ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

ಮಂಗಳೂರು : ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಮನವಿ ಮಾಡಿದೆ.

ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ. 5ರಿಂದ ಶೇ. 2ಕ್ಕೆ ಇಳಿಸಬೇಕು. ಇದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ವ್ಯವಹರಿಸಲು ಉತ್ತೇಜನ ಸಿಗಲಿದೆ. ತೆರಿಗೆ ಕಳ್ಳತನಕ್ಕೆ ಕಡಿವಾಣ ಬೀಳಲಿದ್ದು ಸರಕಾರಕ್ಕೆ ತೆರಿಗೆಯ ಆದಾಯ ಹೆಚ್ಚಾಗಲಿದೆ. ಸಿಜಿಎಸ್‌ಟಿ, ಎಸ್‌ಜಿಎಸ್‌ಟಿ ಮತ್ತು ಐಜಿಎಸ್‌ಟಿ ಮುಂತಾದ ಬಹುಸ್ಥರದ ತೆರಿಗೆಯ ಬದಲು ಸರಳ ಮತ್ತು ಏಕೀಕೃತ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿ ಸರಳಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ