ಉಡುಪಿ : ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹತಾಶೆಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ನಡೆದುಕೊಳ್ಳುತ್ತಿರುವ ಮಾಜಿ ಶಾಸಕರು ಕೆಲ ಹಿಂದೂ ವಿರೋಧಿ ಶಕ್ತಿಗಳ ಆಟಕ್ಕೆ ಗೊಂಬೆಯಂತೆ ಕುಣಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಖಂಡ ಹಿಂದೂರಾಷ್ಟ್ರದ ಕಲ್ಪನೆಗೆ ಮಗ್ಗಲ ಮುಳ್ಳಾಗಿರುವ ಗೋ ಭಕ್ಷಕರನ್ನು ದೇವಸ್ಥಾನದ ಪ್ರಾಂಗಣದೊಳಕ್ಕೆ ಕರೆಸಿ ದೇವಸ್ಥಾನದ ಪಾವಿತ್ರ್ಯ ತೆಯನ್ನು ಅಶುದ್ದಿ ಗೊಳಿಸಿರುವಿರಿ. ಹಿಂದೂ ಸಮಾಜದ ಬೆಂಬಲದಿಂದಲೇ ಮೂರು ಬಾರಿ ವಿಧಾನಸಭೆ ಪ್ರವೇಶಿಸಿದ ತಾವು ಅಧಿಕಾರದಲಿದ್ದಾಗ ಹಿಂದೂ ಫೈರ್ ಬ್ರಾಂಡ್ ತರ ನಡೆದುಕೊಳ್ಳುತ್ತಿದ್ದ ತಾವು ಇತ್ತೀಚಿನ ದಿನಗಳ ನಿಮ್ಮ ಕಾರ್ಯವೈಖರಿ ಅನುಮಾನ ಹುಟ್ಟಿಸುವಂತಿದೆ. ಇನ್ನಾದರೂ ಬುದ್ಧಿಕಲಿತು ವೆಂಕಟರಮಣನ ಶಾಪಕ್ಕೆ ತುತ್ತಾಗದೆ ದೇವಸ್ಥಾನ ಶುದ್ಧೀಕರಿಸಿ ಹಿಂದೂ ಸಮಾಜದ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳಿ ಎಂದು ಶ್ರೀರಾಮಸೇನೆ ಉಡುಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಪೂಜಾರಿ ಆಗ್ರಹಿಸಿದ್ದಾರೆ.
Udupi
ಮಣಿಪಾಲ : ಮಾದಕ ವಸ್ತು ಗಾಂಜಾ ಸೇವಿಸಿದ ಮೂವರನ್ನು ಮಣಿಪಾಲ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಮಣಿಪಾಲ ಠಾಣೆಯ ಎಎಸ್ಐ ವಿವೇಕಾನಂದ ಬಿ. ಸಿಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ವಿಶಾಖಪಟ್ಟಣದ ಪಪ್ಪು ನಿಶಾಂತ್ ಎಂದು ಹೇಳಿದ್ದು ಆತ ಅಮಲಿನಲ್ಲಿರುವುದು ಕಂಡುಬಂದಿದೆ.
ಮಾದಕ ವಸ್ತು ಸೇವಿಸಿರುವ ಬಗ್ಗೆ ಅನುಮಾನದ ಮೇರೆಗೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಅದೇ ರೀತಿ ಶಿವಳ್ಳಿ ಗ್ರಾಮದ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ದೇವಾಂಶ್ ಮಣಿಪಾಲ ಮತ್ತು ಕವಾಯ್ ಗೇರಾ ಎಂಬವರು ಅನುಮಾನಾಸ್ಪದವಾಗಿ ಅಮಲಿನಲ್ಲಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದು ಗಾಂಜಾ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮೂವರ ವಿರುದ್ಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ : ಬೈಲೂರಿನ ಪರಶುರಾಮ ಥೀಮ್ ಪಾರ್ಕ್ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್ನಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ನನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಲು ಯಶಸ್ವಿಯಾಗಿದ್ದಾರೆ.
ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಪಾಲ್ಗೊಂಡರು.
ಶ್ರೀ ಕೃಷ್ಣ ಮುಖ್ಯ ಪ್ರಾಣರ ದರ್ಶನಗೈದ ರಾಜ್ಯಪಾಲರು ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು. ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು.
ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿರುವ ರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನವನ್ನು ಪಡೆದು ಭಕ್ತ ಕನಕದಾಸರ ವಿಗ್ರಹಕ್ಕೆ ನಮಿಸಿದರು.
ಶ್ರೀವಿಜಯದಾಸರ ಆರಾಧನೆ ಪ್ರಯುಕ್ತ ನಡೆಯುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು. ಉಡುಪಿಯ ದೈವಿಕ ಸ್ಪಂದನದಿಂದ ವಿಶೇಷ ಸಂತೋಷಗೊಂಡು ಉಡುಪಿಯ ಶ್ರೀಕೃಷ್ಣನ ಮಹತ್ವವನ್ನು ಶ್ರೀಪಾದರ ಅನುಗ್ರಹಕ್ಕೆ ಪಾತ್ರರಾದರು.
ಹೆಬ್ರಿಯ ಹೆಬ್ಬೇರಿ ಯಕ್ಷಲೋಕದ 5ನೇ ವಾರ್ಷಿಕೋತ್ಸವ; ಕಲಾ ಸೇವೆಯೇ ಬದುಕಿನ ಸಾರ್ಥಕ್ಯಕ್ಕೆ ದಾರಿ : ಡಾ. ತಲ್ಲೂರು
ಉಡುಪಿ : ಸಮಾಜದ ಋಣ ತೀರಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಅದು ಶಿಕ್ಷಣ, ಸಮಾಜ ಸೇವೆ, ಸಾಂಸ್ಕೃತಿಕ ರಂಗವೇ ಇರಬಹುದು. ಆದರೆ ಯಕ್ಷಗಾನ, ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ, ಸಾಧಕರನ್ನು ಗುರುತಿಸಿ ಅಭಿನಂದಿಸುವುದರಲ್ಲಿ ಸಿಗುವ ಆತ್ಮ ತೃಪ್ತಿಇನ್ನಾವುದೇ ಸೇವೆಯಿಂದ ಸಿಗುವುದು ದುರ್ಲಭ. ಹೀಗಾಗಿ ಕಲಾ ಸೇವೆಯಲ್ಲಿಯೇ ಬದುಕಿನ ಸಾರ್ಥಕ್ಯವನ್ನು ಕಂಡುಕೊoಡಿದ್ದೇನೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಅವರು ಶನಿವಾರ ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಯಕ್ಷಲೋಕ ಹೆಬ್ಬೇರಿ ಸಂಸ್ಥೆಯ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. ಅದೇ ಉದ್ದೇಶದಿಂದ ಹಲವಾರು ಸಂಘಸoಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಯಕ್ಷಗಾನ ಆಸಕ್ತಿ ನನಗೆ ವರವಾಗಿ ಪರಿಣಮಿಸಿದೆ. 60ರ ವರ್ಷದಲ್ಲಿ ಯಕ್ಷಗಾನವನ್ನು ಗುರು ಸಂಜೀವ ಸುವರ್ಣರ ಬಳಿ ಕಲಿತು 400ಕ್ಕೂ ಅಧಿಕ ಪ್ರದರ್ಶನ ಮಾಡಿದ್ದೇನೆ. ಯಕ್ಷಲೋಕದ ಗುರು ಸುಬ್ರಹ್ಮಣ್ಯ ಪ್ರಸಾದ್ ಅವರೊಡನೆಯೂ ಪಾತ್ರವನ್ನು ಮಾಡಿದ ಸಂತೃಪ್ತಿಯಿದೆ. ಈ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸುವ, ಯಕ್ಷಗಾನ ಕಲೆಗೆ ಪ್ರೋತ್ಸಾಹ ನೀಡುವ ಸುವರ್ಣವಕಾಶ ಲಭಿಸಿತು. ಈ ಕೊಡುಗೆಗಾಗಿಯೇ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಗೌರವ ಒಲಿದು ಬಂತು. ಇದು ಯಕ್ಷಗಾನಕ್ಕೆ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಆ ದೇವರ ಕೃಪೆ ಎಂದೇ ನಂಬಿದ್ದೇನೆ. ನನ್ನ ಟ್ರಸ್ಟ್ ಮೂಲಕ ಸಾಧಕ ಕಲಾವಿದರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಮಾಡುತ್ತಿದ್ದೇನೆ. ಇದೇ ಸೇವೆ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷನಾಗಿಯೂ ಮುಂದುವರಿಸಿದ್ದೇನೆ. ಸೇವೆಯಲ್ಲಿಯೇ ಬದುಕಿನ ಸಾರ್ಥಕವನ್ನು ಕಂಡುಕೊಂಡಿದ್ದೇನೆ ಎಂದು ಅವರು ತಿಳಿಸಿದರು.
ಕಲಾ ಪೋಷಕ ವಿಜಯ ಕುಮಾರ್ ಕಳ್ತೂರು, ಆವರ್ಸೆ ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಶಶಿಧರ ಶೆಟ್ಟಿ, ಪ್ರಥಮ ದರ್ಜೆ ಗುತ್ತಿಗೆದಾರ ವಾದಿರಾಜ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿ, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ, ಕಲಾ ಪೋಷಕರೂ ಆಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಯಕ್ಷಲೋಕ ಹೆಬ್ಬೇರಿಯ ಅಧ್ಯಕ್ಷ ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ, ಗೌರವಾಧ್ಯಕ್ಷ ಲಕ್ಷ್ಮಿಶ ಭಾರದ್ವಾಜ್, ವಿಜಯೇಂದ್ರ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಯಕ್ಷಲೋಕ ಹೆಬ್ಬೇರಿ ತಂಡದಿoದ ಗುರು ಸುಬ್ರಹ್ಮಣ್ಯ ಪ್ರಸಾದ್ ಅವರ ನಿರ್ದೇಶನದಲ್ಲಿ ‘ಶ್ರೀರಾಮ ದರ್ಶನ’ ಯಕ್ಷಗಾನ ಪ್ರದರ್ಶನ ನಡೆಯಿತು.
ಬ್ರಹ್ಮಾವರ : ಮಹಿಳೆಯನ್ನು ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಸೆಲ್ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತನನ್ನು ಕೇರಳದ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು ಎನ್ನಲಾಗಿದೆ.
ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನ. 9ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ.
ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ.
ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ರನ್ನು ಸೆಲ್ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ ಆತ ಸಮೀಪದ ಬಾತ್ ರೂಮಿನಲ್ಲಿ ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ : ಉಡುಪಿ ಮತ್ತು ದಕ್ಷಿಣ ಕನ್ನಡದ ಐ.ಸಿ.ಎಸ್.ಇ. ಹಾಗೂ ಸಿ.ಬಿ.ಎಸ್.ಇ. ಶಾಲೆಗಳ ಒಕ್ಕೂಟ ಮತ್ತು ಬ್ರಹ್ಮಾವರ ಎಸ್ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣವನ್ನು ನವಂಬರ್ 11ರಂದು ಬೆಳಗ್ಗೆ 9ಗಂಟೆಗೆ ಬ್ರಹ್ಮಾವರದ ಎಸ್ಎಂಎಸ್ ಕಮ್ಯುನಿಟಿ ಹಾಲ್ನಲ್ಲಿ ಆಯೋಜಿಸಲಾಗಿದೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಎಂಎಸ್ ಶಾಲೆಯ ಪ್ರಾಂಶುಪಾಲೆ ಅಭಿಲಾಷ, ಮಾನವತೆಯ ಔನ್ನತ್ಯಕ್ಕಾಗಿ ಶಿಕ್ಷಣ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುವ ಈ ವಿಚಾರ ಸಂಕಿರಣವನ್ನು ಬ್ರಹ್ಮಾವರದ ಓಎಸ್ಸಿ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ರೆ.ಫಾ.ಎಂ.ಸಿ.ಮಥಾಯ್ ಉದ್ಘಾಟಿಸಲಿರುವರು. ಅಜೀಮ್ ಪ್ರೇಮಿ ಫೌಂಡೇಶನ್ನ ಪ್ರೊ.ಗಿರಿಧರ್ ದಿಕ್ಸೂಚಿ ಭಾಷಣ ಮಾಡಲಿರುವರು ಎಂದರು.
ಡಾ.ನೀತಾ ಇನಾಮ್ದಾರ್, ರಾಜಾರಾಮ್ ತೋಳ್ಳಾಡಿ, ಡಾ.ಅರ್ಚನಾ ಭಟ್, ಅಶೋಕ್ ಕಾಮತ್, ಶುಭಂಕರ್ ಪೌಲ್, ಮೆರಿಡಾ ಡಿ ಅಲ್ವೇಡಾ, ಪ್ರೊ. ಮಾಡ್ಯೂ ಸಿ. ನಯನನ್ ಮೊದಲಾದವರಿಂದ ಉಪನ್ಯಾಸ ಹಾಗೂ ಚರ್ಚೆಗಳು ನಡೆಯಲಿವೆ. ಸಂಜೆ 4ಗಂಟೆಗೆ ನಡೆಯುವ ಸಮಾರೋಪ ಭಾಷಣವನ್ನು ಕನ್ನಡ ಕೀಲಿಮಣೆ ತಜ್ಞ ಪ್ರೊ.ಕೆ.ಪಿ.ರಾವ್ ಮಾಡಲಿದ್ದಾರೆ. ಇದರಲ್ಲಿ ರಾಜ್ಯದ ವಿವಿಧ ಭಾಗದ ಸುಮಾರು 300 ಶಿಕ್ಷಕರು, ಪ್ರಾಂಶುಪಾಲರು, ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶಾಲೆಯ ಕಾರ್ಯದರ್ಶಿ ಲೂವಿಸ್ ಫೆರ್ನಾಂಡಿಸ್, ಒಕ್ಕೂಟದ ಕಾರ್ಯದರ್ಶಿ ಗೀತಾ ಶಶಿಧರ್ ಉಪಸ್ಥಿತರಿದ್ದರು.
ಉಡುಪಿ : ಯಾವುದೇ ಕಲೆ ಇರಲಿ, ಅದನ್ನು ಪೋಷಿಸಿಕೊಂಡು, ಆರಾಧಿಸಿಕೊಂಡು ಬಂದ ಅಭಿಮಾನಿಗಳಿಂದ ಅದು ಅಳಿಯದೆ ಉಳಿಯುತ್ತದೆ. ಹಾಗೆಯೇ ಯಕ್ಷಗಾನದ ಭಾಗವತ ದಿಗ್ಗಜ ಸುಬ್ರಹ್ಮಣ್ಯ ಧಾರೇಶ್ವರ ಅವರು ಆರಂಭಿಸಿರುವ ಯಕ್ಷಗಾನ ಜ್ಞಾನಯಜ್ಞ ಕಾರ್ಯಕ್ರಮವನ್ನು ಅವರ ಅಭಿಮಾನಿಗಳ ಸಹಕಾರದಲ್ಲಿ ನಡೆಸುತ್ತಿರುವುದು ಅಭಿನಂದನೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಅವರು ಬೈಂದೂರಿನ ಕಿರಿಮಂಜೇಶ್ವರ – ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರಮಠದ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಕಾರದಲ್ಲಿ ಹಮ್ಮಿಕೊಂಡ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ‘ತಾಳ ಮದ್ದಲೆ ಸಪ್ತಾಹ’ದ ಸಮಾರೋಪದಲ್ಲಿ ಖ್ಯಾತ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೊಳಿ ಅವರಿಗೆ ತೆಕ್ಕಟ್ಟೆ ಆನಂದ ಮಾಸ್ತರರ ಸ್ಮರಣೆಯ ‘ಕಲಾ ತಪಸ್ವಿ -2024’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಧಾರೇಶ್ವರ ಅವರ ಹೆಸರೇ ಹೇಳುವ ಹಾಗೆ ತನ್ನ ಕಂಠವನ್ನು ಯಕ್ಷಗಾನಕ್ಕೆ ಧಾರೆ ಎರೆದವರು. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅವರ ಪ್ರತಿಭೆಗೆ ಸೋತು 9 ವರ್ಷಗಳ ಹಿಂದೆ ಅವರು ಆರಂಭಿಸಿದ ಈ ಸಪ್ತಾಹ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದೆ. ಅಲ್ಲದೆ ಅವರ ಉಪಸ್ಥಿತಿಯಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ‘ಧಾರೇಶ್ವರ ಅಷ್ಟಾಹ’ ಕಾರ್ಯಕ್ರಮವನ್ನು ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮೂಲಕ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ ಎಂದ ಅವರು, ಧಾರೇಶ್ವರ ಅವರ ಅಭಿಮಾನಿಗಳು ಇಂತಹ ಕಾರ್ಯಕ್ರಮಗಳನ್ನು ತನು-ಮನ-ಧನದಿಂದ ಪ್ರೋತ್ಸಾಹಿಸುತ್ತಿರುವುದನ್ನು ಕಂಡಾಗ ಯಕ್ಷಗಾನ ಕಲೆಯ ಮಹತ್ವದ ಬಗ್ಗೆ ಅರಿವಾಗುತ್ತದೆ ಎಂದು ಅವರು ತಿಳಿಸಿದರು.
ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಮುಖ್ಯಸ್ಥ ಪ್ರದೀಪ್ ಕುಮಾರ್ ಕಲ್ಕೂರ್ ಮಾತನಾಡಿ, ಇಂದು ಕಲೆ, ಸಾಹಿತ್ಯ, ಸಂಸ್ಕೃತಿ ನಶಿಸಿ ಹೋಗುವ ಭಯ ನಮ್ಮಲ್ಲಿದ್ದರೆ ಅದು ತಪ್ಪು. ಎಲ್ಲಿಯವರೆಗೆ ಅಭಿಮಾನಿಗಳು, ಸಂಘಟಕರಿದ್ದಾರೋ ಅಲ್ಲಿಯವರೆಗೆ ಈ ಕಲೆಗೆ ಅಳಿವಿಲ್ಲ. ಆದರೂ ಕಲೆ, ಸಾಹಿತ್ಯದಂತಹ ಕಾರ್ಯಕ್ರಮಗಳು ಸರಕಾರಿ ಪ್ರೊಟೊಕೊಲ್ನಿಂದ ನಡೆಯುವುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ. ಸರ್ವ ರೀತಿಯ ಮಾನ್ಯತೆ, ಸರ್ವರಿಗೂ ಸಮಾನವಾದ ವೇದಿಕೆ ಇದ್ದರೆ ಅದು ಯಕ್ಷಗಾನದಲ್ಲಿ ಮಾತ್ರ. ಯಕ್ಷಗಾನ ಇಂದು ರಾಜಾಶ್ರಯ ಕಳೆದುಕೊಂಡರೂ, ಜನಾಶ್ರಯದಲ್ಲಿ ಬೆಳೆಯುತ್ತಿರುವುದು ಸಂತೋಷ ತಂದಿದೆ ಎಂದರು.
ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಯಕ್ಷಗಾನ ಹಾಗೂ ತಂದೆಯ ಮೇಲಿನ ಅಭಿಮಾನದಿಂದ ಕಾರ್ತಿಕೇಯ ಧಾರೇಶ್ವರ ಅವರು ಈ ಕಾರ್ಯವನ್ನು ನಡೆಸುತ್ತಿರುವುದು ಸಂತೋಷ ತಂದಿದೆ. ಇದನ್ನು ಮುಂದುವರಿಸಿಕೊoಡು ಹೋಗುವ ಜವಾಬ್ದಾರಿ ಧಾರೇಶ್ವರ ಅಭಿಮಾನಿಗಳದ್ದು. ಧಾರೇಶ್ವರ ಅವರು ಆರಂಭಿಸಿರುವ ಈ ಕಾರ್ಯಕ್ರಮ ನಿಲ್ಲಬಾರದು. ಟ್ರಸ್ಟ್ ಇಚ್ಚಿಸಿದರೆ ನಾವು ಕೈ ಜೋಡಿಸಲು ಸಿದ್ಧ ಎಂದರು.
ಕಾರ್ಯಕ್ರಮದಲ್ಲಿ ಯಕ್ಷಗಾನದ ಪ್ರಸಿದ್ಧ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರಿಗೆ ತೆಕ್ಕಟ್ಟೆ ಆನಂದ ಮಾಸ್ತರರ ಸ್ಮರಣೆಯ ‘ಕಲಾ ತಪಸ್ವಿ – 2024’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಯಕ್ಷಗಾನ ಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ, ಅಗಸ್ಥೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಐತಾಳ್ ಕಿರಿಮಂಜೇಶ್ವರ, ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ್ ಹೆಗಡೆ ಹೆರವಟ್ಟಾ, ಮಂಗಳೂರು ಕರ್ನಾಟಕ ಯಕ್ಷಧಾಮದ ಜನಾರ್ದನ ಹಂದೆ, ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟಿನ ಕಾರ್ತಿಕೇಯ ಧಾರೇಶ್ವರ ಮೊದಲಾದವರು ಉಪಸ್ಥಿತರಿದ್ದರು.
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಪರಿಗಣಿತ ವಿಶ್ವವಿದ್ಯಾನಿಲಯ, ಇದು ಭಾರತದ ಪ್ರಮುಖ ಸಂಶೋಧನಾ-ಕೇಂದ್ರಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ, ಇದು ನವೆಂಬರ್ 9ರಂದು ಕೆ ಎಂ ಸಿ ಗ್ರೀನ್ಸ್ನಲ್ಲಿ ತನ್ನ 32ನೇ ಘಟಿಕೋತ್ಸವ ಸಮಾರಂಭದ 2ನೇ ದಿನವನ್ನು ಆಚರಿಸಿತು. ಘಟಿಕೋತ್ಸವವು ಪದವೀಧರರ ಸಾಧನೆಗಳನ್ನು ಆಚರಿಸಿತು ಮತ್ತು ಶೈಕ್ಷಣಿಕ ಉತ್ಕೃಷ್ಟತೆಗೆ ಅವರ ಬದ್ಧತೆಯನ್ನು ಗೌರವಿಸಿತು. ಈ ಪ್ರತಿಷ್ಠಿತ ಕಾರ್ಯಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳನ್ನು ಗೌರವಿಸಲು ಗೌರವಾನ್ವಿತ ಅಧ್ಯಾಪಕರು, ಗಣ್ಯ ಅತಿಥಿಗಳು ಮತ್ತು ಕುಟುಂಬಗಳನ್ನು ಒಟ್ಟುಗೂಡಿಸಿತು.
ಸಮಾರಂಭವು ನವೆಂಬರ್ 8 ರಿಂದ ನವೆಂಬರ್ 10 ರವರೆಗೆ ಮೂರು ದಿನಗಳ ಕಾಲ ನಡೆಯುತ್ತಿದ್ದು, ಮೊದಲ ದಿನದ ಮುಖ್ಯ ಅತಿಥಿಯಾಗಿ ಯುಜಿಸಿ ಅಧ್ಯಕ್ಷರಾದ ಪ್ರೊ.ಮಾಮಿದಾಳ ಜಗದೇಶ್ ಕುಮಾರ್; ಎರಡನೇ ದಿನದ ಮುಖ್ಯ ಅತಿಥಿಯಾಗಿ ಡಾ. ಇಂದ್ರಜಿತ್ ಭಟ್ಟಾಚಾರ್ಯ, ಡೈರೆಕ್ಟರ್ ಜನರಲ್, ನೀರಾ, ನವದೆಹಲಿ; ಮತ್ತು ಮೂರನೇ ದಿನದ ಮುಖ್ಯ ಅತಿಥಿಯಾಗಿ ಡಾ ರಾಜೀವ್ ಬಹ್ಲ್, ಭಾರತ ಸರ್ಕಾರದ ಕಾರ್ಯದರ್ಶಿ, ಆರೋಗ್ಯ ಸಂಶೋಧನಾ ಇಲಾಖೆ ಮತ್ತು ಮಹಾನಿರ್ದೇಶಕರು, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಭಾಗವಹಿಸಲಿದ್ದಾರೆ.

ಘಟಿಕೋತ್ಸವದ 2ನೇ ದಿನದಂದು ವಿದ್ಯಾರ್ಥಿಗಳು ಮತ್ತು ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದ ನವದೆಹಲಿಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರೊಬೊಟಿಕ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ನೀರಾ) ಮಹಾನಿರ್ದೇಶಕ ಡಾ. ಇಂದ್ರಜಿತ್ ಭಟ್ಟಾಚಾರ್ಯ, “ಐವತ್ತು ವರ್ಷಗಳ ಹಿಂದೆ ಬದಲಾವಣೆಯನ್ನು ಪ್ರತಿಬಿಂಬಿಸುತ್ತಾ, ನಾನು ಬಯಸಿದ್ದೆ , ಸಾಧಾರಣ ಸ್ಥಳೀಯ ಮಾರುಕಟ್ಟೆಗಳ ರೂಪಾಂತರ-ಮತ್ತು ಇಂದು, ಅಮೆಜಾನ್ ಮತ್ತು ಸ್ವೀಗ್ಗಿ ನಂತಹ ಕೃತಕ ಬುದ್ದಿಮತ್ತೆ – ಚಾಲಿತ ಪ್ಲಾಟ್ಫಾರ್ಮ್ಗಳು ಅವುಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತವೆ. ತಾಂತ್ರಿಕ ವಿಕಾಸದ ಪ್ರಯಾಣವು ಕೈಗಾರಿಕಾ ಕ್ರಾಂತಿಗಳನ್ನು ಪ್ರತಿಬಿಂಬಿಸುತ್ತದೆ, ಸ್ಟೀಮ್ ಇಂಜಿನ್ಗಳಿಂದ ಸೈಬರ್-ಭೌತಿಕ ವ್ಯವಸ್ಥೆಗಳವರೆಗೆ. ಈಗ, ಕೃತಕ ಬುದ್ದಿಮತ್ತೆ ಬೆಂಕಿಯಂತೆಯೇ ಪರಿವರ್ತಕ ಶಕ್ತಿಯನ್ನು ಹೊಂದಿದೆ, ಜಾಗತಿಕ ಆರ್ಥಿಕತೆಗೆ $15 ಟ್ರಿಲಿಯನ್ ಸೇರಿಸಲು ಮತ್ತು 2030 ರ ವೇಳೆಗೆ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಲು ಹೊಂದಿಸಲಾಗಿದೆ. ನಮ್ಮ ಆಲೋಚನೆ ಸ್ಪಷ್ಟವಾಗಿದೆ: ಕೃತಕ ಬುದ್ದಿಮತ್ತೆ ನಿಮ್ಮ ಕೆಲಸವನ್ನು ತೆಗೆದುಕೊಳ್ಳುವುದಿಲ್ಲ, ಆದರೆ ನೀವು ಮತ್ತು ನಿಮ್ಮ ತಂಡ ಉತ್ಪಾದಕತೆ ಹೆಚ್ಚಿಸಲು ಸುಧಾರಿತ ಕೃತಕ ಬುದ್ದಿಮತ್ತೆಅನ್ನು ಸ್ವೀಕರಿಸಬಹುದು.
ಜನರೇಟಿವ್ ಕೃತಕ ಬುದ್ದಿಮತ್ತೆ (GenAI) ವಿಶೇಷವಾಗಿ ಭರವಸೆ ನೀಡುತ್ತದೆ. ವ್ಯಾಪಕವಾದ ಡೇಟಾವನ್ನು ಸಂಶ್ಲೇಷಿಸುವ ಮತ್ತು ವಿಶ್ಲೇಷಿಸುವ ಮೂಲಕ-ಪಠ್ಯ, ಚಿತ್ರಗಳು, ಆಣ್ವಿಕ ರಚನೆಗಳು-ಇದು ಹೊಸ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯ ರಕ್ಷಣೆಯಂತಹ ಕ್ಷೇತ್ರಗಳಲ್ಲಿ ನಿಖರತೆಯನ್ನು ಹೆಚ್ಚಿಸುತ್ತದೆ, ಬ್ರೈನ್ಸೈಟ್ ಕೃತಕ ಬುದ್ದಿಮತ್ತೆಯಂತಹ ಆವಿಷ್ಕಾರಗಳೊಂದಿಗೆ ಗೆಡ್ಡೆಗಳು ಮತ್ತು ಬುದ್ಧಿಮಾಂದ್ಯತೆಯನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಆದಾಗ್ಯೂ, ಕೃತಕ ಬುದ್ದಿಮತ್ತೆ ಅನ್ನು ಜವಾಬ್ದಾರಿಯುತವಾಗಿ ಅಳವಡಿಸಿಕೊಳ್ಳುವುದು ಅತ್ಯಗತ್ಯ. ಇದರರ್ಥ ಡೇಟಾ ಗುಣಮಟ್ಟವನ್ನು ಎತ್ತಿಹಿಡಿಯುವುದು ಮತ್ತು ಪಕ್ಷಪಾತ, ತಪ್ಪು ಮಾಹಿತಿ ಮತ್ತು ಡೇಟಾ ಗೌಪ್ಯತೆಯಂತಹ ಅಪಾಯಗಳನ್ನು ತಪ್ಪಿಸುವುದು . ನ್ಯಾಯಸಮ್ಮತತೆ ಮತ್ತು ಹೊಣೆಗಾರಿಕೆಯಲ್ಲಿ ನೆಲೆಗೊಂಡಿರುವ ನೈತಿಕ ಕೃತಕ ಬುದ್ದಿಮತ್ತೆ, ಜಿ ಪೇ (GPAI) ಮತ್ತು ಜವಾಬ್ದಾರಿಯುತ ನಾವೀನ್ಯತೆಗೆ ಕರೆ ನೀಡುವ ಉಪಕ್ರಮಗಳಂತಹ ಜಾಗತಿಕ ಪ್ರಯತ್ನಗಳಿಗೆ ಪ್ರಮುಖವಾಗಿದೆ. ಪಿಎಂ ಮೋದಿ ಪ್ರತಿಪಾದಿಸುವಂತೆ, ಜಾಗತಿಕ ಮಾನದಂಡಗಳು ಕೃತಕ ಬುದ್ದಿಮತ್ತೆಯು ಮಾನವೀಯತೆಯ ಒಳಿತನ್ನು ಪೂರೈಸುತ್ತದೆ ಎಂದು ಖಚಿತಪಡಿಸಿಕೊಳ್ಳಬೇಕು.
ಶಿಕ್ಷಣವು ಸಹ ಕೃತಕ ಬುದ್ದಿಮತ್ತೆ ಮೂಲಕ ರೂಪಾಂತರಗೊಳ್ಳುತ್ತದೆ, ಇದು ಹೊಂದಾಣಿಕೆಯ ಕಲಿಕೆ, ಅಂತರಶಿಸ್ತೀಯ ಸಂಶೋಧನೆ ಮತ್ತು ಬುದ್ಧಿವಂತಿಕೆಯ ಉತ್ಪಾದನೆ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಕೃತಕ ಬುದ್ದಿಮತ್ತೆ ಚಾಲಿತ ಸೈಬರ್ ಸುರಕ್ಷತೆಯಾದ್ಯಂತ ಪ್ರಗತಿಯನ್ನು ನೀಡುತ್ತದೆ. GenAI ನಲ್ಲಿ ಉದಯೋನ್ಮುಖ ಪಾತ್ರಗಳಿಗೆ ಪ್ರಾಂಪ್ಟ್ ಇಂಜಿನಿಯರಿಂಗ್ ಮತ್ತು LLMOps ನಲ್ಲಿ ದೊಡ್ಡ ಭಾಷಾ ಮಾದರಿಗಳು ಮತ್ತು ಉತ್ತಮ-ಟ್ಯೂನ್ ಕೃತಕ ಬುದ್ದಿಮತ್ತೆ ಔಟ್ಪುಟ್ಗಳನ್ನು ನಿರ್ವಹಿಸಲು ಕೌಶಲ್ಯಗಳು ಬೇಕಾಗುತ್ತವೆ.
ಭವಿಷ್ಯವು ಸೃಷ್ಟಿಯಾಗಿದೆ, ಆಕಸ್ಮಿಕವಲ್ಲ. ಮೊದಲು ಬಂದವರಿಂದ ಸ್ಫೂರ್ತಿ ಪಡೆಯಿರಿ – ಮಾರ್ಕ್ ಆಂಡ್ರೆಸೆನ್ನಂತಹ ನಾಯಕರು ಕೃತಕ ಬುದ್ದಿಮತ್ತೆಯನ್ನು ಮಾನವ ವರ್ಧನೆಗಾಗಿ ಒಂದು ಶಕ್ತಿಯಾಗಿ ನೋಡುತ್ತಾರೆ. ಸಮೃದ್ಧ ಭಾರತಕ್ಕಾಗಿ, 5Cಗಳೊಂದಿಗೆ ಹೊಂದಾಣಿಕೆ ಮಾಡಿ: ವಿಮರ್ಶಾತ್ಮಕ ಚಿಂತನೆ, ಸಂವಹನ, ಸಹಯೋಗ, ಸೃಜನಶೀಲತೆ ಮತ್ತು ನಿರಂತರ ಕಲಿಕೆ. ಚಿಂತನಶೀಲವಾಗಿ ತೊಡಗಿಸಿಕೊಳ್ಳಿ, ಡಿಜಿಟಲ್ ನೈರ್ಮಲ್ಯವನ್ನು ಅಭ್ಯಾಸ ಮಾಡಿ ಮತ್ತು ನೈತಿಕ ಅಭ್ಯಾಸಗಳನ್ನು ಅನುಸರಿಸಿ.
ಅಂತಿಮವಾಗಿ, ನಿಮ್ಮ ಶಿಕ್ಷಣವು ನಿಮ್ಮ ನಡವಳಿಕೆಯಲ್ಲಿ ತೋರಿಸುತ್ತದೆ ಎಂಬುದನ್ನು ನೆನಪಿಡಿ. ಸಕಾರಾತ್ಮಕ ದೃಢೀಕರಣಗಳು ಮತ್ತು ನೈತಿಕ ಆಯ್ಕೆಗಳೊಂದಿಗೆ ನಿಮ್ಮ ಮನಸ್ಸನ್ನು ಬೆಳೆಸಿಕೊಳ್ಳಿ ಮತ್ತು ನಾವೀನ್ಯತೆ ಮತ್ತು ಸಮಗ್ರತೆಯಿಂದ ಮಾರ್ಗದರ್ಶಿಸಲ್ಪಟ್ಟ ಭವಿಷ್ಯವನ್ನು ರಚಿಸಿ.
ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಅವರು, “ಇಂದು ನಾವು ಮಾಹೆಯ 32 ನೇ ಘಟಿಕೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ , ನಾವು ನಮ್ಮ ವಿದ್ಯಾರ್ಥಿಗಳ ಸಾಧನೆಗಳನ್ನು ಮಾತ್ರವಲ್ಲದೆ ನಮ್ಮ ಸಂಸ್ಥೆಯನ್ನು ವ್ಯಾಖ್ಯಾನಿಸುವ ಸಮರ್ಪಣೆ, ಸ್ಥಿತಿಸ್ಥಾಪಕತ್ವ ಮತ್ತು ಶ್ರೇಷ್ಠತೆಯ ಅನ್ವೇಷಣೆಯ ಮನೋಭಾವವನ್ನು ಗೌರವಿಸುತ್ತೇವೆ. ಪ್ರತಿಯೊಬ್ಬ ಪದವೀಧರರು ಕಠಿಣ ಪರಿಶ್ರಮ, ತ್ಯಾಗ ಮತ್ತು ಬೆಳವಣಿಗೆಯ ಅಧ್ಯಾಯವನ್ನು ಪ್ರತಿನಿಧಿಸುತ್ತಾರೆ-ಕುಟುಂಬದ ಅಚಲವಾದ ಬೆಂಬಲ, ನಮ್ಮ ಅಧ್ಯಾಪಕರ ಮಾರ್ಗದರ್ಶನ ಮತ್ತು ಇದು ಈ ಶೈಕ್ಷಣಿಕ ಸಮುದಾಯದೊಳಗಿನ ಒಡನಾಟದಿಂದ ಪೋಷಿಸಿದ ಕನಸುಗಳ ಕಥೆ. ಈ ಘಟಿಕೋತ್ಸವವು ಪ್ರತಿ ಪದವೀಧರರು ಹೊರಬರುತ್ತಿರುವಾಗ ಅವರ ಮುಂದಿರುವ ಅಂತ್ಯವಿಲ್ಲದ ಸಾಧ್ಯತೆಗಳಿಗೆ ಸಾಕ್ಷಿಯಾಗಿದೆ, ಅವರು ಬದಲಾವಣೆಯನ್ನು ಸೃಷ್ಟಿಸಲು, ಹೊಸತನವನ್ನು ಹೆಚ್ಚಿಸಲು ಮತ್ತು ಸಮಾಜಕ್ಕೆ ಅರ್ಥಪೂರ್ಣವಾಗಿ ಕೊಡುಗೆ ನೀಡಲು ಸಜ್ಜುಗೊಂಡಿದ್ದಾರೆ. ಮಾಹೆಯಲ್ಲಿ, ನಾವು ಕೇವಲ ಶೈಕ್ಷಣಿಕವಾಗಿ ಶ್ರೀಮಂತವಾಗಿರದೆ ನಾಳಿನ ನಾಯಕರಾಗಲು ಮಾರ್ಗದರ್ಶನ ನೀಡುವ ಮೌಲ್ಯಗಳಲ್ಲಿ ನೆಲೆಗೊಂಡಿರುವ ಮನಸ್ಸುಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತೇವೆ. ನಾವು ನಿಮ್ಮ ಪ್ರತಿಯೊಬ್ಬರ ಬಗ್ಗೆ ಅಪಾರವಾಗಿ ಹೆಮ್ಮೆಪಡುತ್ತೇವೆ ಮತ್ತು ನಿಮ್ಮ ಮುಂದಿನ ಪ್ರಯಾಣವು ನಿಮ್ಮ ತುಂಬಿದ ಮೌಲ್ಯಗಳನ್ನು ಸಾಕಾರಗೊಳಿಸುವುದನ್ನು ಮುಂದುವರಿಸುತ್ತದೆ ಎಂಬ ವಿಶ್ವಾಸವಿದೆ” ಎಂದು ಅಭಿಪ್ರಾಯ ಪಟ್ಟರು.
ಈ ಸಂದರ್ಭದಲ್ಲಿ ಮಾಹೆಯ ಉಪಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ (ಡಾ) ಎಂ.ಡಿ. ವೆಂಕಟೇಶ್, ವಿಎಸ್ಎಂ (ನಿವೃತ್ತ), “ಮಾಹೆಯಲ್ಲಿ, ಶೈಕ್ಷಣಿಕ ಉತ್ಕೃಷ್ಟತೆಗೆ ನಮ್ಮ ಬದ್ಧತೆಯು ಸಮಗ್ರತೆ, ಸ್ಥಿತಿಸ್ಥಾಪಕತ್ವ ಮತ್ತು ಸಮಾಜಕ್ಕೆ ಸೇವೆಯ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಕೈಜೋಡಿಸುತ್ತದೆ. ಇಂದಿನ ಸಾಧನೆಗಳು ನಮ್ಮ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗಳ ಸಮರ್ಪಣೆಯ ಪ್ರತಿಬಿಂಬವಾಗಿದೆ, ಅವರು ಗಡಿಗಳನ್ನು ತಳ್ಳಲು ಮತ್ತು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಯಶಸ್ಸನ್ನು ಮರು ವ್ಯಾಖ್ಯಾನಿಸಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಾರೆ. ನಮ್ಮ ಪದವೀಧರರು ತಮ್ಮ ವೃತ್ತಿಪರ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ, ಅವರು ನುರಿತವರು ಮಾತ್ರವಲ್ಲದೆ ಸಮಾಜಕ್ಕೆ ಅರ್ಥಪೂರ್ಣ ಕೊಡುಗೆಗಳನ್ನು ನೀಡಲು ಸಿದ್ಧರಾಗಿದ್ದಾರೆ ಎಂದು ತಿಳಿದುಕೊಳ್ಳಲು ನಾವು ಹೆಮ್ಮೆಪಡುತ್ತೇವೆ. ಜಗತ್ತನ್ನು ಧನಾತ್ಮಕವಾಗಿ ಆವಿಷ್ಕರಿಸುವ, ಪ್ರೇರೇಪಿಸುವ ಮತ್ತು ಪ್ರಭಾವ ಬೀರುವ ಭವಿಷ್ಯದ ನಾಯಕರನ್ನು ಪೋಷಿಸಲು ಮಾಹೆ ಸಮರ್ಪಿತವಾಗಿದೆ” ಎಂದರು.
ಮಾಹೆಯ ರಿಜಿಸ್ಟ್ರಾರ್ ಡಾ ಗಿರಿಧರ್ ಕಿಣಿ ಪಿ ಮಾತನಾಡಿ, “ಈ ಘಟಿಕೋತ್ಸವವು ಈ ಮೌಲ್ಯಗಳ ಆಚರಣೆಯಾಗಿದೆ, ಏಕೆಂದರೆ ಇದು ನಮ್ಮ ವಿದ್ಯಾರ್ಥಿಗಳ ವರ್ಷಗಳ ಪರಿಶ್ರಮ ಮತ್ತು ಪರಿಶ್ರಮದ ಪರಾಕಾಷ್ಠೆಯನ್ನು ಸೂಚಿಸುತ್ತದೆ, ಇದರಲ್ಲಿ ಪ್ರಮುಖ ಪಾತ್ರ ವಹಿಸಿದ ಸಮರ್ಪಿತ ಅಧ್ಯಾಪಕರು ಮತ್ತು ಸಿಬ್ಬಂದಿ ಬೆಂಬಲ ಸೇರಿದೆ ಮತ್ತು ಅವರ ಪಯಣವನ್ನು ರೂಪಿಸಿದ್ದಾರೆ . ಇಂದು ನಮ್ಮ ಪ್ರತಿಯೊಬ್ಬ ಪದವೀಧರರು ಶಿಕ್ಷಣದ ಪರಿವರ್ತಕ ಶಕ್ತಿ ಮತ್ತು ಮೌಲ್ಯಗಳು-ಚಾಲಿತ ನಾಯಕತ್ವದ ಪ್ರಾಮುಖ್ಯತೆಗೆ ಸಾಕ್ಷಿಯಾಗಿ ನಿಂತಿದ್ದಾರೆ. ನಮ್ಮ ವಿದ್ಯಾರ್ಥಿಗಳ ಸಾಧನೆಗಳ ಬಗ್ಗೆ ನಾವು ಅಪಾರ ಹೆಮ್ಮೆ ಪಡುತ್ತೇವೆ, ಅವರಿಗೆ ಕಾಯುತ್ತಿರುವ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ಅವರು ಉತ್ತಮವಾಗಿ ಸಿದ್ಧರಾಗಿದ್ದಾರೆ ಎಂಬ ವಿಶ್ವಾಸವಿದೆ. ಅವರು ಜಗತ್ತಿಗೆ ಕಾಲಿಡುತ್ತಿದ್ದಂತೆ, ಅವರು ಮಾಹೆಯ ಮೌಲ್ಯಗಳು ಮತ್ತು ಚೈತನ್ಯವನ್ನು ಎತ್ತಿಹಿಡಿಯುತ್ತಾರೆ, ಸಮಾಜಕ್ಕೆ ಅರ್ಥಪೂರ್ಣ ಕೊಡುಗೆಗಳನ್ನು ನೀಡುತ್ತಾರೆ ಮತ್ತು ನಮ್ಮ ಸಂಸ್ಥೆಯನ್ನು ವ್ಯಾಖ್ಯಾನಿಸುವ ಶ್ರೇಷ್ಠತೆಯ ದೃಷ್ಟಿಕೋನವನ್ನು ಸಾಕಾರಗೊಳಿಸುತ್ತಾರೆ ಎಂದು ನಮಗೆ ಖಚಿತವಾಗಿದೆ ಎಂದರು .
ಮಣಿಪಾಲದ ಎಂಐಸಿ ನಿರ್ದೇಶಕಿ ಡಾ ಪದ್ಮಾ ರಾಣಿ ಅವರು ಗಣ್ಯರು, ಪೋಷಕರು, ಕಾಲೇಜು ಅಧ್ಯಾಪಕರು, ವಿದ್ಯಾರ್ಥಿಗಳು, ಪತ್ರಿಕಾ ಮತ್ತು ಮಾಧ್ಯಮ ಪ್ರತಿನಿಧಿಗಳು ಮತ್ತು ನೆರೆದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.
ಮೊಲೆಕ್ಯುಲರ್ ಬಯಾಲಜಿ ಯಲ್ಲಿ ಎಂ ಎಸ್ಸಿ ಮತ್ತು ಎಂ ಎಸ್ ಎಲ್ ಎಸ್ ನಲ್ಲಿ ಎಚ್ ಜಿ ವ್ಯಾಸಂಗ ಮಾಡುತ್ತಿರುವ ಸಿಯೋನಾ ರೆಬೆಲ್ಲೊ , ಮಣಿಪಾಲದ ಎಂಐಸಿಯಿಂದ ಬಿಎ ಮೀಡಿಯಾ ಮತ್ತು ಕಮ್ಯುನಿಕೇಶನ್ ಅನ್ನು ವ್ಯಾಸಂಗ ಮಾಡುತ್ತಿರುವ ಸಮರಗಿ ಪಾತ್ರ; ಮಣಿಪಾಲದ PSPH ನಲ್ಲಿ ಎಂಎಸ್ಸಿ(ಬಯೋಸ್ಟಾಟಿಸ್ಟಿಕ್ಸ್) ವ್ಯಾಸಂಗ ಮಾಡುತ್ತಿರುವ ಜೀವಿತ್ಕಾ ಕೆ ಎಂ ಅವರು ತಮ್ಮ ಕ್ಷೇತ್ರಗಳಲ್ಲಿನ ಅಸಾಧಾರಣ ಕೊಡುಗೆಗಳು ಮತ್ತು ಸಾಧನೆಗಳಿಗಾಗಿ 2024 ರಲ್ಲಿ ಪ್ರತಿಷ್ಠಿತ ಡಾ. ಟಿಎಂಎ ಪೈ ಚಿನ್ನದ ಪದಕವನ್ನು ಪಡೆದರು. ಈ ಪುರಸ್ಕಾರವು ಶೈಕ್ಷಣಿಕ ಉತ್ಕೃಷ್ಟತೆ ಮತ್ತು ವಿವಿಧ ವಿಭಾಗಗಳಲ್ಲಿ ಅನುಕರಣೀಯ ಕಾರ್ಯಕ್ಷಮತೆಗೆ ಅವರ ಬದ್ಧತೆಯನ್ನು ಗೌರವಿಸುತ್ತದೆ, ಉನ್ನತ ಶಿಕ್ಷಣದಲ್ಲಿ ಪ್ರತಿಭೆ ಮತ್ತು ಶ್ರೇಷ್ಠತೆಯನ್ನು ಬೆಳೆಸಲು ಮಾಹೆಯ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ.
ಡಾ ನಾರಾಯಣ ಸಭಾಹಿತ್, ಸಹ ಉಪ ಕುಲಪತಿ (ತಂತ್ರಜ್ಞಾನ ಮತ್ತು ವಿಜ್ಞಾನ) ಗಣ್ಯರನ್ನು ಸ್ವಾಗತಿಸಿದರು ಮತ್ತು ಎರಡನೇ ದಿನದ ಕಾರ್ಯಕ್ರಮವನ್ನು ಮಣಿಪಾಲದ ಎಂಕಾಡ್ಸ್ ನ ಸಹಾಯಕ ಪ್ರಾಧ್ಯಾಪಕರಾದ ಡಾ ಆನಂದ್ ದೀಪ್ ಶುಕ್ಲಾ ನಿರ್ವಹಿಸಿದರು.