Sushanth Brahmavar A top-graduate from Poorna Prajna Evening college and Vice-President of Bharthiya Janatha Party OBC Morcha Udupi City of RSS Background Who has brought international Fame Award for completing Entire Bhagvadgits”s Verses in 5.30 hours has been nominated for one more National Fame Award of India Books of Awards, which has brought great privilage to the party in the city but the intresting part does not end here he has also taken the steps for getting the farmers ahead by giving great innovative margin profits to the farmers of the state promoting Indian Produce.Mr.Sushanth’s work has not only empowered local farmers but also set new benchmarks in sustainable agri-business.His entrepreneurial spirit and passion for excellence make him a true inspiration in many fields. Let us all applause his dedication and extend our heartfelt appreciation for his contribution to the nations’ economic and agricultural growth.
Government
ಉಡುಪಿ : ಉಡುಪಿ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಳ್ಳುತ್ತಿರುವ ಪ್ರಧಾನ ಸಿವಿಲ್ ಹಾಗೂ ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ವಿನಾಯಕ್ ವಾಂಖಾಂಡೆ ಮತ್ತು ಹೆಚ್ಚುವರಿ ಸಿವಿಲ್ ಹಾಗು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಜೀತು ಆರ್.ಎಸ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು.
ಪೋಕ್ಸೋ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗು ಹೆಚ್ಚುವರಿ ಮುಖ್ಯ ದಂಡಾಧಿಕಾರಿ ನ್ಯಾಯಾಲಯದ ನ್ಯಾಯಾಧೀಶ ಮನು ಪಟೇಲ್ ಬಿವೈ, ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಹಿರಿಯ ವಕೀಲರಾದ ಎನ್.ಕೆ ಆಚಾರ್ಯ ಹಾಗು ಹೆಚ್.ರಾಘವೇಂದ್ರ ಶೆಟ್ಟಿ ಶುಭಾಸಂಶನೆಗೈದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಎಆರ್ ವಂದಿಸಿದರು.
ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ
ಉಡುಪಿ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕ್ಗಳ ಅಧಿಕಾರಿ, ಸಿಬಂದಿ ಅನ್ಯಭಾಷಿಕರಾಗಿದ್ದರೆ ವೃತ್ತಿಗೆ ಸೇರಿದ 6 ತಿಂಗಳ ಒಳಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿತು ಜನಸಾಮಾನ್ಯರೊಡನೆ ವ್ಯವಹರಿಸುವ ಬಗ್ಗೆ ಸೂಕ್ತ ಸುತ್ತೋಲೆ ಹೊರಡಿಸಬೇಕು ಮತ್ತು ಈ ಬಗ್ಗೆ ನಿರ್ದಿಷ್ಟ ಕಾನೂನು ರೂಪಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಇತ್ತೀಚಿಗೆ ರಾಷ್ಟ್ರೀಕೃತ ಬ್ಯಾಂಕ್ ಒಂದರಲ್ಲಿ ಕನ್ನಡ ಮಾತನಾಡುವುದಿಲ್ಲ ಎಂದು ಮ್ಯಾನೇಜರ್ ಒಬ್ಬರು ತೋರಿದ ನಡವಳಿಕೆ ಮುಂದೆ ಎಲ್ಲಿಯೂ ಮರುಕಳಿಸಬಾರದು. ಹೀಗಾಗಿ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡ ಕಲಿತು ಇಲ್ಲಿಯವರೊಂದಿಗೆ ವ್ಯವಹರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಸೇವೆ ಸಲ್ಲಿಸುವಾಗ ಕನ್ನಡ ಭಾಷೆಯನ್ನು ಕಲಿತು ವ್ಯವಹರಿಸುವ ಕಾನೂನಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಿಬಂದಿ, ಪ್ರಬಂಧಕರು ಗ್ರಾಹಕರೊಂದಿಗೆ ವ್ಯವಹರಿಸುವಾಗ ಕಡ್ಡಾಯವಾಗಿ ಕನ್ನಡವನ್ನು ಕಲಿತು ವ್ಯವಹರಿಸುವುದು ಅಗತ್ಯ. ಕನ್ನಡದಲ್ಲಿ ವ್ಯವಹರಿಸದೇ ಇರುವ ಅಧಿಕಾರಿ, ಸಿಬಂದಿ ಮೇಲೆ ಶಿಸ್ತು ಕ್ರಮಕೈಗೊಂಡು ಗ್ರಾಹಕರೊಂದಿಗೆ ಕನ್ನಡದಲ್ಲೇ ಮಾತನಾಡುವಂತೆ ಸೂಚಿಸಬೇಕು ಎಂದವರು ಪತ್ರದ ಮೂಲಕ ತಿಳಿಸಿದ್ದಾರೆ.
ಉಡುಪಿ : ಕಳೆದ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ 1185, ನಗರ ವ್ಯಾಪ್ತಿಯಲ್ಲಿ 9976 ಒಟ್ಟು 11,161 ಜನನ ಪ್ರಕರಣಗಳು ನೋಂದಾವಣಿಯಾದರೆ, ಗ್ರಾಮೀಣ ಪ್ರದೇಶದಲ್ಲಿ 7269, ನಗರ ಪ್ರದೇಶದಲ್ಲಿ 5000 ಒಟ್ಟು 12,269 ಮರಣ ಪ್ರಕರಣಗಳು ನೋಂದಾವಣಿಯಾಗಿವೆ. ಜಿಲ್ಲೆಯಲ್ಲಿ ಒಟ್ಟು 61 ನಿರ್ಜೀವ ಜನನಗಳು ನೋಂದಣಿಯಾಗಿವೆ. ಜಿಲ್ಲೆಯಲ್ಲಿ ಹೆಣ್ಣು ಮತ್ತು ಗಂಡಿನ ಅನುಪಾತವು 976ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು 21 ದಿನಗಳ ಒಳಗಾಗಿ ಕಡ್ಡಾಯವಾಗಿ ಸೂಕ್ತ ಪ್ರಾಧಿಕಾರದ ಮುಂದೆ ಪ್ರತಿಯೊಬ್ಬರೂ ನೋಂದಾಯಿಸಬೇಕು ಎಂದರು.
ಜಿಲ್ಲೆಯಲ್ಲಿ ಆಗುವ ಪ್ರತಿಶತಃ ನೂರರಷ್ಟು ಜನನ, ಮರಣ ಮತ್ತು ನಿರ್ಜೀವ ಜನನಗಳ ಘಟನೆಗಳನ್ನು ವಿಳಂಬವಿಲ್ಲದೇ ನೋಂದಣಿ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಜನನ ಮತ್ತು ಮರಣ ನೋಂದಣಿಯು ಭವಿಷ್ಯದ ಕೆಲಸ ಕಾರ್ಯಗಳಿಗೆ ಇವುಗಳ ಪ್ರಮಾಣಪತ್ರವು ಅವಶ್ಯ ಇದೆ. ಇದನ್ನು ಮನಗಂಡು ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಅವರು ತಿಳಿಸಿದರು.
ಯಾವುದೇ ಮಗುವಿನ ಜನನವನ್ನು ಹೆಸರಿಲ್ಲದೇ ನೋಂದಣಿ ಮಾಡಲು ಅವಕಾಶವಿದ್ದು, ಹೆಸರಿಲ್ಲದೇ ನೋಂದಾಯಿಸಿದ್ದಲ್ಲಿ ಆ ದಿನದಿಂದ 12 ತಿಂಗಳ ಒಳಗಾಗಿ ಮಗುವಿನ ಹೆಸರನ್ನು ಯಾವುದೇ ಶುಲ್ಕವಿಲ್ಲದೇ ರಿಜಿಸ್ಟರ್ನಲ್ಲಿ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದ ಅವರು, ಜನನ, ಮರಣ ನೋಂದಣಿ ದಾಖಲಾತಿಗಳಲ್ಲಿ ಯಾವುದೇ ಬದಲಾವಣೆ, ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ ಎಂದರು.
ಕ್ಯಾನ್ಸರ್ ರೋಗಿಗಳು ಕಿಮೋಥೆರಪಿ ಪ್ರಯೋಜನ ಪಡೆದುಕೊಳ್ಳಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಉಡುಪಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿದ ಡೇ ಕೇರ್ ಕಿಮೋ ಥೆರಪಿ ಕೇಂದ್ರ ಸೇರಿದಂತೆ ರಾಜ್ಯದ 16 ಡೇ ಕೇರ್ ಕಿಮೋಥೆರಪಿ ಕೇಂದ್ರಗಳನ್ನು ಇಂದು ಮೈಸೂರಿನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ಕ್ಯಾನ್ಸರ್ ಚಿಕಿತ್ಸೆಯ ಸರ್ಜರಿ ಮಾಡಿಸಿಕೊಂಡು ಬಂದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಕಿಮೊತೆರಪಿ ತುಂಬಾ ದುಬಾರಿಯಾಗಿರುವುದರಿಂದ ನಿರಂತರವಾಗಿ ಕ್ಯಾನ್ಸರ್ ರೋಗಿಗಳು ಕಿಮೊತೆರಫಿ ಮಾಡಿಸಿಕೊಡಲು ಮುಂದೆ ಬರುವುದಿಲ್ಲ. ಬಡ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಸರ್ಕಾರದ ವತಿಯಿಂದ ಡೇ ಕೇರ್ ಕಿಮೋ ಥೆರಪಿ ಕೇಂದ್ರವನ್ನು ಆರಂಭಿಸಲಾಗಿದ್ದು, ಕ್ಯಾನ್ಸರ್ ರೋಗಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಡೇ ಕೇರ್ ಕಿಮೋಥೆರಪಿ ಕೇಂದ್ರಗಳಲ್ಲಿ ನೋಂದಾಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದು ನಂತರ ಮುಂದುವರೆದ ಕಿಮೋಥೆರಪಿ ಚಿಕಿತ್ಸೆಗಳನ್ನು ಈ ಡೇ ಕೇರ್ ಕೇಂದ್ರಗಳಲ್ಲಿ ನೀಡಲಾಗುತ್ತದೆ. ಡೇ ಕೇರ್ ಕಿಮೋಥೆರಪಿ ಕೇಂದ್ರಗಳಲ್ಲಿ ಒಬ್ಬ ವೈದ್ಯಕೀಯ ಆಂಕೋಲಾಜಿಸ್ಟ್, ಕಿಮೋಥೆರಪಿ ಚಿಕಿತ್ಸೆಯಲ್ಲಿ ತರಬೇತಿ ಪಡೆದ ಇಬ್ಬರು ದಾದಿಯರು ಸೇರಿದಂತೆ ಮತ್ತಿತರರು ಇರಲಿದ್ದಾರೆ ಎಂದರು.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸರ್ಜಿಕಲ್ ಆಂಕೋಲಜಿ ಶಸ್ತ್ರಚಿಕಿತ್ಸಕರು ಇದ್ದು, ಅವರು ಈಗಾಗಲೇ ಹಲವು ಕ್ಯಾನ್ಸರ್ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಶಸ್ತ್ರಚಿಕಿತ್ಸೆ ಬಳಿಕ ಕಿಮೋ ಥೆರಪಿಯನ್ನು ಮಾಡಲು ಈಗ ಈ ಕೇಂದ್ರದಿಂದ ಅನುಕೂಲವಾಗಲಿದೆ. ಅದಕ್ಕೆ ಬೇಕಾದ ಎಲ್ಲಾ ಉಪಕರಣಗಳನ್ನು ಸರ್ಕಾರ ಒದಗಿಸಿದೆ ಎಂದರು.
ಎಸೆಸೆಲ್ಸಿ ಮರುಮೌಲ್ಯಮಾಪನ : ಸಾಯಿಸ್ಪರ್ಶಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ್ – 625 ಅಂಕ
ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆಯ ಎಸೆಸೆಲ್ಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ಈಕೆಗೆ ಮೊದಲ ಪರೀಕ್ಷೆಯಲ್ಲಿ 623 ಅಂಕಗಳು ಬಂದಿದ್ದವು. ಇದರ ಜೊತೆಗೆ ಶಾಲೆಯಲ್ಲಿ ಇನ್ನೂ ಎಂಟು ವಿದ್ಯಾರ್ಥಿಳಿಗೆ ರ್ಯಾಂಕ್ ಬಂದಿದೆ. ಶಾಲೆಗೆ ಒಟ್ಟು ರಾಜ್ಯಮಟ್ಟದ 9 ರ್ಯಾಂಕ್ಗಳು ಲಭಿಸಿವೆ ಎಂದು ಶಾಲಾ ಅಧ್ಯಕ್ಷ ಹಾಗೂ ಸಂಚಾಲಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್ ತಿಳಿಸಿದ್ದಾರೆ.
ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ : ಯಶ್ಪಾಲ್ ಸುವರ್ಣ ಆಕ್ರೋಶ
ಉಡುಪಿ : ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯ ವ್ಯವಸ್ಥೆಯೊಂದಿಗೆ ಚೆಲ್ಲಾಟವಾಡಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕರ್ನಾಟಕ ಸರಕಾರವು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ ನೂತನ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಲು ಸಲ್ಲಿಸಿದ ಪ್ರಸ್ತಾವನೆಗಳನ್ನು ತಿರಸ್ಕರಿಸಲು ಹಾಗೂ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಲ್ಲಿ ಹಲವಾರು ವರ್ಷಗಳಿಂದ ಸೇವೆ ನೀಡುತ್ತಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ನೀಡಿದೆ.
ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳು ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ರಾಜ್ಯದ ಬಡ ಜನತೆಗೆ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ದೊರಕಿಸಿ, ತೃಪ್ತಿಕರ ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದೆ. ಈ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವುದರಿಂದ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಕಡಿಮೆ ಹಾಗೂ ಕೈಗೆಟಕುವ ದರಗಳಲ್ಲಿ ದೊರಕಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಹಾಗೂ ಜನಪರ ಉದ್ದೇಶಕ್ಕೆ ಅಡ್ಡಿಪಡಿಸಿದಂತಾಗುತ್ತದೆ.
ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ರದ್ದು ಪಡಿಸಿ ಮತ್ತು ನೂತನ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಲು ಸಲ್ಲಿಸಿದ ಪ್ರಸ್ತಾವನೆಗಳಿಗೆ ಅನುಮತಿ ನೀಡಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ರವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ
ಕುಂದಾಪುರ : ಬುಧವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದ ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ (59) ಅವರಿಗೆ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.
ಕುಂದಾಪುರ ಡಿವೈಎಸ್ಪಿ ಹೆಚ್. ಡಿ. ಕುಲಕರ್ಣಿ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಗೌರವ ಸಲ್ಲಿಸಿದರು.

ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುರಸಭಾಧ್ಯಕ್ಷ ಮೋಹನ್ ದಾಸ್ ಶೆಣೈ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಸಹಿತ ಗಣ್ಯರಿಂದ ಅಂತಿಮ ದರ್ಶನ ಪಡೆದರು. ಬಳಿಕ ಮೃತದೇಹವನ್ನು ಹುಟ್ಟೂರಿಗೆ ಕೊಂಡೊಯ್ಯಲಾಯಿತು.
ಅನಾರೋಗ್ಯದಿಂದ ಬಳಲುತ್ತಿದ್ದ ನಂಜಪ್ಪ ಅವರು ಎರಡು ದಿನಗಳ ಹಿಂದೆ ಉಡುಪಿಯ ಖಾಸಗೀ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ತಡರಾತ್ರಿ ನಿಧನರಾಗಿದ್ದರು.
ನಂಜಪ್ಪ ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರು. ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು, ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿ ಯಲ್ಲಿ ಹಾಗೂ ನಾಲ್ಕು ವರ್ಷಗಳ ಕಾಲ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕಳೆದ ವರ್ಷ ಆಗಸ್ಟ್ನಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದರು.
ಕಟ್ಟಡ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಮರಳು ಕೈಗೆಟುಕುವ ದರದಲ್ಲಿ ಸಿಗುವಂತಾಗಬೇಕು – ಸಂಸದ ಕೋಟ
ಉಡುಪಿ : ಜಿಲ್ಲೆಯಲ್ಲಿ ಮಳೆಗಾಲ ಮುಗಿಯುತ್ತಿದ್ದಂತೆ ಮನೆ, ಕಟ್ಟಡ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಮರಳು ಲಭ್ಯವಾಗಬೇಕು. ಅಷ್ಟರೊಳಗೆ ಕೇಂದ್ರ ಕಚೇರಿ ಅನುಮತಿ, ಟೆಂಡರ್ ಪ್ರಕ್ರಿಯೆ ಇತ್ಯಾದಿ ಪೂರ್ಣಗೊಳಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಜಿಲ್ಲೆಯ ಮರಳು ಸಮಸ್ಯೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮರಳು ನಿರ್ವಹಣೆ ಸಮಿತಿ ಅಥವಾ ಏನೇ ವ್ಯವಸ್ಥೆಯಿದ್ದರೂ ಶಾಸಕರಿಗೆ ಯಾವುದೇ ಮಾಹಿತಿ ನೀಡದೇ ಕಾರ್ಯನಿರ್ವಹಿಸುವುದು ಸರಿಯಲ್ಲ. ಇಲಾಖೆಯಿಂದ ಶಾಸಕರಿಗೆ ಈ ಬಗ್ಗೆ ಕನಿಷ್ಠ ಮಾಹಿತಿಯನ್ನಾದರೂ ನೀಡಬೇಕು. ಹಾಗೆಯೇ ಸ್ಥಳೀಯವಾಗಿ ಸಮಸ್ಯೆಗಳಿದ್ದರೆ ಜನ ಪ್ರತಿನಿಧಿಗಳ ಗಮನಕ್ಕೆ ತಂದು ಬಗೆಹರಿಸಬೇಕು ಎಂದರು.
ಜಿಲ್ಲೆಯ ನಾನ್ ಸಿಆರ್ಝಡ್ ವ್ಯಾಪ್ತಿಯ 28 ಕಡೆ ಮರಳು ತೆಗೆಯಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದ 9 ಕಡೆ ಮರಳು ತೆಗೆಯುತ್ತಿಲ್ಲ. ಗುತ್ತಿಗೆ ಮಂಜೂರಾದ 14 ಬ್ಲಾಕ್ಗಳಲ್ಲಿ 11 ಕಡೆ ಕೆಲಸ ನಡೆಯುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಮರಳು ತೆಗೆಯಲು 101 ಕಡೆಗುರುತಿಸಿದ್ದು, ಅದರಲ್ಲಿ 11 ಕಡೆ ಟೆಂಡರ್ ಪೂರ್ಣಗೊಂಡಿದೆ. 14 ಕಡೆ ಟೆಂಡರ್ ಪ್ರಕ್ರಿಯೆ ನಡೆಯಬೇಕಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಸಂದೀಪ್ ತಿಳಿಸಿದರು.
ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಲಿ, ಗುರುರಾಜ್ ಗಂಟಿಹೊಳೆಯವರು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್ಪಿ ಡಾ| ಅರುಣ್ ಕೆ. ಉಪಸ್ಥಿತರಿದ್ದರು.
ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ – ಸಂಸದ ಕೋಟ ಆರೋಪ
ಉಡುಪಿ : ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರೆಸಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ, ಜನೌಷಧಿ ಕೇಂದ್ರದಲ್ಲಿ ಜನ ವಾರ್ಷಿಕ 250 ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿದ್ದಾರೆ. ದೇಶದಲ್ಲಿ 2 ಸಾವಿರ ಕೋಟಿ ವ್ಯವಹಾರ ಜನೌಷಧಿ ಕೇಂದ್ರದಲ್ಲಿ ನಡೆಯುತ್ತದೆ. ಕಡಿಮೆ ದರದಲ್ಲಿ ರೋಗಿಗಳಿಗೆ ಔಷದ ಸಿಗುತ್ತಿದೆ. ಆಸ್ಪತ್ರೆಯ ಆವರಣದ ಒಳಗೆ ಇದ್ದರೆ ಅದನ್ನು ಬಂದ್ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ನೀವು ಉಚಿತವಾಗಿ ಕೊಟ್ಟರೆ ಜನಔಷಧಿ ಕೇಂದ್ರ ತನ್ನಷ್ಟಕ್ಕೆ ಮುಚ್ಚಲಿ. ನೀವಾಗಿ ಯಾಕೆ ಮುಚ್ಚುತ್ತೀರಿ? ಬಡ ರೋಗಿಗಳಿಗೆ ಬಹುದೊಡ್ಡ ಗಂಡಾಂತರ ಇದು ಎಂದು ಹೇಳಿದ್ದಾರೆ.
ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದ ಅವರು, ಸಿಎಂ ಸಿದ್ದರಾಮಯ್ಯ ದಿನೇಶ್ ಗುಂಡೂರಾವ್ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ಬಡ ರೋಗಿಗಳಿಗೆ ಕಿರುಕುಳ ಕೊಟ್ಟು ನಿಮ್ಮ ರಾಜಕೀಯ ಬೇಡ. ರಾಜ್ಯ ಸರ್ಕಾರ ಕೂಡಲೇ ಈ ಆದೇಶ ವಾಪಸ್ ಪಡೆಯಬೇಕು. ನಿಮ್ಮ ನಿಲುವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.