಲು ಕ್ರಮ ಕೈಗೊಂಡು ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗ ಡಾ. ಅರುಣ್ ಕೆ., ಕುಂದಾಪುರ ಉಪ ವಿಭಾಗಾಧಿಕಾರಿ ಶ್ರೀಮತಿ ರಶ್ಮಿ, ನಗರಸಭಾ ಸದಸ್ಯರಾದ ಶ್ರೀ ಸುಂದರ ಕಲ್ಮಾಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಶೆಟ್ಟಿ, ಪಂಚಾಯತ್ ಸದಸ್ಯರಾದ ರಾಜೇಶ್ ಪೂಜಾರಿ, ಶಶಿಧರ ಪೂಜಾರಿ, ಶ್ರೀ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ