ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕನ ಮೃತದೇಹ ಪತ್ತೆ; ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ

ಮಂಗಳೂರು : ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಮೃತ ದುರ್ದೈವಿಯನ್ನು ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಎಂದು ಗುರುತಿಸಲಾಗಿದೆ.

ಯಾವುದೋ ವಿಚಾರಕ್ಕೆ ಗಲಾಟೆಯಾಗಿ ಅಥವಾ ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮೃತದೇಹವನ್ನು ವೆನ್‌ಲಾಕ್ ಶವಾಗಾರದಲ್ಲಿಡಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಕುರಿತು ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours