ಶಕ್ತಿನಗರ ನಾಲ್ಯಪದವಿನ ಪಿಎಂಶ್ರೀ ಶಾಲೆಗೆ ಅಭಿನಂದನೆಗಳು : ಶಾಸಕ ಕಾಮತ್

ಮಂಗಳೂರು : ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ National conference on school leadership 2025: examplars of change and innovation‌ಗೆ ಕರ್ನಾಟಕ ರಾಜ್ಯದಿಂದ ಅತ್ಯುತ್ತಮ ಶಾಲೆಯಾಗಿ ಶಕ್ತಿನಗರದ ನಾಲ್ಯಪದವಿನ ಪಿಎಂ ಶ್ರೀ ಕುವೆಂಪು ಶತಮಾನದ ಉನ್ನತೀಕರಿಸಿದ ಸರಕಾರಿ ಮಾ.ಹಿ.ಪ್ರಾ.ಶಾಲೆಯು ನಾಮನಿರ್ದೇಶನಗೊಂಡಿದ್ದು ಶಾಸಕ ವೇದವ್ಯಾಸ ಕಾಮತ್‌‌ರವರು ಶಾಲೆಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ ಕನಸಿನ ಯೋಜನೆಯಾದ ಪಿಎಂ ಶ್ರೀ ಯೋಜನೆಯನ್ನು ಈ ಹಿಂದೆ ಇದೇ ಶಾಲೆಯಲ್ಲಿ ನಾನೇ ಉದ್ಘಾಟಿಸಿದ್ದೆ. ಕೇಂದ್ರ ಸರ್ಕಾರದ ಅನುದಾನದಡಿಯಲ್ಲಿ ಜಾರಿಗೊಳ್ಳಲಿರುವ ಈ ಯೋಜನೆಯು ಶಾಲೆಗಳಲ್ಲಿ ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್‌ ರೂಂ, ಗ್ರಂಥಾಲಯಗಳು, ಕ್ರೀಡಾ ಸಲಕರಣೆಗಳು, ಕಲಾ ಕೊಠಡಿ ಸಹಿತ ಅತ್ಯಾಧುನಿಕ ಶಿಕ್ಷಣವನ್ನು ಒದಗಿಸಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಮೇಲ್ದರ್ಜೆಗೇರಿಸುವ ಗುರಿ ಹೊಂದಿದೆ. ಸರಕಾರಿ ಶಾಲೆಗಳು ಹೆಚ್ಚು ಹೆಚ್ಚು ಅಭಿವೃದ್ಧಿಯಾಗಬೇಕು, ಇಲ್ಲಿನ ಮಕ್ಕಳು ರಾಷ್ಟ್ರಮಟ್ಟದಲ್ಲಿ ಬೆಳೆಯಬೇಕು ಎಂಬುದೇ ಮಾನ್ಯ ಪ್ರಧಾನಿಗಳ ಸಹಿತ ನಮ್ಮೆಲ್ಲರ ಆಶಯವಾಗಿದೆ ಎಂದರು.

ಕೇಂದ್ರ ಸರ್ಕಾರದ ಆಶಯಕ್ಕೆ ತಕ್ಕಂತೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಿರುವ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಮಸ್ತ ಆಡಳಿತ ಮಂಡಳಿ ಅಭಿನಂದನೆಗೆ ಅರ್ಹರು ಎಂದು ಶಾಸಕರು ಹೇಳಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್