ಕಾರ್ಕಳ : ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ಬೆಳಿಗ್ಗೆ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಆಗಮಿಸಿದರು. ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರು ಸಾಂಪ್ರದಾಯಿಕ ಸ್ವಾಗತ ನೀಡಿ ಸಚಿವರನ್ನು ಬರಮಾಡಿಕೊಂಡರು.
ಕಾರ್ಕಳದ ಪ್ರಸಿದ್ಧ ತಾಣವಾಗಿರುವ ಆನೆಕೆರೆ ನಿಸರ್ಗಧಾಮಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಅಲ್ಲಿನ ಆನೆಕೆರೆ ಬಸದಿಗೆ ಭೇಟಿ ನೀಡಿದ ಸಚಿವರು ಬಸದಿ ನಿರ್ಮಾಣ ಮತ್ತು ಆನೆಕೆರೆ ಪರಿಸರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಕಳದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಲ್ಲಿನ ಶಾಸಕರು ಮಾಡಿರುವ ಮನವಿಯಂತೆ ಎಲ್ಲ ರೀತಿಯ ಸಹಕಾರ ಮತ್ತು ಯೋಗ್ಯ ಮಟ್ಟದಲ್ಲಿ ಅನುದಾನ ಕೊಡುವ ಭರವಸೆ ವ್ಯಕ್ತಪಡಿಸಿದರು.
ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.
 
			        


 
			         
                        
 
                        
 
                        
 
                         
                         
                        

 
                         
                        
 
                        
 
                        
