ವಿಟ್ಲ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇ. ಧ. ಗ್ರಾ. ಯೋ.ಯಿಂದ ಮಂಜೂರಾದ ಸಹಾಯಧನದ ಚೆಕ್ ಹಸ್ತಾಂತರ

ಬಂಟ್ವಾಳ : ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠದ ಪುನರ್ ನಿರ್ಮಾಣ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 2 ಲಕ್ಷ ರೂ.ನ ಸಹಾಯಧನದ ಚೆಕ್ಕನ್ನು ವಿಟ್ಲ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಗುರು ಶ್ರದ್ಧಾನಾಥಾಜಿ ಮಠಾಧೀಶರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾಧಿಕಾರಿ ರಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಯಶವಂತ್ ವಿಟ್ಲ, ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಗೀತಾ ಪ್ರಕಾಶ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಳ್ಳಾಲ್, ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ನವೀನ್ ಚಂದ್ರ, ವಲಯ ಮೇಲ್ವಿಚಾರಕರಾಕಿ ಸರಿತಾ, ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ