Sushanth Brahmavar A top-graduate from Poorna Prajna Evening college and Vice-President of Bharthiya Janatha Party OBC Morcha Udupi City of RSS Background Who has brought international Fame Award for completing Entire Bhagvadgits”s Verses in 5.30 hours has been nominated for one more National Fame Award of India Books of Awards, which has brought great privilage to the party in the city but the intresting part does not end here he has also taken the steps for getting the farmers ahead by giving great innovative margin profits to the farmers of the state promoting Indian Produce.Mr.Sushanth’s work has not only empowered local farmers but also set new benchmarks in sustainable agri-business.His entrepreneurial spirit and passion for excellence make him a true inspiration in many fields. Let us all applause his dedication and extend our heartfelt appreciation for his contribution to the nations’ economic and agricultural growth.
Religious
ಕಾರ್ಕಳ : ಸಮಾಜ ಬಾಂಧವರ ಮತ್ತು ಭಕ್ತಾಭಿಮಾನಿಗಳ ಸಹಕಾರದಲ್ಲಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ನೀಡಿರುವ ಸ್ವರ್ಣದಲ್ಲಿ ಶ್ರೀ ಕಾಳಿಕಾಂಬಾ ದೇವಿಗೆ ಮಾಡಿರುವ ಪಾದವನ್ನು ಶ್ರೀ ಮನ್ಮಹಾರಥೋತ್ಸವ ಪ್ರಯುಕ್ತ ಮೇ 9ರಂದು ದೇವಸ್ಥಾನದಲ್ಲಿ ನಡೆದ ಧ್ವಜಾರೋಹಣದ ಸಂದರ್ಭ ಸಮರ್ಪಿಸಲಾಯಿತು.
17 ಲಕ್ಷ ರೂ. ವೆಚ್ಚದಲ್ಲಿ ರಚಿಸಲಾದ ಸ್ವರ್ಣ ಪಾದವನ್ನು ಆಡಳಿತ ಮೊಕ್ತೇಸರರು, ಜೊತೆ ಮೊಕ್ತೇಸರರು, ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಬ್ರಹ್ಮಶ್ರೀ ಉಮೇಶ್ ತಂತ್ರಿಗಳ ಪ್ರಾರ್ಥನೆಯೊಂದಿಗೆ ದೇವಿಗೆ ಸಮರ್ಪಿಸಿದರು. ಈ ಸಂದರ್ಭ ಸಮಾಜ ಬಾಂಧವರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಮಹೋತ್ಸವ ಮತ್ತು ಶ್ರೀ ಮನ್ಮಹಾರಥೋತ್ಸವವು ಮೇ 8ರಿಂದ 16ರ ತನಕ ನಡೆಯಲಿದೆ. ಪ್ರತಿನಿತ್ಯವೂ ಧಾರ್ಮಿಕ ವಿಧಿ ವಿಧಾನ ನಡೆಯಲಿದ್ದು, ಇಂದು ಧ್ವಜಾರೋಹಣ ನೆರವೇರಲಿದೆ. ಮೇ 12ರಂದು ರಾತ್ರಿ 9.30 ಗಂಟೆಗೆ ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ. ಮೇ 14 ರಂದು ಮಧ್ಯಾಹ್ನ ಮಹಾಪೂಜೆ, ದೈವಗಳಿಗೆ ವಿಶೇಷ ತಂಬಿಲ ಸೇವೆ, ಸಂಜೆ 5 ಗಂಟೆಗೆ ಭಂಡಾರ ಇಳಿದು ರಕ್ತೇಶ್ವರಿ, ಕಲ್ಕುಡ, ಪಂಜುರ್ಲಿ ದೈವಗಳಿಗೆ ನೇಮೋತ್ಸವ, ಮೇ 15 ರಂದು ಸಂಜೆ 5 ಗಂಟೆಗೆ ಭಂಡಾರ ಇಳಿದು ವ್ಯಾಘ್ರ ಚಾಮುಂಡಿ ದೈವದ ನೇಮೋತ್ಸವ ಜರುಗಲಿದೆ. ಮೇ 16 ರಂದು ಬೆಳಗ್ಗೆ ಸಂಪ್ರೋಕ್ಷಣೆ ನಡೆಯಲಿದೆ.
ಉಡುಪಿ : ಕನ್ನಡ ಚಲನಚಿತ್ರ ರಂಗದ ನಟರಾದ ಶ್ರೀಮುರಳಿ, ಅಜಯ್ರಾವ್ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಅನಂತರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಆಶೀರ್ವಾದ ಮಂತ್ರಾಕ್ಷತೆಯೊಂದಿಗೆ ಕೋಟಿಗೀತಾಲೇಖನ ಯಜ್ಞದ ದೀಕ್ಷೆ ಪಡೆದರು. ಈ ಸಂದರ್ಭ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ಮಠದ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ : ಭಾರತದ ಸೈನಿಕರ ಶೌರ್ಯ ಪರಾಕ್ರಮ ಮತ್ತು ಸಾತ್ವಿಕ ನಿಷ್ಠೆಯನ್ನು ಮೆಚ್ಚುತ್ತೇವೆ. ಅವರ ಈ ಸಾಧನೆಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.

ಸೈನಿಕರ ಒಂದು ಉದ್ದೇಶ, ಕಾರ್ಯ ಸಫಲವಾಗಿದ್ದು ಅದಕ್ಕಾಗಿ ಶ್ರೀಕೃಷ್ಣಮುಖ್ಯಪ್ರಾಣರಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯಲಿ. ದೇಶ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಶ್ರೀಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಉಡುಪಿ : ಉಗ್ರರ ಅಡಗುತಾಣದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲಾದ್ಯಂತ ಸಂಭ್ರಮಾಚರಣೆ ನಡೆದಿದೆ.
ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಜತೆಗೆ ಮನೆ ಮನೆಗಳಲ್ಲೂ ಪೂಜೆ, ಪ್ರಾರ್ಥನೆ, ಸಿಹಿ ವಿತರಣೆ, ಸಂಘ ಸಂಸ್ಥೆಗಳಿಂದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ ಹೀಗೆ ಭಾರತೀಯ ಸೇನೆಯ ಸಾಹಸಕ್ಕೆ ಇಡೀ ಜಿಲ್ಲೆ ಸಂಭ್ರಮಿಸಿದೆ. ದೇಶ ಸುರಕ್ಷಿತವಾಗಿರಲಿ, ಯೋಧರಿಗೆ ಒಳಿತಾಗಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀ ಕೃಷ್ಣಮಠದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಭಾರತೀಯ ಸೈನಿಕರ ಶೌರ್ಯ, ಪರಾಕ್ರಮ ಹಾಗೂ ತಾತ್ವಿಕ ನಿಷ್ಠೆಯನ್ನು ಮೆಚ್ಚಿಕೊಂಡಿದ್ದೇವೆ. ಭಾರತೀಯ ಸೇನೆಯ ಸಾಧನೆ ಅಭಿನಂದನಾರ್ಹ. ಸೈನಿಕರ ಉದ್ದೇಶ ಸಫಲವಾಗಿ ಎಲ್ಲವೂ ಶಾಂತಿಯುವಾಗಿ ನಡೆದು, ಎಲ್ಲರಿಗೂ ಶುಭವಾಗಲಿ ಮತ್ತು ದೇಶ ರಕ್ಷಣೆಯಾಗಲಿ ಎಂಬಂತೆ ಶ್ರೀ ಕೃಷ್ಣ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.
ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮೂಲಕ ದೇಶದ ಹೆಮ್ಮೆ ಹಾಗೂ ಗೌರವ ಹೆಚ್ಚಿಸಿ ರುವ ಭಾರತೀಯ ಸೇನೆಯ ಸೈನಿಕರ ಶ್ರೇಯಸ್ಸಿಗಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ತುಪ್ಪದ ದೀಪ ಬೆಳಗಿಸಲಾಯಿತು.
ಕಾರ್ಕಳ : ಶ್ರೀ ಕ್ಷೇತ್ರ ಹಿರಿಯoಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮರಾಠ ಸಮುದಾಯದ ವಟುಗಳಿಗೆ ಬ್ರಹ್ಮೋಪದೇಶ ಕ್ಷೇತ್ರದ ತಂತ್ರಿಗಳವರಾದ ಶ್ರೀ ಬಿ. ಸುಬ್ರಹ್ಮಣ್ಯ ತಂತ್ರಿ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರಗಿತು.
40 ವಟುಗಳಿಗೆ ಮರಾಠ ಸಂಸ್ಕೃತಿಯ ವಿಧಿ ವಿಧಾನಗಳ ಪ್ರಕಾರ ಬ್ರಹ್ಮೋಪದೇಶವು ಸಾಮೂಹಿಕವಾಗಿ ನೆರವೇರಿತು. ದೇವಳದ ಆಡಳಿತ ಮಂಡಳಿ ಮತ್ತು ಬ್ರಹ್ಮೋಪದೇಶ ಸಮಿತಿಯ ನೇತೃತ್ವದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ 1200 ಜನ ಭಾಗವಹಿಸಿದ್ದರು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಸಂಘ ಕಾರ್ಕಳ ಹೆಬ್ರಿ ಇದರ ಸಂಚಾಲಕರಾದ ವಿಜಯ ಶೆಟ್ಟಿ, ಅತ್ತೂರು ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಸಂತೋಷ್ ಡಿಸಿಲ್ವ, ರಮೇಶ್ ರಾವ್ ಬೆಂಗಳೂರು ಭಾಗವಹಿಸಿದ್ದರು. ಅತಿಥಿ ಗಣ್ಯರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಶುಭನುಡಿಗಳನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಡಳಿತ ಮೊಕ್ತೇಸರ ಗಿರೀಶ್ ರಾವ್ ಮಾತನಾಡಿ ಮರಾಠ ಸಮಾಜದ ಸಂಸ್ಕಾರದ ಸಂಸ್ಕೃತಿಯೇ ಬ್ರಹ್ಮೋಪದೇಶ. ಈ ಸಂಸ್ಕಾರವನ್ನು ಯುವ ಪೀಳಿಗೆಗೆ ದೇವಸ್ಥಾನದ ವತಿಯಿಂದ ಹಮ್ಮಿಕೊಂಡು ನಾವೆಲ್ಲ ಪುನೀತರಾಗಿದ್ದೇವೆ ಎಂದರು. ಈ ಪುಣ್ಯ ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸಿದರು. ಬ್ರಹ್ಮೋಪದೇಶ ಸಮಿತಿಯ ಅಧ್ಯಕ್ಷರಾದ ರಾಜಾಜಿರಾವ್ ಸ್ವಾಗತಿಸಿ ಕಾರ್ಯದರ್ಶಿ ಪ್ರಕಾಶ್ ರಾವ್ ಸೆಪ್ಟೆಕರ್ ಧನ್ಯವಾದ ಸಮರ್ಪಿಸಿದರು.
ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಪಾದರ ಆಹ್ವಾನದ ಮೇರೆಗೆ ಉಡುಪಿ ಶ್ರೀಕೃಷ್ಣದೇವರ ಮಠದ ಚಂದ್ರ ಶಾಲೆಯಲ್ಲಿ ಸೋಸಲೇ ಶ್ರೀ ವ್ಯಾಸರಾಜ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಸಂಸ್ಥಾನ ಪೂಜೆ ನೆರವೇರಿಸಿದರು.
ಪರ್ಯಾಯ ಪುತ್ತಿಗೆ ಉಭಯ ಮಠಾಧೀಶರು ದೇವರ ದರ್ಶನ ಮಾಡಿದರು. ಪೂಜ್ಯ ವ್ಯಾಸರಾಜ ಸ್ವಾಮಿಗಳ ಪರಸ್ಪರ ಪ್ರಸಾದಗಳನ್ನು ಸ್ವೀಕರಿಸಿದರು. ಶ್ರೀಗಳನ್ನು ಪಟ್ಟದ ದೇವರ ಸಹಿತ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು ಮತ್ತು ಪರ್ಯಾಯ ಮಠದಿಂದ ವಿಶೇಷ ಗೌರವಾದರಗಳನ್ನು ಸಲ್ಲಿಸಲಾಯಿತು.
ಮೇ 15ರಿಂದ 17ರವರೆಗೆ ಸುಕ್ಷೇತ್ರ ಗುರುಪುರ ಶ್ರೀಗುರುಮಹಾಕಾಲೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶ ಸಂಭ್ರಮ
ಉಡುಪಿ : ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿಗುತ್ತುನಲ್ಲಿ ನಿರ್ಮಾಣಗೊಂಡಿರುವ ಶ್ರೀಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಸಂಭ್ರಮ ಮೇ. 15ರಿಂದ 17 ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶ ಸಂಭ್ರಮ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ಕುಂಜಾಡಿ ಬೀಡು ನಳಿನ್ ಕುಮಾರ್ ಕಟೀಲು ತಿಳಿಸಿದರು.
ಈ ಬಗ್ಗೆ ಸೋಮವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವೇದ ಕೃಷಿಕ ಬ್ರಹ್ಮಋಷಿ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪತ್ರಿಷ್ಠಾ ಬ್ರಹ್ಮಕಲಶ ನೆರವೇರಲಿದೆ. ಮೇ 16 ರಂದು ಸಂಜೆ ನಡೆಯಲಿರುವ ಪಂಚಕಲ್ಯಾಣಯುಕ್ತ ಬ್ರಹ್ಮಕಲಶಾಭೀಷೇಕ ಕಾರ್ಯದಲ್ಲಿ ಜಾತಿ, ಪಂಗಡ, ಲಿಂಗಭೇದ ಇಲ್ಲದೇ ಭಾಗವಹಿಸಬಹುದಾಗಿದೆ. ದೇವರ ಬೃಹತ್ ಏಕಶಿಲಾ ಮೂರ್ತಿಗೆ ಪಂಚಕಲ್ಯಾಣ ಸ್ವರೂಪದ ಕಲಶಾಭೀಷೇಕವನ್ನು ಸಮರ್ಪಿಸಬಹುದಾಗಿದೆ ಎಂದರು.
ಮೇ 17 ರಂದು ಸಂಜೆ 6 ಗಂಟೆಗೆ ಶಿವಾನುಭವ ಮಂಟಪದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ವೇದ ಕೃಷಿಕ ಬ್ರಹ್ಮಋಷಿ ಕೆ.ಎಸ್. ನಿತ್ಯಾನಂದ ಸಾನಿಧ್ಯ ವಹಿಸಲಿದ್ದಾರೆ. ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಪಾವಂಜೆ ಕ್ಷೇತ್ರದ ಯಾಜಿ ನಿರಂಜನ್ ಭಟ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗೋಳಿದಡಿ ಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ್ ಶೆಟ್ಟಿ, ಅಂತರಾಷ್ಟ್ರೀಯ ಕ್ರೀಡಾಪಟು, ಚಲನಚಿತ್ರ ನಟ, ಸ್ವಾಗತ ಸಮಿತಿ ಅಧ್ಯಕ್ಷ ರೋಹಿತ್ ಕುಮಾರ್ ಕಟೀಲ್, ಪ್ರಮುಖರಾದ ಚಂದ್ರಹಾಸ್ ಆಮೀನ್, ಸುಜಾತ ಸದಾಶಿವ, ದಿವಾಕರ್ ಉಪಸ್ಥಿತರಿದ್ದರು.
ಉಡುಪಿ ಕಡಲತೀರದಲ್ಲಿ ಪೆಹಲ್ಗಾಮ್ ಹಿಂದೂ ನರಮೇಧದ ಮೃತರ ಆತ್ಮಕ್ಕೆ ಶಾಂತಿ ಕೋರಿ ಅಪರಕ್ರಿಯೆ
ಉಡುಪಿ : ಕಾಶ್ಮೀರದ ಪೆಹಲ್ಗಾಮ್ನಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ ಮೃತಪಟ್ಟವರ ಆತ್ಮದ ಸದ್ಗತಿಗಾಗಿ ಉಡುಪಿಯ ಕಡಲತೀರದಲ್ಲಿ ವಿಶೇಷ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಅಭಿನವ ಭಾರತ ಸೊಸೈಟಿ ಸಂಘಟನೆಯ ಆಶ್ರಯದಲ್ಲಿ ನಡೆದ ಈ ಅಪರಕ್ರಿಯೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ ತರ್ಪಣ ಹೋಮವನ್ನು ಆಯೋಜಿಸಲಾಗಿತ್ತು.
26 ಮೃತ ಕುಟುಂಬಗಳ ಪರವಾಗಿ 26 ಯುವಕರು ಈ ತರ್ಪಣ ಕಾರ್ಯದಲ್ಲಿ ಪಾಲ್ಗೊಂಡರು. ಬ್ರಹ್ಮಶ್ರೀ ವೇದಮೂರ್ತಿ ವಿದ್ವಾನ್ ಸೂರಲು ತಂತ್ರಿಗಳ ನೇತೃತ್ವದಲ್ಲಿ ಹನೂಮಾನ್ ವಿಠೋಭ ರುಕುಮಾಯಿ ಮಂದಿರದ ಬಳಿಯ ಕಡಲತೀರದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಗೀತಾ ತ್ರಿಷ್ಟುಪ್ ಹೋಮವನ್ನು ನೆರವೇರಿಸಿ ಪೂರ್ಣಾಹುತಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪವಿತ್ರ ಮಂತ್ರಗಳ ಸಹಸ್ರ ಪಠಣ ನಡೆಯಿತು. ನರಮೇಧದಲ್ಲಿ ಬಲಿಯಾದ ಹಿಂದೂ ಕುಟುಂಬಗಳ ಜೊತೆ ಹಿಂದೂ ಸಮಾಜ ಸದಾ ನಿಂತಿದೆ ಎಂಬುದನ್ನು ಸಾರುವ ಈ ಕಾರ್ಯಕ್ರಮದಲ್ಲಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಲಾಯಿತು. ಅಲ್ಲದೆ, ದುಃಖದಲ್ಲಿರುವ ಕುಟುಂಬಗಳಿಗೆ ನೋವನ್ನು ಸಹಿಸುವ ಶಕ್ತಿಯನ್ನು ನೀಡುವಂತೆ ಭಗವಂತನಲ್ಲಿ ಮೊರೆಯಿಡಲಾಯಿತು.
ಈ ಕುರಿತು ಮಾತನಾಡಿದ ಬ್ರಹ್ಮಶ್ರೀ ವೇದಮೂರ್ತಿ ವಿದ್ವಾನ್ ಸೂರಲು ತಂತ್ರಿಗಳು, “ಪವಿತ್ರ ನದಿಗಳ ಸಂಗಮವಾದ ಈ ಸಮುದ್ರ ತೀರದಲ್ಲಿ ಹೋಮಗಳನ್ನು ನೆರವೇರಿಸಲಾಗಿದೆ. ಮೃತಪಟ್ಟ ಆತ್ಮಗಳಿಗೆ ಸದ್ಗತಿ ದೊರೆಯಲಿ ಮತ್ತು ಅವರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದು ತಿಳಿಸಿದರು.
ಅಭಿನವ ಭಾರತ ಸೊಸೈಟಿಯ ಈ ಕಾರ್ಯಕ್ರಮವು ಪೆಹಲ್ಗಾಮ್ ನರಮೇಧದ ಸಂತ್ರಸ್ತರಿಗೆ ಹಿಂದೂ ಸಮಾಜದ ಬೆಂಬಲ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸುವ ಮಹತ್ವದ ಕಾರ್ಯಕ್ರಮವಾಗಿತ್ತು.
ಉಡುಪಿ : ಉಡುಪಿಯಲ್ಲಿ ರಾಘವೇಂದ್ರ ಮಠದ ಯಾತ್ರಿಕರ ವಸತಿ ನಿಲಯದ ಶಂಕುಸ್ಥಾಪನೆಗಾಗಿ ಆಗಮಿಸಿದ ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದರನ್ನು ಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಪೂರ್ಣಕುಂಭದೊಂದಿಗೆ ಸ್ವಾಗತಿಸಿಲಾಯಿತು. ಮಂತ್ರಾಲಯ ಶ್ರೀಗಳು ಕೃಷ್ಣನ ದರ್ಶನ ಪಡೆದರು.
ಈ ಸಂದರ್ಭ ಗೀತಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಂತ್ರಾಲಯ ಶ್ರೀಗಳಿಗೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಮತ್ತು ಕಿರಿಯಪಟ್ಟ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಸಾಂಪ್ರದಾಯಿಕ ಗಂಧೋಪಚಾರ ಮಾಲಿಕೆ ಮಂಗಳಾರತಿ ಮಾಡಿ ಮಠದ ಗೌರವ ಸಲ್ಲಿಸಿದರು. ಶ್ರೀ ಸುಬುದೇಂದ್ರ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಬಳಿಕ ಮಂತ್ರಾಲಯ ಮಠದ ವತಿಯಿಂದ ಉಡುಪಿ ರಥಬೀದಿ ಪರಿಸರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿಕರ ನೂತನ ವಸತಿ ನಿಲಯಕ್ಕೆ ಮಂತ್ರಾಲಯ ಶ್ರೀಪಾದರ ಅಪೇಕ್ಷೆಯಂತೆ ಪರ್ಯಾಯ ಪುತ್ತಿಗೆ ಹಿರಿಯ ಶ್ರೀಪಾದರು ತಮ್ಮ ಶಿಷ್ಯರೊಂದಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.