ಉಡುಪಿ : ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರದ ಸಹಯೋಗದಲ್ಲಿ ನಡೆದ “ವಿಕಸಿತ ಭಾರತ ಯುವ ಪಾರ್ಲಿಮೆಂಟ್ ಸ್ಪರ್ಧೆ”ಯಲ್ಲಿ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರು, ಕೊಡಗು ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮೂರು ಜಿಲ್ಲೆಗಳ ಸುಮಾರು 150 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಂತಿಮವಾಗಿ 10 ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.
ಮಾರ್ಚ್ 27ರಂದು ರಾಜ್ಯ ಮಟ್ಟದ ‘ವಿಕಸಿತ ಭಾರತ ಯುತ್ ಪಾರ್ಲಿಮೆಂಟ್ – 2025’ ಕಾರ್ಯಕ್ರಮವು ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆಯಲಿದೆ.
ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಡಾ. ಎಂ ವೆನಿಸ್ಸಾ ಎ.ಸಿ ವಿಜೇತರಿಗೆ ಪದಕ ಮತ್ತು ಪ್ರಮಾಣ ಪತ್ರವನ್ನು ವಿತರಿಸಿದರು ನೆಹರು ಯುವ ಕೇಂದ್ರದ ನೋಡಲ್ ಅಧಿಕಾರಿ ಲೋಕೇಶ್ ಕುಮಾರ್, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜಕ ಡಾ. ಶೇಷಪ್ಪ ಅಮೀನ್ ಮತ್ತು ಸೈಂಟ್ ಆಗ್ನೆಸ್ ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಉದಯ್ ಕುಮಾರ್ ಉಪಸ್ಥಿತರಿದ್ದರು.
