ಸಮುದ್ರದಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿಯ ಶವ – ಪೊಲೀಸರಿಂದ ಪರಿಶೀಲನೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್‌ನಲ್ಲಿ ಅಪರಿಚಿತ ಶವವೊಂದು ತೇಲಿಬಂದಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಬೈಂದೂರು ಪೊಲೀಸರು ಸ್ಥಳೀಯರ ಸಹಾಯದಿಂದ ಶವವನ್ನು ಮೇಲಕ್ಕೆತ್ತಿ ಶವಾಗಾರದಲ್ಲಿರಿಸಿದ್ದಾರೆ. ಮೃತರಿಗೆ ಸಂಬಂದಿಸಿದ ವ್ಯಕ್ತಿಗಳು ಇದ್ದರೆ ಗಂಗೊಳ್ಳಿ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ವಿನಂತಿ ಮಾಡಿದ್ದಾರೆ. ಮಧ್ಯ ವಯಸ್ಸು ದಾಟಿದ ಗಂಡಸಿನ ಶವ ಇದಾಗಿದ್ದು ಗುರುತು ಸಿಗದಷ್ಟು ಬಾತು ಹೋಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ