ಸಹಕಾರಿ ಧುರೀಣ, ಸಾಮಾಜಿಕ ಮುಂದಾಳು, ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

ಹೆಬ್ರಿ : ಶತಾಯುಷಿ ಮುದ್ರಾಡಿಯ ನಿವಾಸಿ ಕಜ್ಕೆ ಮಂಜುನಾಥ್ ಕಾಮತ್ (102) ನಿಧನ ಹೊಂದಿದರು.

ವರಂಗ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮುದ್ರಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ನಾಡ್ಪಾಲು ಗ್ರಾಮದ ಸೋಮೇಶ್ವರ ವೆಂಕಟರಮಣ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿ, ಮುದ್ರಾಡಿ ಶ್ರೀರಾಮ ಭಜನಾ ಮಂಡಳಿಯ ಅಧ್ಯಕ್ಷರಾಗಿ, ಮುದ್ರಾಡಿಯ ಸಾರ್ವಜನಿಕ ಶ್ರೀಗಣೇಶೋತ್ಸವ ಅಧ್ಯಕ್ಷರಾಗಿ ಹೀಗೆ ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು 4 ಪುತ್ರರು, 5 ಪುತ್ರಿಯರನ್ನು ಅಗಲಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ