ವಿಶ್ವ ಪ್ರಸಿದ್ಧ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರಿಂದ ಹುಚ್ಚಾಟ, ಪೊಲೀಸರಿಂದ ಸುರಕ್ಷತೆಯ ಪಾಠ

ಕುಂದಾಪುರ : ಉಡುಪಿ ಜಿಲ್ಲೆಯ ವಿಶ್ವ ಪ್ರಸಿದ್ಧ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟವು ತೀವ್ರತೆ ಪಡೆದುಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ದವಾಗಿದ್ದು, ಪ್ರವಾಸಿಗರು ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ.

ಗಂಗೊಳ್ಳಿ ಠಾಣೆಯ ಪಿಎಸ್‌ಐ ಹರೀಶ್ ಆರ್ ನಾಯ್ಕ್ ಅವರು ಸ್ಥಳದಲ್ಲಿದ್ದ ಪ್ರವಾಸಿಗರಿಗೆ ಸುರಕ್ಷತೆಯ ಪಾಠವನ್ನು ಕಲಿಸಿದರು. ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬೀಚ್‌ಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಕಡಲಬ್ಬರ ಜಾಸ್ತಿ ಆಗುವ ಹಿನ್ನಲೆಯಲ್ಲಿ ನೀರಿಗಿಳಿಯಲು ನಿರ್ಬಂಧವಿದ್ದರೂ, ಪ್ರವಾಸಿಗರು ಎಚ್ಚರಿಕೆ ಫಲಕವಿದ್ದರೂ ಕ್ಯಾರೆ ಅನ್ನದೇ ಸಮುದ್ರಕ್ಕೆ ಇಳಿಯುತ್ತಿದ್ದಾರೆ.

ಭಾರಿ ಗಾತ್ರದ ಅಲೆಗಳು ಬರುವಾಗ ಸೆಲ್ಫೀ ತೆಗೆಯುವ ಸಾಹಸ ಮಾಡುವ ಪ್ರವಾಸಿಗರು ತಮ್ಮ ಜೀವಕ್ಕೆ ಕುತ್ತು ತರುತ್ತಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ