ಬೈಂದೂರು ಉತ್ಸವ ಪ್ರೊಮೋ ಬಿಡುಗಡೆ

ಕುಂದಾಪುರ : ನವಂಬರ್ 1, 2, 3 ರಂದು ಮೂರು ದಿನಗಳ ಕಾಲ ಬೈಂದೂರಿನಲ್ಲಿ ನಡೆಯಲಿರುವ ಬೈಂದೂರು ಉತ್ಸವ 2024ರ ಪ್ರೋಮೋವನ್ನು ಮಾಜಿ ಶಾಸಕ, ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಗ್ರಾಮೀಣ ಭಾಗಗಳನ್ನು ಒಳಗೊಂಡಿರುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಇಡೀ ಜಗತ್ತಿಗೆ ಒಂದು ಉತ್ತಮ ಸಂದೇಶ ನೀಡಲಿದೆ ಎಂದರು. ಕುಂದಾಪುರದ ಭಾಷೆ ನೆಲ, ಜಲ, ಸಂಸ್ಕೃತಿಯು ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಿದೆ. ಶೈಕ್ಷಣಿಕವಾಗಿ, ಧಾರ್ಮಿಕವಾಗಿ ಹಾಗೂ ಉದ್ಯಮ ಕ್ಷೇತ್ರದಲ್ಲೂ ಹೆಸರು ಮಾಡಿರುವ ಬೈಂದೂರಿನಲ್ಲಿ ಬೈಂದೂರು ಉತ್ಸವ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!