ಅಪರಿಚಿತ ವ್ಯಕ್ತಿ ಮೃತ್ಯು : ಸಂಬಂಧಿಕರಿಗೆ ಸೂಚನೆ

ಉಡುಪಿ : ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು.

‌‌‌ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ವಲಸೆ ಕಾರ್ಮಿಕ ಮೈಲಾರಿ ಎಂದು ತಿಳಿದುಬಂದಿದೆ. ಯಾವೊದೋ ಕಾಯಿಲೆಯಿಂದ ಮೃತಪಟ್ಟಿರುವ‌ ಶಂಕೆ ವ್ಯಕ್ತವಾಗಿದೆ. ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಸಂಬಂಧಿಕರು ಉಡುಪಿ ನಗರ ಪೋಲಿಸ್ ಠಾಣೆ, ಅಥವಾ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Related posts

ಷೇರು ವಹಿವಾಟಿನ ಬಗ್ಗೆ ಸಲಹೆ ನೀಡುವುದಾಗಿ ಯುವಕನಿಗೆ ವಂಚನೆ

ಉಳ್ಳಾಲದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ಉದ್ಘಾಟನೆ – ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ