ಕಿಂಡಿ ಆಣೆಕಟ್ಟಿನಲ್ಲಿ ನೀರಿಗೆ ಬಿದ್ದು ಪೌರ ಕಾರ್ಮಿಕ ಸಾವು

ಶಿರ್ವ : ಪಾದೂರು ಗ್ರಾಮದ ಪೈಂತೂರು ಕಿಂಡಿ ಆಣೆಕಟ್ಟಿನಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಪೌರ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಮೃತರನ್ನು ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ ನಿವಾಸಿ ಸುರೇಶ್(42) ಎಂದು ಗುರುತಿಸಲಾಗಿದೆ. ಕಾಪು ಪುರಸಭೆಯಲ್ಲಿ ಪೌರ ಕಾರ್ಮಿಕರಾಗಿರುವ ಇವರಿಗೆ, ಮೀನು ಹಿಡಿಯುವ ಅಭ್ಯಾಸವಿದ್ದು ಅದರಂತೆ ಮನೆಯಿಂದ ಮೀನು ಹಿಡಿಯಲು ಹೋದವರು ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಇವರ ಮೃತದೇಹವು ಪೈಂತೂರು ಕಿಂಡಿ ಅಣೆಕಟ್ಟಿನ ನೀರಿನಲ್ಲಿ ಪತ್ತೆಯಾಗಿದೆ.

ಇವರು ಗಾಳ ಹಾಕಿ ಮೀನು ಹಿಡಿಯುವ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ