ಉಡುಪಿ : 2ನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಇವರನ್ನು ಉಡುಪಿ ಜಿಲ್ಲಾ ಕ್ರೈಸ್ತ ಸಮುದಾಯದವರು ಡಾನ್ ಬಾಸ್ಕೋ ಸಭಾಭವನದಲ್ಲಿ ಅಭಿನಂದಿಸಿದರು.
ಅಭಿನಂದನಾ ಭಾಷಣ ಮಾಡಿದ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ಫಾ. ಚಾರ್ಲ್ಸ್ ಮಿನೇಜಸ್, ಐವನ್ ಡಿಸೋಜರವರು ಸಮಾಜ ಮತ್ತು ಪಕ್ಷಕ್ಕೆ ನೀಡಿದ ಸೇವೆಗೆ ಸಿಕ್ಕ ಪ್ರತಿಫಲ. ಸರ್ಕಾರ ನಮ್ಮ ಕ್ರೈಸ್ತ ಸಮಾಜಕ್ಕೆ ನೀಡಿದ ಕೊಡುಗೆ. ಐವನ್ ಡಿಸೋಜ ಇವರ ಸೇವೆಯು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಲಿ ಎಂದು ಶುಭ ಹಾರೈಸಿದರು.
ಕ್ರೈಸ್ತ ಬಾಂಧವರ ಸನ್ಮಾನ ಸ್ವೀಕರಿಸಿ ಮಾತನಾಡಿದ ಐವನ್ ಡಿಸೋಜ, ಕ್ರೈಸ್ತ ಸಮುದಾಯದ ಕೊಡುಗೆಯನ್ನು ಗುರುತಿಸಿ ಕಾಂಗ್ರೆಸ್ ಸರಕಾರ ಈ ಹುದ್ದೆಯನ್ನು ನೀಡಿದೆ. ಈ ಹುದ್ದೆಯನ್ನು ಪಡೆದ ನಾನು ಧನ್ಯನು. ನನ್ನ ಅವಧಿಯಲ್ಲಿ ಸಮಾಜದ ಕುಂದು ಕೊರತೆಗಳನ್ನು ನನ್ನ ಕೈಲಾದ ಮಟ್ಟಿಗೆ ಸರಿಪಡಿಸಲು ಪ್ರಯತ್ನಿಸುತ್ತೇನೆ. ಹಾಗೇ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ. ಸಮಾಜದ ಎಲ್ಲಾ ವರ್ಗದ ಹಾಗೂ ಧರ್ಮದ ಜನರನ್ನು ಒಗ್ಗೂಡಿಸಿ ಅವರ ಧ್ವನಿಯಾಗಿ ವಿಧಾನ ಪರಿಷತ್ ಮತ್ತು ಸರಕಾರದ ಮಟ್ಟದಲ್ಲಿ ನನ್ನ ಕೊಡುಗೆಯನ್ನು ಕೊಡಲು ಬದ್ದನಿದ್ದೇನೆ. ಕಳೆದ ಅವಧಿಯಲ್ಲಿ ಜಾತಿ ಧರ್ಮ ನೋಡದೆ ಮುಖ್ಯಮಂತ್ರಿ ನಿಧಿಯಿಂದ ದಾಖಲೆಯ ಮಟ್ಟದಲ್ಲಿ ಪರಿಹಾರ ನಿಧಿಯನ್ನು ಅಗತ್ಯವಿದ್ದವರಿಗೆ ತಲುಪಿಸಿದ್ದೇನೆ. ನನ್ನಿಂದ ಕೆಲಸ ತೆಗೆಸುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ಫಾ| ಚಾರ್ಲ್ಸ್ ಮಿನೆಜಸ್, ಸಂತ ಮೇರಿ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರಾದ ಫಾ| ವಿಜಯ್ ಡಿಸೋಜ, ಐವನ್ ಡಿಸೋಜರವರ ಧರ್ಮಪತ್ನಿ ಡಾ. ಕವಿತಾ, ಪಾಲನ ಮಂಡಳಿಯ ಉಪಾಧ್ಯಕ್ಷ ಮ್ಯಾಕ್ಷಿಮ್ ಡಿಸೋಜ ಮತ್ತಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


			        


			        
                        
                        
                        
                        
                        
                        
                        