“ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ವಾಟ್ಸ್ಆ್ಯಪ್ ಸಂದೇಶ – ಆರೋಪಿ ವಶಕ್ಕೆ

ಸುರತ್ಕಲ್ : “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಈತ ಯುವತಿಯ ಸಹೋದರನಿಗೆ ವಾಟ್ಸ್‌ಆ್ಯಪ್ ಮೆಸೇಜ್ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿಯ ಕುಟುಂಬ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್