ಬೀಚ್‌ನಲ್ಲಿ ದ್ವಿಚಕ್ರ ವಾಹನ, ಮೊಬೈಲ್‌ ಬಿಟ್ಟು ನಾಪತ್ತೆಯಾದ ಯುವಕನ ಮೃತದೇಹ ಪತ್ತೆ

ಕಾಪು : ಕಾಪು ಬೀಚ್‌ನಲ್ಲಿ ದ್ವಿಚಕ್ರ ವಾಹನ, ಮೊಬೈಲ್‌ ಬಿಟ್ಟು ನಾಪತ್ತೆಯಾದ ಯುವಕನ ಮೃತದೇಹ ಶುಕ್ರವಾರ ಸಂಜೆ ವೇಳೆ ಕಡೆಕಾರು – ಪಡುಕೆರೆ ಕಡಲ ತೀರದಲ್ಲಿ ಪತ್ತೆಯಾಗಿದೆ.

ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್‌ ಎಂಬವರ ಪುತ್ರ 20ರ ಹರೆಯದ ಕರಣ್‌ ಸಾಲ್ಯಾನ್‌ ಗುರುವಾರ ರಾತ್ರಿಯಿಂದ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ ಕಾಪು ಲೈಟ್ ಹೌಸ್ ಬಳಿಯ ಶ್ರೀಯನ್ ಸದನದ ಬಳಿ ಬೈಕ್ ಮೊಬೈಲ್‌, ಪರ್ಸ್‌ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಈ ಕುರಿತು ಕರಣ್ ತಾಯಿ ತುಳಸಿ ಕಾಪು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಕರಣ್‌ಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ಮುಂದುವರೆದಿತ್ತು. ಇದೀಗ ಕರಣ್ ಮೃತದೇಹ ಕಡೆಕಾರು ಪಡುಕೆರೆಯ ಕಡಲ ತೀರದಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ