ನಾಪತ್ತೆಯಾದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆ

ಬಂಟ್ವಾಳ : ಬಿ.ಸಿ.ರೋಡ್ ಕೈಕಂಬ ನಿವಾಸಿಯೋರ್ವರು ಕಳೆದ 2 ದಿನದಿಂದ ನಾಪತ್ತೆಯಾಗಿದ್ದು ಬಿ.ಸಿ. ರೋಡ್ ತಲಪಾಡಿ ಮೆಸ್ಕಾಂ ಸಬ್ ಸ್ಟೇಷನ್ ಬಳಿ ನದಿಯಲ್ಲಿ ಶವವಾಗಿ ಇಂದು ಸಂಜೆ ಪತ್ತೆಯಾಗಿದ್ದಾರೆ.

ಅಬ್ದುಲ್ ಕರೀಂ (61) ಎಂಬ ವ್ಯಕ್ತಿಯು ಬಕ್ರೀದ್ ದಿವಸ ಸಂಜೆ ಮನೆಯಿಂದ ಹೊರ ಹೋದವರು ಕಾಣೆಯಾಗಿದ್ದರು.

ಇದೀಗ ಅಬ್ದುಲ್ ಕರೀಂ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಯೋ, ಆಕಸ್ಮಿಕವಾಗಿ ನದಿಗೆ ಜಾರಿ ಬಿದ್ದಿದ್ದೋ ಇನ್ನಷ್ಟೇ ತಿಳಿಯಬೇಕಿದೆ. ಮೃತ ದೇಹ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್