ಶ್ರೀ ಕೃಷ್ಣಮಠದಲ್ಲಿ ಗೀತೋತ್ಸವದ ಅಂಗವಾಗಿ ಭಗವದ್ಗೀತಾ ಯಜ್ಞ ಸಂಪನ್ನ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಇಂದು ಭಗವದ್ಗೀತಾ ಯಜ್ಞವು ಸಂಪನ್ನಗೊಂಡಿತು.

ದೇಶ ವಿದೇಶಗಳಿಂದ ಆಗಮಿಸಿದ್ದ ಮಠದ ಭಕ್ತರು ಸಮಗ್ರ ಭಗವದ್ಗೀತಾ ಪಾರಾಯಣ‌ವನ್ನು ಮಾಡಿದರು. ಮಠದ ಯೋಗೇಂದ್ರ ಭಟ್ ಹೋಮವನ್ನು ನೆರವೇರಿಸಿದರು.

ಪರ್ಯಾಯ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ಭಗವದ್ಗೀತೆಯಲ್ಲಿ ಎಲ್ಲ ಕಾರ್ಯಗಳನ್ನು ಯಜ್ಞವಾಗಿ ಪರಿವರ್ತಿಸಿಕೊಂಡು ತನ್ಮೂಲಕ ಭಗವದನುಗ್ರಹವನ್ನು ಸಂಪಾದಿಸಿಕೊಳ್ಳುವ ಉಪಾಯವನ್ನು ಶ್ರೀ ಕೃಷ್ಣ ಪರಮಾತ್ಮ ಲೋಕಕ್ಕೆ ತಿಳಿಸಿದ್ದಾನೆ. ಅಂತಹ ಪವಿತ್ರ ಗ್ರಂಥದ ಶ್ಲೋಕಗಳ ಮೂಲಕವೇ ಯಜ್ಞವನ್ನು ಆಚರಿಸುವುದು ಬಹಳ ಔಚಿತ್ಯ ಪೂರ್ಣ. ಭಾಗವಹಿಸಿದವರೆಲ್ಲರಿಗೂ ಶ್ರೀಕೃಷ್ಣನ ಪರಮಾನುಗ್ರಹವಾಗಲಿ ಎಂದು ಹಾರೈಸಿದರು. ಪರ್ಯಾಯ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ