ಉಡುಪಿ : ಕೈಮಗ್ಗದ ನೇಕಾರಿಕೆಯ ಅದ್ಭುತ ಕಲಾಕೌಶಲ್ಯವನ್ನು ಪೋಷಿಸಿ ಬೆಳೆಸಲು ನಿರಂತರವಾಗಿ ಶ್ರಮಿಸುತ್ತ, ಪುತ್ತಿಗೆ ಮಠದ ಪರ್ಯಾಯ ಮತ್ತು ಶ್ರೀ ಕೃಷ್ಣ ಮಾಸೋತ್ಸವದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೈಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಕೈಮಗ್ಗದ ಉದ್ದಿಮೆಗೆ ಮತ್ತು ಶ್ರೀ ಕೃಷ್ಣ ಮಾಸೋತ್ಸವಕ್ಕೆ ವಿಶೇಷವಾದ ಮೆರುಗನ್ನು ನೀಡಿದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷರಾದ ರತ್ನಾಕರ್ ಇಂದ್ರಾಳಿಯವರಿಗೆ ಪರ್ಯಾಯ ಪುತ್ತಿಗೆ ಶ್ರೀಗಳು ಶ್ರೀಕೃಷ್ಣ ಜಯಂತಿಯ ಅಂಗವಾಗಿ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
Udupi
ಕಾರ್ಕಳ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ಸ್ ಪೂರೈಕೆಯಲ್ಲಿ ಹಿಂದೂ ಭಾಗಿ ಎಂಬುದಕ್ಕೆ ಕೇಸ್ ತಿರುಚುವುದು ಬೇಡ
ಮಂಗಳೂರು : ಕಾರ್ಕಳದಲ್ಲಿ ಯುವತಿಯ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ಸ್ ಪೂರೈಕೆ ಮಾಡಿರುವ ಅಭಯ್ ಆಗಲಿ, ಅಹಮ್ಮದ್ ಆಗಲಿ ಆತನ ಮೇಲೆ ನಿರ್ದಾಕ್ಷಿಣ್ಯ ಕ್ರಮವಾಗಲಿ. ಅದೇ ರೀತಿ ಡ್ರಗ್ಸ್ ಪೂರೈಕೆ ಮಾಡಿರುವುದು ಹಿಂದೂ ಎಂಬ ಕಾರಣಕ್ಕೆ ಸರಕಾರ ಪ್ರಕರಣವನ್ನು ತಿರುಚುವ ಯತ್ನ ಮಾಡುವುದು ಬೇಡ ಎಂದು ವಿಎಚ್ಪಿ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಆಗ್ರಹಿಸಿದರು.
ನಗರದ ಕದ್ರಿಯ ವಿಶ್ವಶ್ರೀಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಸಿಕೊಂಡ ಯಾರೇ ಆಗಲಿ ಅವರ ಮೇಲೆ ನಿರ್ದ್ಯಾಕ್ಷಿಣ್ಯ ಕ್ರಮವಾಗಲಿ. ಹಾಗೆಂದು ಪ್ರಕರಣವನ್ನು ಇನ್ನಾವುದಕ್ಕೋ ಲಿಂಕ್ ಮಾಡಿ ತಿರುಚುವ ಯತ್ನವನ್ನು ವಿಎಚ್ಪಿ ಸಹಿಸುವುದಿಲ್ಲ. ಆದ್ದರಿಂದ ಸರಿಯಾಗಿ ತನಿಖೆ ನಡೆಸಿ ಕೃತ್ಯದ ಹಿಂದಿರುವ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಡ್ರಗ್ಸ್ ಅಥವಾ ಇನ್ನಿತರ ಸಮಾಜಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡವರಿಗೆ ನಮ್ಮ ಸಂಘಟನೆಯಲ್ಲಿ ಇರಲು ಅವಕಾಶವಿಲ್ಲ. ಹಾಗೇನಾದರೂ ಇದ್ದಲ್ಲಿ ತಕ್ಷಣ ಅವರನ್ನು ಸಂಘಟನೆಯಿಂದ ಹೊರಗೆ ಹಾಕುವ ಕೆಲಸವನ್ನು ಮಾಡಲಾಗುತ್ತದೆ ಎಂದರು.
ಐವನ್ ಡಿಸೋಜ ನೀಡಿರುವುದು ಅಕ್ಷರಶಃ ರಾಷ್ಟ್ರದ್ರೋಹದ ಹೇಳಿಕೆ. ಅವರು ಹೇಳಿಕೆ ನೀಡಿದ ತಕ್ಷಣ ಬಸ್ಸಿಗೆ ಕಲ್ಲು ಬಿಸಾಡಲಾಗಿದೆ. ಆದರೂ ಪೊಲೀಸ್ ಇಲಾಖೆ ಅವರ ಮೇಲೆ ಇನ್ನೂ ಕ್ರಮ ಕೈಗೊಂಡಿಲ್ಲ. ಅವರ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಇನ್ನೂ ಯಾಕೆ ಹಿಂದೇಟು ಹಾಕುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಪೊಲೀಸರ ಈ ದ್ವಂದ್ವ ನಿಲುವು ಸರಿಯಲ್ಲ. ಹಿಂದೂ ಸಂಘಟನೆಯವರಿಗೆ, ಒಂದು ಕಾನೂನು ಐವನ್ ಡಿಸೋಜರಿಗೆ ಮತ್ತೊಂದು ಕಾನೂನು ಬೇಡ. ಈಗಾಗಲೇ ಬಿಜೆಪಿ ಇದರ ವಿರುದ್ಧ ಹೋರಾಟ ಮಾಡುತ್ತಿದೆ. ಆದರೂ ಕ್ರಮವಾಗದಿದ್ದಲ್ಲಿ ಮುಂದಿನ ನಿರ್ಧಾರವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದುಶರಣ್ ಪಂಪ್ವೆಲ್ ಆಗ್ರಹಿಸಿದರು.
ಉಡುಪಿ : ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್ ಶುರೈಮ್(22)ನನ್ನು ಬಂಧಿಸಿದ್ದಾರೆ.
ಉಡುಪಿಯ ಗುಡ್ಡೆಯಂಗಡಿಯ ನಿವಾಸಿ ಬೆಂಗಳೂರಿನಲ್ಲಿ ಐಟಿಯಲ್ಲಿ ಉದ್ಯೋಗ ಮಾಡಿಕೊಂಡಿರುವ ಯುವತಿ ಆ. 24ಕ್ಕೆ ರಾತ್ರಿ ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೋಗುವ ರೈಲು ಹತ್ತಿದ್ದರು. ಆ. 25ರಂದು ಬೆಳಗ್ಗೆ 11ಕ್ಕೆ ರೈಲು ಮೂಲ್ಕಿ ದಾಟಿದ ಬಳಿಕ ಆಕೆಗೆ ಆರೋಪಿ ಪದೇಪದೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಳಿಕ ಗಲಾಟೆ ನಡೆದು ಕ್ಷಮೆ ಯಾಚಿಸಿದ್ದ. ಕೂಡಲೇ ಯುವತಿ ಆತನ ಚಿತ್ರ ತೆಗೆದು ರೈಲ್ವೇಗೆ ಆ್ಯಪ್ ಮೂಲಕ ದೂರು ನೀಡಿದ್ದರು. ಅನಂತರ ಉಡುಪಿ ರೈಲು ನಿಲ್ದಾಣಕ್ಕೆ ಬಂದ ಬಳಿಕ ರೈಲ್ವೇ ಪೊಲೀಸರಿಗೂ ದೂರು ನೀಡಿದ್ದರು.
ರೈಲ್ವೇ ಪೊಲೀಸರು ಇದನ್ನು ಮಣಿಪಾಲ ಠಾಣೆಗೆ ಹಸ್ತಾಂತರಿಸಿದರು. ಈ ನಡುವೆ ರೈಲ್ವೇ ಆ್ಯಪ್ ಮೂಲಕ ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾರಿಗಳು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸರು ಕಾರ್ಯಾಚರಣೆಗೆ ಇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ಅವರ ನಿರ್ದೇಶನದಂತೆ ಮಣಿಪಾಲ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಟಿ.ವಿ., ಪಿಎಸ್ಐ ರಾಘವೇಂದ್ರ, ಎಎಸ್ಐ ವಿವೇಕ್, ಸಿಬಂದಿ ಇಮ್ರಾನ್, ರಘು, ವಿದ್ಯಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. ಯುವತಿಯ ಈ ನಡೆಯಿಂದ ಆರೋಪಿಯನ್ನು ಪೊಲೀಸರು ಶೀಘ್ರದಲ್ಲಿ ಬಂಧಿಸಲು ಸಾಧ್ಯವಾಗಿದೆ.
ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು
ಮಣಿಪಾಲ : ಅಲೆವೂರಿನ ನೈಲಪಾದೆಯ ಚಶ್ಮಾವತಿ ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ನಿನ್ನೆ ಮುಂಜಾನೆ ಮೃತಪಟ್ಟರೆ ಇನ್ನೋರ್ವ ವಿದ್ಯಾರ್ಥಿ ಬುಧವಾರ ಸಂಜೆಯ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ತ್ರಿವೆಂಡಮ್ನ ಆರೊನ್ ರೋಜರ್ ಲೀನ್(17) ಹಾಗೂ ಕೋಲ್ಕತಾದ ಮಾಧವ್(18) ಮೃತ ವಿದ್ಯಾರ್ಥಿಗಳು.
ಆ.25ರ ರವಿವಾರ ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದರು. ನಾಲ್ಕು ಮಂದಿ ವಿದ್ಯಾರ್ಥಿಗಳು ತೆರಳಿದ್ದು, ಈ ಪೈಕಿ ಇಬ್ಬರು ವಿದ್ಯಾರ್ಥಿಗಳು ಎರಡು ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನೀರಿನಲ್ಲಿ ಮುಳುಗಡೆಯಾಗಿದ್ದವರನ್ನು ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದರು. ಮೃತಪಟ್ಟ ಇಬ್ಬರೂ ಮಣಿಪಾಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ.
ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಉಡುಪಿ, ಪ್ರಗತಿನಗರ ಅಲೆವೂರು ಇವರ ಆಶ್ರಯದಲ್ಲಿ ಇಂದು “ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಮಾಣಪತ್ರ”ವನ್ನು ಸಮಾರಂಭದಲ್ಲಿ ಸಂಸದ ಕೋಟ ವಿತರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯತೀಶ್ ಕುಮಾರ್ ಹಾಗೂ ಸರ್ಕಾರಿ ಐಟಿಐ ಉಡುಪಿಯ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಸಂಸ್ಥೆಯ ಆಡಳಿತ ಅಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಕಳ : ಕಾರ್ಕಳದಲ್ಲಿ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಸಂತ್ರಸ್ತ ಯುವತಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಕಾರ್ಕಳ ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಯುವತಿ ಹೇಳಿಕೆ ನೀಡಿದರು. ಸಿಆರ್ಪಿಸಿ 164 ನಿಯಮದಂತೆ ಸಂತ್ರಸ್ತೆಯ ಹೇಳಿಕೆಗಳನ್ಮು ದಾಖಲು ಮಾಡಲಾಯಿತು. ತನಿಖಾಧಿಕಾರಿ ಮಂಜಪ್ಪ ನೇತೃತ್ವದಲ್ಲಿ ಈ ಕಾನೂನು ಪ್ರಕ್ರಿಯೆ ನಡೆಯಿತು.
ಇದಕ್ಕೂ ಮುನ್ನ ಯುವತಿಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗಾಗಿ ದಾಖಲಿಸಲಾಗಿತ್ತು. ಇದೇ ತಿಂಗಳ ಆಗಸ್ಟ್ 23ರಂದು ಕಾರ್ಕಳದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ಪ್ರಮುಖ ಆರೋಪಿ ಸಹಿತ ಈತನಕ ಐವರ ಬಂಧನವಾಗಿದೆ. ಅತ್ಯಾಚಾರ ಪ್ರಕರಣ ಸಂದರ್ಭ ಯುವತಿಗೆ ಮಾದಕ ವಸ್ತು ನೀಡಲಾಗಿದ್ದು ಈ ಕುರಿತು ಪ್ರತ್ಯೇಕ ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
ಉಡುಪಿ : ಮಾಹೆಯಲ್ಲಿ ಮೆಟೀರಿಯಲ್ ಸೈನ್ಸ್ ವಾಹಿನಿಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಪಿ.ಎಚ್.ಡಿ. ಅಧ್ಯಯನ ನಡೆಸಿದ ಬೆಳ್ಮಣ್ಣಿನ ಸೌರಭ್ ತಂತ್ರಿ ಡಾಕ್ಟರೇಟ್ ಪದವಿಗೆ ಭಾಜರಾಗಿದ್ದಾರೆ.

ಬೆಳ್ಮಣ್ಣಿನ ನಡಿಗುತ್ತು ತಂತ್ರಿ ಕುಟುಂಬದ ಸತೀಶ್ ತಂತ್ರಿ ಹಾಗೂ ಲಕ್ಷ್ಮಿ ತಂತ್ರಿಯವರ ಪುತ್ರರಾಗಿರುವ ಇವರು ಬಂಟಕಲ್ ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್. ಪದವಿ ಪಡೆದು ಮಾಹೆಯಲ್ಲಿ ಎಂ.ಟೆಕ್. ಪಡೆದ ನಂತರ ಪಿ.ಎಚ್.ಡಿ. ಅಧ್ಯಯನವನ್ನು ನಡೆಸುತ್ತಿದ್ದರು.
ಸಿಂಥೆಸಿಸ್ ಅಂಡ್ ಕ್ಯಾರಕ್ಟರೈಸೇಫನ್ ಆಫ್ ಮೋಡಿಫೈಡ್ ಟಿ೬-ಎಎ೭೦೭೫ ಮ್ಯಾಟಿಕ್ಸ್ ಬೇಸಡ್ ಗ್ರಾನೈಟ್ ಪೌಡರ್ ಅಂಡ್ ಸಿಲಿಕಾನ್ ನೈಟ್ರೆಂಡ್ ಪರ್ಟಿಕ್ಯುಲೇಟ್ಸ್ ರೀ ಇನ್ಪ್ಲೋರ್ಸ್ಡ್ ಕಾಂಪೋಸಿಟ್ಸ್ ಎಂಬ ವಿಷಯದ ಕುರಿತು ಡಾ. ಶಿವಪ್ರಕಾಶ್ ವೈ.ಎಂ. ಅವರ ಮಾರ್ಗದರ್ಶನದಲ್ಲಿ ಡಾ. ಗುರುಮೂರ್ತಿ ಬಿ.ಎಂ. ಅವರು ರಿಸರ್ಚ್ ಕೋ ಗೈಡ್ ಆಗಿದ್ದು ಡಾ. ಸೌರಭ್ ತಂತ್ರಿಯವರು ಅಧ್ಯಯನ ನಡೆಸಿ ತಮ್ಮ ಸಂಶೋಧನಾ ಮಹಾಪ್ರಬಂಧವನ್ನು ಮಾಹೆಗೆ ಸಲ್ಲಿಸಿದರು.
ಕಾಪು : ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕೋಶಾಧಿಕಾರಿಗಳಾದ ಮನೋಹರ್ ಕಲ್ಮಾಡಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ : ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಬಾಲಕಿಯನ್ನು ರೈಲ್ವೆ ಆರ್ಪಿಆಫ್ ಸುಧೀರ್ ಶೆಟ್ಟಿ, ಅವರು ರಕ್ಷಿಸಿದ್ದು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಲ್ಪಟ್ಟ ಬಾಲಕಿಗೆ ನಿಟ್ಟೂರಿನ ಸಖಿ ಕೇಂದ್ರದಲ್ಲಿ ಪುನರ್ವಸತಿ ಕಲ್ಪಿಸಲು ನೆರವಾದರು.

ತನಿಕಾಧಿಕಾರಿ ಜಿನಾ ಪಿಂಟೋ ಸಹಕರಿಸಿದರು. ಮಣಿಪಾಲ ಪೋಲಿಸ್ ಠಾಣೆಯ ವಿದ್ಯಾ ಉಪಸ್ಥಿತರಿದ್ದರು. ರಕ್ಷಿಸಲ್ಪಟ್ಟ ಬಾಲಕಿ ಅಪ್ರಾಪ್ತಳಂತೆ ಕಂಡು ಬಂದಿದ್ದು, ಮಾತು ಬರುವುದಿಲ್ಲ, ಕಿವಿ ಕೇಳುವುದಿಲ್ಲ. ಹೆಸರು ವಿಳಾಸ ತಿಳಿದುಬಂದಿಲ್ಲ. ಸಂಬಂಧಿಕರು ಮಣಿಪಾಲ ಪೋಲಿಸ್ ಠಾಣೆ ಅಥವಾ ನಿಟ್ಟೂರು ಸಖಿ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನಿಂದ ಉಡುಪಿ ಟೌನ್ ಪೊಲೀಸ್ ಠಾಣೆಗೆ ಕಂಪ್ಯೂಟರ್ಗಳ ಕೊಡುಗೆ
ಮಣಿಪಾಲ : ಸ್ಥಳೀಯ ಕಾನೂನು ಸುವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ನಿರಂತರ ಪ್ರಯತ್ನದಲ್ಲಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ (MAHE) ಉಡುಪಿ ಟೌನ್ ಪೊಲೀಸ್ ಠಾಣೆಗೆ 3 ಹೈಟೆಕ್ ಕಂಪ್ಯೂಟರ್ ಸಿಸ್ಟಮ್ಗಳನ್ನು ಕೊಡುಗೆಯಾಗಿ ನೀಡಿದೆ. ಈ ದೇಣಿಗೆಯು ಸ್ಥಳೀಯ ಸಮುದಾಯದ ಒಳಿತಿಗಾಗಿ ತನ್ನ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮತ್ತು ಆಧುನಿಕ ಸವಾಲುಗಳನ್ನು ನಿಭಾಯಿಸುವಲ್ಲಿ ಕಾನೂನು ಜಾರಿ ಸಾಮರ್ಥ್ಯಗಳನ್ನು ಬಲಪಡಿಸುವ ಮಾಹೆ ಮಣಿಪಾಲದ ಬದ್ಧತೆಯನ್ನು ಒತ್ತಿಹೇಳುತ್ತದೆ.
ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಅವರು ಈ ಉಪಕ್ರಮದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು, “ನಮ್ಮ ಸ್ಥಳೀಯ ಕಾನೂನು ಸುವ್ಯವಸ್ಥೆಯ ಜಾರಿಯನ್ನು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲಿಸಲು ನಾವು ಸಮರ್ಪಿತರಾಗಿದ್ದೇವೆ. ಈ ಸುಧಾರಿತ ಕಂಪ್ಯೂಟರ್ ವ್ಯವಸ್ಥೆಯನ್ನು ಒದಗಿಸುವ ಮೂಲಕ, ನಾವು ಉಡುಪಿ ಟೌನ್ ಪೊಲೀಸ್ ಠಾಣೆಯ ಸಾಮರ್ಥ್ಯವನ್ನು ಹೆಚ್ಚಿಸಲು ಆಶಿಸುತ್ತೇವೆ. ತಮ್ಮ ಜವಾಬ್ದಾರಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಿ, ವಿಶೇಷವಾಗಿ ಡೇಟಾ ನಿರ್ವಹಣೆ ಮತ್ತು ಸೈಬರ್-ಸಂಬಂಧಿತ ಕಾರ್ಯಗಳಲ್ಲಿ ಇದು ಸುರಕ್ಷಿತ ಮತ್ತು ಅಗತ್ಯ ದಾಖಲೆ ನಿರ್ವಹಣೆ ಖಾತ್ರಿಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ” ಎಂದರು.
ಮಾಹೆ ಮಣಿಪಾಲದ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿ ಡಾ. ನಾರಾಯಣ ಸಭಾಹಿತ್, ಅವರು ಮಾತನಾಡಿ “ಆಧುನಿಕ ಪೋಲೀಸ್ ದಿನನಿತ್ಯದ ಚಟುವಟಿಕೆಗಳಲ್ಲಿ ತಂತ್ರಜ್ಞಾನವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಎಂಐಟಿ ಮಣಿಪಾಲದಲ್ಲಿ ಸೈಬರ್ ಸುರಕ್ಷತೆಯ ಕುರಿತು ಸುಧಾರಿತ ಲ್ಯಾಬ್ನೊಂದಿಗೆ, ಮಾಹೆಯು ಸೈಬರ್ ಸುರಕ್ಷತೆಯಲ್ಲಿ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲು ಸುಸಜ್ಜಿತವಾಗಿದೆ. ಈ ವ್ಯವಸ್ಥೆಗಳ ದೇಣಿಗೆಯ ಜೊತೆಗೆ, ಡಿಜಿಟಲ್ ಯುಗದ ಸವಾಲುಗಳನ್ನು ನಿಭಾಯಿಸಲು ವಿಶೇಷ ತರಬೇತಿಯನ್ನು ನೀಡುವ ಮೂಲಕ ನಾವು ಉಡುಪಿ ಟೌನ್ ಪೊಲೀಸ್ ಠಾಣೆಯನ್ನು ಬೆಂಬಲಿಸಲು ಸಿದ್ಧರಿದ್ದೇವೆ” ಎಂದರು.
ಮಣಿಪಾಲ ಕ್ಯಾಂಪಸ್ನಲ್ಲಿ ಭದ್ರತೆಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿರಾಜ ಎನ್.ಎಸ್., “ವಿಶ್ವದ ವಿವಿಧ ಭಾಗಗಳಿಂದ ಸುಮಾರು 28,000 ವಿದ್ಯಾರ್ಥಿಗಳು ನಮ್ಮ ಕ್ಯಾಂಪಸ್ನಲ್ಲಿ ಕಲಿಯುತ್ತಿದ್ದು , ಅವರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಇದನ್ನು ಸಾಧ್ಯವಾಗಿಸಲು ಸಹಾಯ ಮಾಡುವ ಪೊಲೀಸ್ ಸಿಬ್ಬಂದಿಯ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನಾವು ಶ್ಲಾಘಿಸುತ್ತೇವೆ. ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಅವರ ಬದ್ಧತೆ ನಮ್ಮ ಸಮುದಾಯಕ್ಕೆ ಅಮೂಲ್ಯವಾಗಿದೆ ಮತ್ತು ಈ ಕೊಡುಗೆ ನಮ್ಮ ಬೆಂಬಲ ಮತ್ತು ಕೃತಜ್ಞತೆಯ ಸೂಚಕವಾಗಿದೆ” ಎಂದರು.
ಈ ಕೊಡುಗೆಯನ್ನು ಸ್ವೀಕರಿಸಿದ ಉಡುಪಿ ಟೌನ್ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶ್ರೀ ಪುನಿತ್ ಕುಮಾರ್ ಅವರು ಕೃತಜ್ಞತೆ ಸಲ್ಲಿಸಿ, “ಈ ಉದಾರ ಕೊಡುಗೆಗಾಗಿ ನಾವು ಮಾಹೆ ಮಣಿಪಾಲಕ್ಕೆ ಕೃತಜ್ಞರಾಗಿರುತ್ತೇವೆ. ಈ ಕಂಪ್ಯೂಟರ್ ವ್ಯವಸ್ಥೆಗಳು ತನಿಖೆಗಳನ್ನು ನಿರ್ವಹಿಸುವಲ್ಲಿ ಮತ್ತು ನಮ್ಮ ದಕ್ಷತೆಯನ್ನು ಸುಧಾರಿಸುವಲ್ಲಿ ನಮ್ಮ ಪ್ರಯತ್ನಗಳಿಗೆ ಹೆಚ್ಚು ಸಹಾಯ ಮಾಡುತ್ತವೆ. ಪ್ರಕರಣಗಳನ್ನು ನಿಭಾಯಿಸಲು ಮಾಹೆಯ ಬೆಂಬಲವು ನಮಗೆ ಉತ್ತಮವಾದ ಸೇವೆಯನ್ನು ನೀಡಲು ಸಹಾಯ ಮಾಡುತ್ತದೆ” ಎಂದರು.
ಮಾಹೆ ಮಣಿಪಾಲದಲ್ಲಿ ನಡೆದ ಔಪಚಾರಿಕ ಸಮಾರಂಭದಲ್ಲಿ ನವೀಕೃತ ಸಾಫ್ಟ್ವೇರ್ ಹೊಂದಿದ 3 ಕಂಪ್ಯೂಟರ್ ಸಿಸ್ಟಮ್ಗಳನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ ಸ್ಪೋರ್ಟ್ಸ್ ಕೌನ್ಸಿಲ್ನ ಕಾರ್ಯದರ್ಶಿ ಡಾ. ವಿನೋದ್ ಸಿ. ನಾಯಕ್, ಮುಖ್ಯ ಭದ್ರತಾ ಅಧಿಕಾರಿ ಕರ್ನಲ್ ವಿಜಯ್ ಭಾಸ್ಕರ್ ರೆಡ್ಡಿ, ಮಾಹಿತಿ ಮತ್ತು ತಂತ್ರಜ್ಞಾನದ ನಿರ್ದೇಶಕ ಶ್ರೀ ಸಂದೀಪ್ ಬನ್ಸಾಲ್, ಉಪ ನಿರ್ದೇಶಕ ಸತೀಶ್ ಕಾಮತ್ ಉಪಸ್ಥಿತರಿದ್ದರು ಮತ್ತು ಸಾರ್ವಜನಿಕ ಸಂಪರ್ಕ, ಮಾಧ್ಯಮ ಮತ್ತು ಸಂವಹನ ವಿಭಾಗದ ಉಪ ನಿರ್ದೇಶಕ ಶ್ರೀ ಸಚಿನ್ ಕಾರಂತ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಈ ಕೊಡುಗೆಯು ವಿವಿಧ ಸಾಮಾಜಿಕ ಸವಾಲುಗಳನ್ನು ಎದುರಿಸುವಲ್ಲಿ ಸ್ಥಳೀಯ ಸಮುದಾಯದೊಂದಿಗೆ ತೊಡಗಿಸಿಕೊಳ್ಳಲು ಮತ್ತು ಬೆಂಬಲಿಸಲು ಮಾಹೆ ಮಣಿಪಾಲದ ಪ್ರಯತ್ನಗಳ ಭಾಗವಾಗಿದೆ. ಸುಧಾರಿತ ತಾಂತ್ರಿಕ ಸಂಪನ್ಮೂಲಗಳನ್ನು ಒದಗಿಸುವ ಮೂಲಕ, ಮಾಹೆಯು ಉಡುಪಿ ಟೌನ್ ಪೊಲೀಸ್ ಠಾಣೆಗೆ ಅದರ ಕಾರ್ಯಾಚರಣೆಯಲ್ಲಿ ಸಹಾಯ ಮಾಡುವ ಗುರಿಯೊಂದಿಗೆ ಸಮುದಾಯದ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.