ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಪುನರ್ವಸು ಮಳೆ ಅಬ್ಬರ; ಜನ, ಜಾನುವಾರುಗಳ ರಕ್ಷಣೆ

ಉಡುಪಿ : ಜಿಲ್ಲೆಯಲ್ಲಿ ನಿನ್ನೆ ಪ್ರಾರಂಭಗೊಂಡ ಮಳೆ ಮುಂದುವರೆದಿದ್ದು ಉಡುಪಿಯ ಹಲವೆಡೆ ಜನ ಜಾನುವಾರುಗಳನ್ನು ಅಗ್ನಿಶಾಮಕ ದಳ ರಕ್ಷಣೆ ಮಾಡಿದೆ. ಮುಖ್ಯವಾಗಿ ತಗ್ಗುಪ್ರದೇಶಗಳಾದ ಬೈಲಕೆರೆ, ಕಲ್ಸಂಕ ಮಠದಬೆಟ್ಟುವಿನ ಬಹುಭಾಗ ಜಲಾವೃತಗೊಂಡಿವೆ. ಗುಂಡಿಬೈಲುವಿನಲ್ಲಿ ನೆರೆ ನೀರು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದ್ದ ಅಗ್ನಿಶಾಮಕ ದಳ ಹಲವರನ್ನು ರಕ್ಷಣೆ ಮಾಡಿದೆ.

ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿ ಒಂದೇ ಮನೆಯ ಮೂವರನ್ನು ರಕ್ಷಣೆ ಮಾಡಿತು. ಉಳಿದಂತೆ ಪಾಡಿಗಾರು ಸಮೀಪ ನಾಲ್ಕು ಮನೆಗಳಿಂದ ಜನರನ್ನು ಎತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಯಿತು. ಪೊಲೀಸ್ ಅಗ್ನಿಶಾಮಕ ದಳದ ಜೊತೆಗೆ ಸಾರ್ವಜನಿಕರು ಕೂಡ ರಕ್ಷಣಾ ಕಾರ್ಯದಲ್ಲಿ ಭಾಗಿಯಾದರು.

ಗುಂಡಿಬೈಲುವಿನಲ್ಲಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ಸ್ಥಳಕ್ಕೆ ನಗರಸಭೆ ಆಯುಕ್ತ ರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಬೈಂದೂರು ಮತ್ತು ಕುಂದಾಪುರದಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು ಆ ಭಾಗದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!