ಉಡುಪಿ ಎಪಿಎಂಸಿಯಲ್ಲಿಯೂ ನಿಷೇಧಿತ ಚೀನಿ ಬೆಳ್ಳುಳ್ಳಿ ಹಾವಳಿ; ಅಧಿಕಾರಿಗಳಿಂದ ದಾಳಿ – 5 ಕ್ವಿಂಟಾಲ್ ವಶ

ಉಡುಪಿ : ಕೆಲವು ದಿನಗಳಿಂದ ನಿಷೇಧಿತ ಚೀನೀ ಬೆಳ್ಳುಳ್ಳಿ ಹಾವಳಿ ಹೆಚ್ಚುತ್ತಿದ್ದು ಉಡುಪಿ ಎಪಿಎಂಸಿಯಲ್ಲಿಯೂ ಪತ್ತೆಯಾಗಿದೆ.

ಇಲ್ಲಿನ ಆದಿಉಡುಪಿ ಎಪಿಎಂಸಿ ಗೋದಾಮಿನಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಪಡೆದ ಉಡುಪಿ ನಗರಸಭೆ ಮುಖ್ಯ ಆಯುಕ್ತ ರಾಯಪ್ಪ ದಿಢೀರ್ ದಾಳಿ ನಡೆಸಿ 5 ಕ್ವಿಂಟಾಲ್ ಬೆಳ್ಳುಳ್ಳಿಯನ್ನು ಪತ್ತೆ ಮಾಡಿದ್ದಾರೆ.
ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಈ ದಾಳಿ ನಡೆಯಿತು.

ಚೀನಿ ಬೆಳ್ಳುಳ್ಳಿ ಮಾರಾಟದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಮಾರಕ ರೋಗಗಳಿಗೆ ಕಾರಣವಾಗುವ ಚೀನಿ ಬೆಳ್ಳುಳ್ಳಿ ಮಾರಾಟಗಾರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಉಡುಪಿ ನಗರಸಭೆ ಪೌರಾಯುಕ್ತರು ಮಾತನಾಡಿ, ಆಹಾರ ಪದಾರ್ಥಗಳಿಗೆ ರಾಸಾಯನಿಕ ಸಿಂಪಡಣೆಯಂತಹ ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಎಪಿಎಂಸಿಯಲ್ಲಿ ನಿಷೇಧಿತ ಬೆಳ್ಳುಳ್ಳಿ ಮಾರಾಟದ ಬಗ್ಗೆ ದೂರುಗಳಿದ್ದವು. ದೂರಿನ ಅನ್ವಯ ದಾಳಿ ನಡೆಸಿದ್ದೇವೆ. ಇಂತಹ ಕೃತ್ಯ ಎಸಗುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್