ಟಿಪ್ಪರ್ ಡಿಕ್ಕಿ, ಕಂದಕಕ್ಕೆ ಉರುಳಿದ ಕಾರು

ಉಡುಪಿ : ಟಿಪ್ಪ‌ರ್ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಉಡುಪಿಯ ರಾ.ಹೆ.66ರ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ನಿನ್ನೆ (ಮಾ.20) ಮಧ್ಯಾಹ್ನ ಸಂಭವಿಸಿದೆ.

ಕಾರಿನಲ್ಲಿದ್ದ ನಾಗರಾಜ್, ಅಭಿಜಿತ್ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ.

ಸಂತೆಕಟ್ಟೆಯ ಖಾಸಗಿ ಸೊಸೈಟಿಯ ಸಿಬಂದಿ ಕಾರಿನಲ್ಲಿ ಉಡುಪಿಯಿಂದ ಸಂತೆಕಟ್ಟೆ ಶಾಖೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳೀಯರು ಟಿಪ್ಪರ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆಯಿತು. ಉಡುಪಿ ಸಂಚಾರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ವೈದ್ಯಕೀಯ ಶಿಕ್ಷಣದಲ್ಲಿ ಆಧುನಿಕ VR-ಆಧಾರಿತ ಕೌಶಲ ತರಬೇತಿಗೆ ಮೆಡಿಸಿಮ್ ವಿಆರ್‌ನೊಂದಿಗೆ ಮಾಹೆ ಒಪ್ಪಂದ

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ