ಉಡುಪಿ : ಹಿಂದೂ ಧರ್ಮೀಯರು ಶ್ರದ್ಧಾಭಕ್ತಿಯಿಂದ ಆಚರಣೆ ಮಾಡುವ ಬೆಳಕಿನ ಹಬ್ಬದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯ ಇದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ತಿಳಿಸಿದರು.
ಅವರು ಮೂಡುಬೆಟ್ಟು ಶ್ರೀ ಸಾಯಿಬಾಬಾ ಮಂದಿರದಲ್ಲಿ ಅಕ್ಟೋಬರ್ 27 ತಾರೀಕಿಗೆ ಶಬರಿ ಮಲೆ ಅಯ್ಯಪ್ಪ ಸಮಾಜಂ ಉಡುಪಿ ಜಿಲ್ಲೆ, ಶಬರಿ ಮಲೆ ಅಯ್ಯಪ್ಪ ಸಮಾಜಂ ಉಡುಪಿ ಮಹಿಳಾ ಘಟಕ, ಎ. ಪಿ. ಎಮ್. ಸಿ. ರಕ್ಷಣಾ ಸಮಿತಿ, ಉಡುಪಿ ಹಾಗೂ ಮೂಡುಬೆಟ್ಟು ಸಾಯಿಬಾಬಾ ಮಂದಿರದ ಸಹಭಾಗಿತ್ವದಲ್ಲಿ ನಡೆದ ಗೂಡುದೀಪ ಸ್ಪರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ದೀಪಾವಳಿ ಹಬ್ಬವನ್ನು ನಮ್ಮ ಹಿರಿಯೆರು ಬಹಳ ಶ್ರದ್ಧಾಭಕ್ತಿಯಿಂದ ಸಂಪ್ರದಾಯಬದ್ಧವಾಗಿ ಆಚರಿಸುತ್ತಿದ್ದರು. ಆದರೆ ಈಗಿನ ಯುವಪೀಳೀಗೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗಿ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಮರೆಯುತ್ತಿದ್ದಾರೆ. ಅದನ್ನು ಈ ಗೂಡುದೀಪ ಸ್ಪರ್ಧೆಯ ಮುಖೇನ ಸಂಪ್ರದಾಯದ ಅರಿವು ಮೂಡಿಸುವ ಈ ಸಂಘಟಕರ ಕೆಲಸವನ್ನು ಮೆಚ್ಚುವಂತದ್ದು ಎಂದು ಆಯೋಜಕರನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ‘ಶಬರಿಮಲೆ ಅಯ್ಯಪ್ಪ ಸಮಾಜಂ’ನ ಗೌರವಾಧ್ಯಕ್ಷರಾದ ಶ್ರೀ ಹರಿಯಪ್ಪ ಕೋಟ್ಯಾನ್, ಶ್ರೀ ಮೂಡುಬೆಟ್ಟು ತೋಟದಮನೆ ಸಾಯಿಬಾಬಾ ಮಂದಿರದ ಧರ್ಮದರ್ಶಿಗಳಾದ ಶ್ರೀ ದಿವಾಕರ ಶೆಟ್ಟಿ, ಉಡುಪಿ ನಗರಸಭಾಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಸಿರಿತುಳುವ ಚಾವಡಿ ಉಡುಪಿಯ ಕಾರ್ಯಾಧ್ಯಕ್ಷರಾದ ಶ್ರೀ ಈಶ್ವರ್ ಶೆಟ್ಟಿ ಚಿಟ್ಪಾಡಿ ಮಾತನಾಡಿದರು.
ಕಾರ್ಯಕ್ರಮದ ಸಂಯೋಜಕರಾದ ಉಡುಪಿ ನಗರಸಭಾ ಸದಸ್ಯ ಶ್ರೀ ವಿಜಯ ಕೊಡವೂರು ಪ್ರಾಸ್ತವಿಕ ಮಾತನಾಡಿದರು. ಶಬರಿಮಲೆ ಅಯ್ಯಪ್ಪ ಸಮಾಜಂ ನ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಮೆಂಡನ್ ಸ್ವಾಗತ ಮಾಡಿದರು, ಕಾರ್ಯದರ್ಶಿ ರಂಜಿತ್ ಶೆಟ್ಟಿ ವಂದಿಸಿದರು. ಜ್ಯೋತಿ ಎಸ್. ದೇವಾಡಿಗ ಪ್ರಾರ್ಥನೆ ಮಾಡಿದರು. ಕನ್ನಡ ಉಪನ್ಯಾಸಕರಾದ ರಾಮಾಂಜಿ ಉಡುಪಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಶಬರಿಮಲೆ ಅಯ್ಯಪ್ಪ ಸಮಾಜಂ ನ ಉಪಾಧ್ಯಕ್ಷರಾದ ಶ್ರೀ ಗೋಪಾಲ್ ಗುರುಸ್ವಾಮಿ, ಎ. ಪಿ. ಎಮ್. ಸಿ. ದ ವಿರೂಪಾಕ್ಷ, ಸಮಾಜಸೇವಕೆರಾದ ಶ್ರೀ ಸುಭಾಷಿತ್, ಶಬರಿಮಲೆ ಅಯ್ಯಪ್ಪ ಸಮಾಜಂ ಕಾಪು ವಲಯಾಧ್ಯಕ್ಷರಾದ ಶ್ರೀ ರಘರಾಮ ಶೆಟ್ಟಿ, ಮಾಧ್ಯಮ ಸಂಚಾಲಕಿ ಯಶೋದ ಕೇಶವ್ ಉಪಸ್ಥಿತರಿದ್ದರು.
ಗೂಡುದೀಪ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ವಿಜೇತರಿಗೆ ಸಮಾರೋಪದಲ್ಲಿ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಯಿತು.
			        


			        
                        
                        

                        


                        
                        
                        

                        
                        
                        


                        
