ನಿರಂತರ ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳು ಧಾರವಾಡ ಜೈಲಿಗೆ

ಉಡುಪಿ : ಮಾದಕ ವಸ್ತು ಗಾಂಜಾ ವಿರುದ್ಧ ಸಮರ ಸಾರಿರುವ ಜಿಲ್ಲಾ ಪೊಲೀಸರು ಈ ಪಿಡುಗಿನ ವಿರುದ್ಧ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜೈಲಿಗೆ ಅಟ್ಟಿದ್ದಾರೆ. ಕೊಳಲಗಿರಿಯ ಕೃಷ್ಣ ಆಚಾರಿ (43) ಹಾಗೂ ಕೆಳಾರ್ಕಳಬೆಟ್ಟುವಿನ ಅಬ್ದುಲ್ ಜಬ್ಬಾರ್ (27) ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟದ ಬಗ್ಗೆ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಇವರಿಬ್ಬರನ್ನು ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಿ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ