ಉಡುಪಿ : ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.
ಮಂಗಳೂರು : ಹಲವಾರು ವರ್ಷಗಳ ಹಿಂದೆಯೇ ತಮ್ಮ ಮನೆ ಬಿಟ್ಟು ಮಾನಸಿಕ ಅಸ್ವಸ್ಥರಾಗಿ ಬಳಿಕ ಪುನರ್ವಸತಿ ಕೇಂದ್ರದವರಿಂದ ರಕ್ಷಿಸಲ್ಪಟ್ಟಿರುವ 36 ಮಂದಿ ತಮ್ಮ ಮನೆ ತಲುಪಲು ಆಧಾರ್ ನೆರವಾಗಿದೆ.
ಮಂಜೇಶ್ವರದಲ್ಲಿರುವ ಸ್ನೇಹಾಲಯ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ 350 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ವಿಳಾಸ ತಿಳಿದಿರಲಿಲ್ಲ. ಇತ್ತೀಚೆಗೆ ಸ್ನೇಹಾಲಯ ಮತ್ತು ಮಂಗಳೂರಿನ ಆಧಾರ್ ಸೇವಾ ಕೇಂದ್ರದ ಜಂಟಿ ಸಹಯೋಗದಲ್ಲಿ ಸ್ನೇಹಾಲಯದಲ್ಲಿ ಆಧಾರ್ ಶಿಬಿರ ಏರ್ಪಡಿಸಲಾಗಿತ್ತು. ಆ ವೇಳೆ ಬೆರಳಚ್ಚು ಪರಿಶೀಲಿಸುವಾಗ 36 ಮಂದಿ ಈ ಹಿಂದೆ ಆಧಾರ್ ಕಾರ್ಡ್ ಮಾಡಿರುವುದು ಪತ್ತೆಯಾಗಿದೆ. ಆ ಮೂಲಕ ವಿಳಾಸ ಪತ್ತೆ ಹಚ್ಚಿ ಮನೆಯವರನ್ನು ಸಂಪರ್ಕಿಸಲಾಗಿದ್ದು, ಎಲ್ಲರನ್ನೂ ಅವರವರ ಮನೆಗಳಿಗೆ ತಲುಪಿಸಲಾಗಿದೆ. ಇದೇ ರೀತಿ ಆಧಾರ್ನಿಂದಾಗಿ ಇತ್ತೀಚೆಗೆ ಸ್ನೇಹಾಲಯದಿಂದ ಬಳ್ಳಾರಿಯ ಓರ್ವ ವ್ಯಕ್ತಿ ಮನೆ ಸೇರಿದ್ದಾರೆ.
ಗಾಂಜಾ ಸೇವಿಸಿ ಮಾನಸಿಕ ಅಸ್ವಸ್ಥನಾಗಿದ್ದ!
ಬಿಹಾರದ ಮಂಟು ಸಿಂಗ್ ಎಂಬಾತ 2020ರಲ್ಲಿ ಫರಂಗಿಪೇಟೆ ಬಳಿ ಬಸ್ ನಿಲ್ದಾಣದಲ್ಲಿ ಮಲಗಿದ್ದಾಗ ಅತನನ್ನು ರಕ್ಷಿಸಿ ಸ್ನೇಹಾಲಯಕ್ಕೆ ದಾಖಲಿಸಲಾಗಿತ್ತು. ಆತ ಕಿವುಡ ಮತ್ತು ಮೂಕನಾಗಿದ್ದ. ಆತನ ಹೆಸರು ಕೂಡ ತಿಳಿದಿರಲಿಲ್ಲ. ಇತ್ತೀಚೆಗೆ ಆಧಾರ್ ಶಿಬಿರ ನಡೆಸುವಾಗ ಆತನ ವಿಳಾಸ ಪತ್ತೆಯಾಗಿತ್ತು. ಆತ ಬಿಹಾರದ ಸಿಮಾರಿಯಾದವನಾಗಿದ್ದು, ಕೃಷಿಕರ ಮನೆಯವನಾಗಿದ್ದ. ಜೆಸಿಬಿ ಚಾಲಕನಾಗಿಯೂ ಕೆಲಸ ಮಾಡುತ್ತಿದ್ದ. ಗಾಂಜಾ ಸೇವನೆ ಪರಿಣಾಮವಾಗಿ ಮಾನಸಿಕವಾಗಿ ಅಸ್ವಸ್ಥನಾಗಿ ಒಂದು ದಿನ ಮನೆಯಿಂದ ನಾಪತ್ತೆಯಾಗಿದ್ದ ಎಂಬುದು ಗೊತ್ತಾಗಿದೆ. ಆತ ಈಗ ಗುಣಮುಖನಾಗಿದ್ದು, ಶನಿವಾರ ಆತನ ಕುಟುಂಬಸ್ಥರ ಜತೆ ಆತನ ಮನೆಗೆ ಕಳುಹಿಸಿಕೊಡಲಾಗಿದೆ.
ಉಡುಪಿ : ಗಾಳಿ, ಮಳೆಯನ್ನೂ ಲೆಕ್ಕಿಸದೆ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ, ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಗದ್ದೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ ವಿಶಿಷ್ಟ ಕಾರ್ಯಕ್ರಮ ಉದ್ಯಾವರದಲ್ಲಿ ನಡೆಯಿತು.
‘ರೈತ ಮಿತ್ರ’ ಹೆಸರಿನ ಕಾರ್ಯಕ್ರಮದ ಮೂಲಕ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷರಾದ ರೋ. ಪ್ರಸಾದ್ ಶೆಟ್ಟಿರವರ ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ 15 ಮಂದಿ ಭತ್ತ ಬಿತ್ತನೆ ಮಾಡಿದ ರೈತರನ್ನು ರೋಟರಿ ಕ್ಲಬ್ ಉದ್ಯಾವರದ ಅಧ್ಯಕ್ಷ ರೋ. ಜೀವನ್ ಡಿಸೋಜ ಹಾಗೂ ಸರ್ವ ಸದಸ್ಯರು ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಬಳಿಕ ರೈತರ ಕೆಲಸಗಳಿಗೆ ಕ್ಲಬ್ಬಿನ ಸದಸ್ಯರು ಸಾಥ್ ನೀಡಿದರು.
ಪಡುಬಿದ್ರೆ : M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕಕ್ಕೆ ಶಾಸಕರೊಂದಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಭೇಟಿ ನೀಡಿದರು.
M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕದಲ್ಲಿ ಸ್ಥಳೀಯವಾಗಿ ಉಂಟಾಗುತ್ತಿರುವ ಮಾಲಿನ್ಯ ಸಮಸ್ಯೆ ಸಲುವಾಗಿ ಭೇಟಿ ನೀಡಿ ಸಂಸ್ಥೆಯೊಂದಿಗೆ ಚರ್ಚಿಸಿದರು.
M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಮಾಲಿನ್ಯ ನಿಯಂತ್ರಿಸುವಲ್ಲಿ ಕೆಲವೊಂದು ತಾಂತ್ರಿಕ ದೋಷಗಳಿದ್ದು ಅವುಗಳನ್ನು ಸರಿಪಡಿಸಿಕೊಂಡು ಸ್ಥಳೀಯರಿಗೆ ಸಮಸ್ಯೆ ಆಗದ ರೀತಿಯಲ್ಲಿ ಮುಂದುವರೆಯಬೇಕು ಒಂದು ತಿಂಗಳ ಹಿಂದೆ ಈ ಬಗ್ಗೆ ತಮಗೆ ಸೂಚನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡದಿದ್ದಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಜೊತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾದ ರಾಯೇಶ್ ಪೈ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಸ್ಥಳೀಯರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನಾಗೇಶ್ ಭಟ್, ಸಹಾಯಕ ಆಯುಕ್ತರಾದ ಮಹೇಶ್ ಚಂದ್ರ, ಕಾಪು ತಹಶೀಲ್ದಾರರಾದ ಪ್ರತೀಭಾ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ್ ನಾಯಕ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಪೊಲ್ಲ್ಯೂಷನ್ ಬೋರ್ಡ್ ಅಧಿಕಾರಿಗಳು, M11 ಕಂಪೆನಿಯ ಅಧಿಕಾರಿಗಳು, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ [ಮಾಹೆ] ಯ ವಿವಿಧ ವಿಭಾಗಗಳಲ್ಲಿ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳಿಗೆ ‘ಮಣಿಪಾಲ ವಿಹಾರ’ ಅಥವಾ ‘ಮಣಿಪಾಲ ಗಮ್ಯ’ [=ಡೆಸ್ಟಿನೇಶನ್ ಮಣಿಪಾಲ್] ಎಂಬ ವಿಶಿಷ್ಟ ‘ಕಾಲೇಜು ಆವರಣ ಪ್ರವಾಸ’ [ಕ್ಯಾಂಪಸ್ ಟೂರ್] ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದು ಮಾಹೆಯ ಕ್ಯಾಂಪಸ್ಸಿನ ಕುರಿತು ಪರಿಚಯಾತ್ಮಕ ಪ್ರವಾಸವಾಗುವುದರ ಜೊತೆಗೆಯೇ ವಿದ್ಯಾರ್ಥಿಗಳಿಗೆ ಮತ್ತು ಹೆತ್ತವರಿಗೆ ಮಣಿಪಾಲದ ದಿನಚರಿಯನ್ನು ಸನಿಹದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ.
ಸಾಂಪ್ರದಾಯಿಕ ಕ್ಯಾಂಪಸ್ ಭೇಟಿಗಳಿಗಿಂತ ಭಿನ್ನವಾಗಿ, ಈ ಡೆಸ್ಟಿನೇಶನ್ ಮಣಿಪಾಲದ ಕ್ಯಾಂಪಸ್ ಪ್ರವಾಸಗಳು ತಮ್ಮ ವೈಯಕ್ತಿಕ ಅನುಭವಗಳು ಮತ್ತು ಒಳನೋಟಗಳನ್ನು ಹಂಚಿಕೊಳ್ಳುವ ಪ್ರಸ್ತುತ ವಿದ್ಯಾರ್ಥಿಗಳಿಂದ ಮಾರ್ಗದರ್ಶಿಸಲ್ಪಡುತ್ತವೆ. ಈ ಪೀರ್-ಟು-ಪೀರ್ ವಿಧಾನವು ನಿರೀಕ್ಷಿತ ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಲು ಮತ್ತು ನಿಜವಾದ ಉತ್ತರಗಳನ್ನು ಪಡೆಯಲು ಅನುಮತಿಸುತ್ತದೆ, ಅವರ ಭವಿಷ್ಯದ ಬಗ್ಗೆ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ಮಾಡಲು ಅವರಿಗೆ ಸಹಾಯ ಮಾಡುತ್ತದೆ.
ಮಣಿಪಾಲದ ಕ್ಯಾಂಪಸ್ ಬದುಕನ್ನು ಸಂಭ್ರಮಿಸುವಂಥ ‘ಕ್ಯಾಂಪಸ್ ಟೂರ್’ನ್ನು ಆಯೋಜಿಸುವ ಉದ್ದೇಶದ ಬಗ್ಗೆ ಮಾಹೆಯ ಸಹಉಪಕುಲಪತಿಗಳಾದ ಲೆ. ಜ. [ಡಾ.] ಎಂ. ಡಿ. ಎಂ.ಡಿ. ವೆಂಕಟೇಶ್, ವಿಎಸ್ಎಂ (ನಿವೃತ್ತ) ಅವರು ಹೇಳುವುದು ಹೀಗೆ ‘ನಮ್ಮಕ್ಯಾಂಪಸ್ ಪ್ರವಾಸವು ಕೇವಲ ವೀಕ್ಷಣೆಯ ಚಟುವಟಿಕೆಯಲ್ಲ, ಇಲ್ಲಿನ ಶೈಕ್ಷಣಿಕ ಸಂಸ್ಕೃತಿ, ಸಾಮಾಜಿಕ ಪರಿಸರದ ಜೊತೆಗೆ ವಿದ್ಯಾರ್ಥಿತು ತನ್ನ ಅನುಭವವನ್ನು ಹೆಚ್ಚಿಸಿಕೊಳ್ಳುವ ವಿಶಿಷ್ಟ ಅವಕಾಶವಿದು. ಮಾಹೆಯಲ್ಲಿ ವಿವಿಧ ವಿಭಾಗಗಳಿದ್ದರೂ ಡೆಸ್ಟಿನೇಶನ್ ಮಣಿಪಾಲ್ ಕ್ಯಾಂಪಸ್ ಪ್ರವಾಸ ಕಾರ್ಯಕ್ರಮದ ಮೂಲಕ ವಿಭಾಗ-ವಿಭಾಗಗಳ ನಡುವೆ ಸಂಬಂಧದ ಎಳೆಯನ್ನು ಜೋಡಿಸುವುದು ಈ ಕಾರ್ಯಕ್ರಮದ ಒಂದು ಉದ್ದೇಶ. ಹೊಸದಾಗಿ ಮಾಹೆ ಕ್ಯಾಂಪಸ್ಗೆ ಬರುವ ವಿದ್ಯಾರ್ಥಿಗಳು ಅತ್ಯಾಧುನಿಕ ಎಕ್ಸ್ಪೀರಿಯನ್ಸ್ ಥಿಯೇಟರ್, ಫುಡ್ ಕೋರ್ಟ್ಸ್, ಮರೇನಾ ಕ್ರೀಡಾ ಸಂಕೀರ್ಣ [ಮರೇನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್], ಸುಸಜ್ಜಿತ ವಿದ್ಯಾರ್ಥಿನಿಲಯಗಳು- ಮುಂತಾದ ಅತ್ಯಾಧುನಿಕ ಸೌಕರ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವಂಥ ಸಂದರ್ಭವನ್ನು ಇದು ಒದಗಿಸುತ್ತದೆ. ಮಣಿಪಾಲದ ಕ್ಯಾಂಪಸ್ನೊಳಗಿನ ಸ್ಪಂದನಶೀಲ ಸಂಸ್ಕೃತಿ ಮತ್ತು ಚೈತನ್ಯಯುತವಾದ ಜೀವನ ಶೈಲಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳುವುದಕ್ಕೆ ಕೂಡ ಇದು ಸಹಕಾರಿ’
‘ಕ್ಯಾಂಪಸ್ ಟೂರ್’ ನಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಪ್ರವಾಸಿ ಮಾರ್ಗದರ್ಶಿಗಳನ್ನಾಗಿ ತರಬೇತಿಗೊಳಿಸುತ್ತಿರುವುದರಿಂದ ಅವರ ಅನುಭವ ವಿಕಸನಕ್ಕೂ ಇಲ್ಲಿ ಅವಕಾಶವಿದೆ. ಡೆಸ್ಟಿನೇಶನ್ ಮಣಿಪಾಲ್ ಉಪಕ್ರಮ [ಇನಿಶಿಯೇಟಿವ್]ವು ವಿದ್ಯಾರ್ಥಿಕೇಂದ್ರಿತವಾದ ಕಾರ್ಯಕ್ರಮವಾಗಿದ್ದು ಮಣಿಪಾಲದ ಬಹುಸಾಂಸ್ಕೃತಿಕ ಪರಿಸರವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುತ್ತದೆ. ಈ ಮಾರ್ಗದರ್ಶಿಗಳು, ತೊಡಗಿಸಿಕೊಳ್ಳುವ ಮತ್ತು ತಿಳಿವಳಿಕೆ ನೀಡುವ ಪ್ರವಾಸಗಳನ್ನು ತಲುಪಿಸಲು, ಮೌಲ್ಯಯುತವಾದ ಸಂವಹನ ಮತ್ತು ನಾಯಕತ್ವ ಕೌಶಲ್ಯಗಳನ್ನು ಪಡೆಯಲು ತರಬೇತಿ ನೀಡುತ್ತಾರೆ. ಅದರ ವಿಶಿಷ್ಟ ಕೊಡುಗೆ ಮತ್ತು ವಿದ್ಯಾರ್ಥಿ-ಕೇಂದ್ರಿತ ತತ್ತ್ವಶಾಸ್ತ್ರದೊಂದಿಗೆ, ಈ ಉಪಕ್ರಮವು ಬೆಳವಣಿಗೆಗೆ ಸಿದ್ಧವಾಗಿದೆ.
ಈ ಉಪಕ್ರಮವು ಕ್ಯಾಂಪಸ್ ಜೀವನದಲ್ಲಿ ಸಾಟಿಯಿಲ್ಲದ ಒಳನೋಟಗಳನ್ನು ನೀಡುವ ಮೂಲಕ, ಇದು ನಿರೀಕ್ಷಿತ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ನಾವೀನ್ಯತೆ ಮತ್ತು ಬೆಂಬಲದ ದಾರಿದೀಪವಾಗಿ ನಿಲ್ಲಲಿದೆ.
ಹೆಚ್ಚಿನ ಮಾಹಿತಿಗಾಗಿ ಅಥವಾ ಪ್ರವಾಸವನ್ನು ಮುಂಗಡ ಕಾದಿರಿಸಲು, https://destination.manipal.eduಗೆ ಭೇಟಿ ನೀಡಬಹುದು.
ಉಡುಪಿ : ಅಂಜನ್ ಕನ್ಸ್ಟ್ರಕ್ಷನ್ ಆಶ್ರಯದಲ್ಲಿ ಆ.2ರಿಂದ 4ರವರೆಗೆ ಬೆಳಿಗ್ಗೆೆ 9ರಿಂದ ರಾತ್ರಿ 7ರ ವರೆಗೆ ಮಣಿಪಾಲ ಆರ್ಎಸ್ಬಿ ಸಭಾಭವನದಲ್ಲಿ ಮೂರು ದಿನಗಳ ಹಲಸು ಕೃಷಿ ಮತ್ತು ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಆಯೋಜಕರಾದ ಅಕ್ಷತ್ ಪೈ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ. 2ರಂದು ಬೆಳಿಗ್ಗೆೆ 10.30ಕ್ಕೆೆ ಕಾಂಗ್ರೆೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಉದ್ಯಮಿ ಯತೀಶ್ ಕರ್ಕೇರ ಭಾಗವಹಿಸಲಿದ್ದಾರೆ ಎಂದರು.
ಹಲಸು ಮತ್ತು ಹಲಸಿನಿಂದ ತಯಾರಿಸಿದ ವಿವಿಧ ಬಗೆಯ ಐಸ್ಕ್ರೀಂ, ಗಟ್ಟಿ, ಜಾಮ್, ಶೀರಾ, ಹೋಳಿಗೆ ಖಾದ್ಯ ಸಹಿತ ಹಪ್ಪಳ, ಉಪ್ಪಿನಕಾಯಿ, ಚಿಪ್ಸ್ ವಿವಿಧ ಬಗೆಯ ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಇರಲಿದೆ. 60ಕ್ಕೂ ಅಧಿಕ ಮಳಿಗೆಗಳು, ಸ್ಥಳೀಯ ಮತ್ತು ಹೊರ ಜಿಲ್ಲೆಯ ಹಲಸು ಕೃಷಿಕರು, ಹಲಸಿನ ಉತ್ಪನ್ನಗಳ ವ್ಯಾಪಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆಯೋಜಕರಾದ ಬಿ. ಅನಂತಕೃಷ್ಣ ಪೈ, ಶೈಲಾ ಪೈ, ತಕ್ಷಕ್ ಪೈ, ಮಹೇಂದ್ರ ರಾವ್ ಉಪಸ್ಥಿತರಿದ್ದರು.
ಕಳೆದ 8 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದ ಮುಖಂಡರು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ಕೊರಗ ಸಮುದಾಯದ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು ಹಾಗೂ ವಿದ್ಯಾವಂತ ಕೊರಗ ಸಮುದಾಯದ ಯುವ ಜನತೆಗೆ ಅರ್ಹ ಸರಕಾರಿ ಉದ್ಯೋಗದ ಒದಗಿಸುವ ಬಗ್ಗೆ ಈಗಾಗಲೇ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲಿಯೇ ಕೊರಗ ಸಮುದಾಯದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬೇಡಿಕೆ ಈಡೇರಿಕೆಗೆ ಆಗ್ರಹಿಸುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿಗಳು ಜಿಲ್ಲೆಯ ಕೊರಗ ಸಮುದಾಯದ ಗಂಭೀರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಸಂಬಂಧಿತ ಇಲಾಖೆಗೆ ಸೂಕ್ತ ವರದಿ ನೀಡುವಂತೆ ಶಾಸಕರು ಕೊರಗ ಸಮುದಾಯದ ಪರವಾಗಿ ಹೇಳಿದರು.
ಕೊರಗ ಸಮುದಾಯದ ಮುಖಂಡರು ತಮ್ಮ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೊರಗ ಸಮುದಾಯದ ಮುಖಂಡರಾದ ಸುಶೀಲ, ಸಂಜೀವ, ಶೇಖರ್, ಬೊಗ್ರ, ಪವಿತ್ರ, ಐ. ಟಿ. ಡಿ. ಪಿ. ಯೋಜನಾಧಿಕಾರಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.
ಮಣಿಪಾಲ : ಮಕ್ಕಳಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡಿಸುವುದರಿಂದ ರಂಗ ಸಾಕ್ಷಾತ್ಕಾರವಾಗುತ್ತದೆ ಮಾತ್ರವಲ್ಲ, ಬದುಕಿನಲ್ಲಿ ಬರುವ ಕಷ್ಟಗಳನ್ನು ಎದುರಿಸುವ ಎದೆಗಾರಿಕೆಯೂ ಬರುತ್ತದೆ. ರಂಗ ನಿರ್ದೇಶಕರಾದ ಕಾಸರಗೋಡು ಚಿನ್ನ ಅವರು ರಂಗ ಸಂಸ್ಕೃತಿ ಮುಖಾಂತರ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಬೆಳಕಿಗೆ ತರುತ್ತಿದ್ದಾರೆ. ರಂಗ ಸಂಸ್ಕೃತಿಯಂತಹ ಶಿಬಿರಗಳು ಜಿಲ್ಲೆಯಾದ್ಯಂತ ಏರ್ಪಡಿಸಬೇಕು ಎಂದು ಮಾಧವ ಕೃಪಾ ಸ್ಕೂಲ್ನ ಉಪ ಪ್ರಾಂಶುಪಾಲರಾದ ಜ್ಯೋತಿ ಸಂತೋಷ್ ಹೇಳಿದರು.
ಅವರು ಮಣಿಪಾಲದ ಸರಳೇಬೆಟ್ಟುವಿನ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ರವರ ನೇತೃತ್ವದಲ್ಲಿ ನಡೆದ ರಂಗ ಚಿನ್ನಾರಿ ಕಾಸರಗೋಡು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಏರ್ಪಡಿಸಲಾದ ಕಾಸರಗೋಡು ಚಿನ್ನ ನಿರ್ದೇಶನದಲ್ಲಿ ರಂಗಸಂಸ್ಕೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ರತ್ನ ಸಂಜೀವ ಕಲಾಮಂಡಲದಲ್ಲಿ ಜರಗಿದ ರಂಗಸಂಸ್ಕೃತಿ ಶಿಬಿರದ ನಿರ್ದೇಶಕರಾದ ಕಾಸರಗೋಡು ಚಿನ್ನ ಅವರು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ನಾಲ್ಕು ಸಾವಿರ ಮಕ್ಕಳಿಗೆ ರಂಗಸಂಸ್ಕೃತಿ ಶಿಬಿರವನ್ನು ಏರ್ಪಡಿಸಿ ರಂಗಭೂಮಿಯ ಬಗ್ಗೆ ಒಲವನ್ನು ಮೂಡಿಸುವ ಕೆಲಸವನ್ನು ಮಾಡಿದ್ದೇವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಿವಪ್ರೇರಣಾ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮಹೇಶ್ ಠಾಕೂರ್ರವರು ಗ್ರಾಮೀಣ ಪ್ರದೇಶದ ಮಕ್ಕಳಿಗೆ ತಬಲ, ಹಾರ್ಮೋನಿಯಂ, ಶಾಸ್ತ್ರೀಯ ಸಂಗೀತ, ಡ್ರಾಯಿಂಗ್, ತರಗತಿಗಳನ್ನು ಸುಮಾರು ಎರಡು ವರ್ಷಗಳಿಂದ ಉಚಿತವಾಗಿ ಏರ್ಪಡಿಸಿ ನಮ್ಮ ಭಾರತೀಯ ಸಂಸ್ಕೃತಿಯನ್ನು ಪ್ರೀತಿಸುವ ಉಳಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಇದೀಗ ಈ ಸಾಲಿಗೆ ರಂಗಸಂಸ್ಕೃತಿ ಕೂಡ ಸೇರಿಸಿದ್ದೇವೆ. ಮುಂದಿನ ದಿನಗಳಲ್ಲಿ ಉಡುಪಿ ಪರಿಸರದ ಶಾಲಾ ಕಾಲೇಜುಗಳಲ್ಲಿ ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಈ ಕಾರ್ಯ ಮಾಡಲಿದೆ ಎಂದು ಹೇಳಿದರು.
ರಂಗಸಂಸ್ಕೃತಿ ಕಾರ್ಯಾಗಾರದಲ್ಲಿ ಮೂಕಾಭಿನಯ, ಧ್ವನಿ, ಆಶುರಚನೆ, ನಡೆ, ಪ್ರಸಾದನ ಇತ್ಯಾದಿ ಕಲೆಗಳ ಅಭ್ಯಾಸವನ್ನು ನಡೆಸಿಕೊಡಲಾಯಿತು.
ಪರ್ಕಳ ಪ್ರೌಢಶಾಲೆಯ ಸಂಚಾಲಕರಾದ ದಿನೇಶ್ ಹೆಗ್ಡೆ, ಸ್ಥಳೀಯರಾದ ಶಿಲ್ಪಾ ಸಾಮಂತ್, ಟ್ರಸ್ಟ್ನ ಟ್ರಸ್ಟಿ ರಮಾನಂದ್ ಸಾಮಂತ್, ಕಾರ್ಯದರ್ಶಿ ಅಶ್ವಿನಿ ಮಹೇಶ್ ಠಾಕೂರ್, ಉದಯವಾಣಿ ದಿನ ಪತ್ರಿಕೆಯ ಮಾಜಿ ಸಂಪಾದಕರಾದ ನಿತ್ಯಾನಂದ ಪಡ್ರೆ, ರಂಗಭೂಮಿ ಕಾರ್ಯಕರ್ತ ಶಶಿ ಭೂಶಂಕಿನಿ ಹಾಗೂ ಇತರರು ಉಪಸ್ಥಿತರಿದ್ದರು.
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಿಂದ ಈ ಬಾರಿ ವಿಜೃಂಭಣೆಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಐದನೇ ಸಮಾಲೋಚನಾ ಸಭೆಯು ಶ್ರೀ ಕೃಷ್ಣ ಮಠದ ಕನಕ ಮಂಟಪದಲ್ಲಿ ನಡೆಯಿತು.
ಈ ವರ್ಷ ಉತ್ಸವವು ಒಂದು ತಿಂಗಳಕಾಲ ನಡೆಯಲಿದ್ದು ಸಭೆಯಲ್ಲಿ ಮಾಜಿ ಶಾಸಕರಾದ ರಘುಪತಿ ಭಟ್, ರಂಜನ್ ಕಲ್ಕೂರ್, ದಿವಾನರಾದ ನಾಗರಾಜಾಚಾರ್ಯ, ಪ್ರಸನ್ನಾಚಾರ್ಯ, ರಮೇಶ್ ಭಟ್, ರವೀಂದ್ರಾಚಾರ್ಯ ಮೊದಲಾದವರಲ್ಲದೆ, ಹೆಚ್ಚಿನ ಕಾರ್ಯಕರ್ತರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಪ್ರಶಸ್ತಿ ಹಾಗೂ ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಸಮ್ಮಾನ ಪ್ರದಾನ ಕಾರ್ಯಕ್ರಮ ಜರಗಿತು.
ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳರು ಸ್ವೀಕರಿಸಿದರು. ಉಡುಪಿಯ ಯಕ್ಷಗಾನ ಕಲಾರಂಗದ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಯನ್ನು ಗುರುತಿಸಿ ನೀಡಲಾದ ಅಗರಿ ಸಮ್ಮಾನವನ್ನು ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವೀಕರಿಸಿದರು. ಕಟೀಲು ಕ್ಷೇತ್ರದ ಹರಿನಾರಾಯಣ ದಾಸ ಅಸ್ರಣ್ಣರು, ಶ್ರೀಪತಿ ಭಟ್, ಅಗರಿ ರಾಘವೇಂದ್ರ ರಾವ್, ಸುಮಂಗಲ ರತ್ನಾಕರ್, ವಾದಿರಾಜ ಕಲ್ಲುರಾಯ, ಕೃಷ್ಣಪ್ರಕಾಶ್ ಉಳಿತ್ತಾಯ ಮುಂತಾದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿತು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.
Maax News covers major news and events of Udupi district. This channel provides detailed reports on the political, social, economic, and cultural life of Udupi district.
Maax News, equipped with the most sophisticated studio in Udupi, assures people comprehensive news coverage.