ಲಾರಿ ಅಪಘಾತ ಡೆಲಿವರಿ ಬಾಯ್ ದಾರುಣ ಸಾವು

ಉಳ್ಳಾಲ : ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ, ಸ್ವಿಗ್ಗಿ ಡೆಲಿವರಿ ಬಾಯ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ.66 ರ ಸಂಕೊಳಿಗೆ ಸಮೀಪ ಸಂಭವಿಸಿದೆ.

ದೇರಳಕಟ್ಟೆ ಪಾನೀರು ನಿವಾಸಿ ಉಮ್ಮರ್ ಫಾರುಕ್ ಯಾನೆ ಅಝರ್ (31) ಸಾವನ್ನಪ್ಪಿದವರು. ಅವಿವಾಹಿತರಾಗಿರುವ ಇವರು ಸ್ವಿಗ್ಗಿ ಡೆಲಿವರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಡಿ.31ರ ತಡರಾತ್ರಿ ತಲಪಾಡಿಯಿಂದ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ವಾಪಸ್ಸಾಗುವ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದರು. ಬಳಿಕ ಅದೇ ಲಾರಿಯ ಹಿಂಬದಿ ಚಕ್ರಗಳು ಅವರ ಮೇಲೆ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬಸ್ಸು ಮಾಲಕರಿಂದ ಟೋಲ್ ಲೂಟಿ ವಿರುದ್ಧ ಪ್ರತಿಭಟನೆ

ಫೆಬ್ರವರಿ 8ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

ಫೆ.8ರಂದು “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ