ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ; ಸಮಸ್ಯೆ ಬಗೆಹರಿಸುವ ಭರವಸೆ

ಪಡುಬಿದ್ರಿ : ಇಲ್ಲಿನ ನಡಿಪಟ್ಣ ಬಳಿ ಕಡಲ್ಕೊರೆತದಿಂದ ಅಪಾಯದಂಚಿನಲ್ಲಿರುವ ಪ್ರದೇಶಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಭರವಸೆ ವ್ಯಕ್ತ ಪಡಿಸಿದರು.ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಹಿನ್ನಲೆಯಲ್ಲಿ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯವರನ್ನು ಸ್ಥಳೀಯರು ಒತ್ತಾಯಿಸಿದರು.

ಸದ್ಯ ಅಪಾಯದಂಚಿನಲ್ಲಿರುವ ಮೀನುಗಾರಿಕಾ ಪರಿಕರಗಳ ಶೇಕರಣ ಕೊಠಡಿ ಸಮುದ್ರ ಪಾಲಾಗುವ ಸಾಧ್ಯತೆ ಇರುವ ಕಾರಣ ಸುಮಾರು 60ಲಕ್ಷ ರೂಪಾಯಿಗಳ ಪರಿಕರಗಳನ್ನು ಸ್ಥಳಾಂತರ ಮಾಡಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿಯವರ ಗಮನಕ್ಕೆ ಮೀನುಗಾರ ಪ್ರಮುಖರು ತಂದರು. ತಾತ್ಕಾಲಿಕವಾಗಿ ಬಂಡೆ ಹಾಕುವ ಕಾರ್ಯ ಶೀಘ್ರ ಪ್ರಾರಂಭಿಸಲಾಗುವುದು. ಅದು ಈ ಕಡಲಬ್ಬರದ ಮಧ್ಯೆ ಎಷ್ಟು ಪರಿಣಾಮಕಾರಿ ಎಂಬುದು ತಿಳಿಯದು. ಈ ಪ್ರದೇಶಕ್ಕೆ ಯಾರೂ ಬಾರದಂತೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಕಾಪು ತಹಶಿಲ್ದಾರ್ ಪ್ರತಿಭಾ, ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶೋಭಾ ಹಾಗೂ ಸ್ಥಳೀಯ ಮೀನುಗಾರ ಪ್ರಮುಖರು ಸ್ಥಳದಲ್ಲಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ