ಮೂಡುಸಗ್ರಿ ಹಾನಿಯಾದ ಕಿರುಸೇತುವೆ 9.50 ಲಕ್ಷ ವೆಚ್ಚದಲ್ಲಿ ಶೀಘ್ರ ಮರು ನಿರ್ಮಾಣ : ಯಶ್‌ಪಾಲ್ ಸುವರ್ಣ

ಉಡುಪಿ : ಮೂಡುಸಗ್ರಿ ವಾರ್ಡಿನ ಇಂದ್ರಾಳಿ ಸಗ್ರಿ ಶಾಲೆ ಸಂಪರ್ಕ ರಸ್ತೆಯ ಕಿರು ಸೇತುವೆ ಕುಸಿತಗೊಂಡಿರುವ ಸ್ಥಳಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಿರು ಸೇತುವೆಗೆ ಹಾನಿಯಾಗಿ ವಾಹನ ಸಂಚಾರ ನಿಷೇಧವಾದ ಹಿನ್ನೆಲೆಯಲ್ಲಿ ಈ ಭಾಗದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಈಗಾಗಲೇ ನಗರಸಭೆಯ ಮೂಲಕ ಹೊಸ ಕಿರು ಸೇತುವೆಗೆ 9.50 ಲಕ್ಷ ಅನುದಾನ ಒದಗಿಸಿದ್ದು ತಕ್ಷಣ ಕಾಮಗಾರಿ ಆರಂಭಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಭಾರತಿ ಪ್ರಶಾಂತ್, ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪಕ್ಷದ ಪ್ರಮುಖರಾದ ಪ್ರಶಾಂತ್, ಹೇಮಂತ, ಸದಾನಂದ ನಾಯಕ್, ಸುಮಾ ನಾಯ್ಕ್, ನಗರಸಭೆಯ ಎ ಇ ಇ ದುರ್ಗಾಪ್ರಸಾದ್, ಇಂಜಿನಿಯರ್ ಚೇತನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ