ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕೋಟ : ಕಡಲ್ಕೊರೆತಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆ ಲೈಟ್‌ಹೌಸ್‌ ಹಾಗೂ ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರು ಪಡುಕರೆ ವಿವಿಧ ಭಾಗಗಳಿಗೆ ಭೇಟಿ ನೀಡಿದರು.

ಕೋಟ ಹೋಬಳಿಯ ವಿವಿಧ ಕಡೆಗಳಲ್ಲಿ ನಿರಂತರ ಕಡಲ್ಕೊರೆತದಿಂದ ತೀರ ಪ್ರದೇಶಕ್ಕೆ ಹಾನಿ ಉಂಟಾಗುತ್ತಿದ್ದು, ಈ ಬಗ್ಗೆ ಶಾಶ್ವತ ಪರಿಹಾರ ಅಗತ್ಯವಿದೆ. ಪ್ರಸ್ತುತ ಜಿಲ್ಲೆಯ ಪ್ರಮುಖ ಕಡಲ್ಕೊರೆತ ಪ್ರದೇಶಗಳಲ್ಲಿ ಪರಿಹಾರಕ್ಕೆ 5 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮೀನುಗಾರಿಕೆ ಇಲಾಖೆ ಎಂಜಿನಿಯರ್‌ ಡಯಾಸ್‌, ಎ.ಇ.ಇ. ಶೋಭಾ, ಸ್ಥಳೀಯ ಗ್ರಾ.ಪಂ. ಪ್ರತಿನಿಧಿಗಳು ಜತೆಗಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ