ಕುಂದಾಪುರ ಸರ್ವಿಸ್ ರಸ್ತೆಯಲ್ಲಿ ಮರಣ ಕಂದಕ; ದ್ವಿಚಕ್ರ ಸವಾರರ ಪ್ರಾಣಕ್ಕೇ ಕಂಟಕ!

ಕುಂದಾಪುರ : ಸದ್ಯ ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದೆ. ಆದರೆ ಮಳೆಯ ಅವಾಂತರ ಮುಂದುವರೆದಿದೆ. ಕುಂದಾಪುರ ನಗರದ ಹಂಗಳೂರು – ಮೂರುಕೈ ಬಳಿಯ ಸರ್ವಿಸ್ ರಸ್ತೆಯಲ್ಲಿ ಸತತ ಸುರಿದ ಜಡಿ ಮಳೆಗೆ ಕಂದಕವೊಂದು ಸ್ರಷ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಸರತಿಯಂತೆ ಬಿದ್ದು ಗಾಯಗೊಳ್ಳುತ್ತಿದ್ದರೂ ಸಂಬಂಧ ಪಟ್ಟ ಇಲಾಖೆಯವರು ಮೌನ ವಹಿಸಿರುವುದರ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸ್ಥಳೀಯ ಸರ್ವಿಸ್ ರಸ್ತೆ ಮಳೆಗಾಲದಲ್ಲಿ ನೀರು ತುಂಬಿ ತೋಡಿನಂತೆ ಕಂಡು ಬರುತ್ತದೆ. ವಾಹನ ಸವಾರರು ಅದರಲ್ಲಿಯೇ ವಾಹನ ಚಲಾಯಿಸುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿದ್ದರು. ಆದರೆ ಇದೀಗ ಸರ್ವಿಸ್ ರಸ್ತೆಯಲ್ಲಿ ಭಾರಿ ಆಳದ ಕಂದಕಗಳು ಸ್ರಷ್ಟಿಯಾಗಿ ನೀರು ತುಂಬಿ ಕೊಂಡಿದೆ. ಇದರ ಬಗ್ಗೆ ಅರಿವಿಲ್ಲದ ವಾಹನ ಸವಾರರು ಕಂದಕದಲ್ಲಿ ಉರುಳಿ ಬಿದ್ದು ಗಾಯಗೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರ ಸಹಿತ ಸಾರ್ವಜನಿಕರು ಸಂಬಂಧ ಪಟ್ಟ ಇಲಾಖೆಗಳಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಹೇಳಲಾಗಿದೆ. ಹೆಚ್ಚಿನ ದುರಂತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚತ್ತು ಶೀಘ್ರ ಕ್ರಮ ಕೊಳ್ಳಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ