ದೆಂದೂರುಕಟ್ಟೆ – ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಪು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ದೆಂದೂರುಕಟ್ಟೆ‌ಯಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವಕ ಸಂತೋಷ್ ಆಚಾರ್ಯ (39) ಎಂದು ಗುರುತಿಸಲಾಗಿದೆ.

ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಪಕ್ಕಾಸಿಗೆ ನೇಣುಬಿಗಿದು‌ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಾಪು ಪೋಲಿಸ್ ಠಾಣೆಯ ಎ.ಎಸ್.ಐ. ಗಣೇಶ್ ಪೈ, ಹಾಗೂ ಶಿವ ನಾಯ್ಕ್ ಮಹಜರು ಪ್ರಕ್ರಿಯೆ ನಡೆಸಿದರು.
ಸ‌ಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತದೇಹವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ತಪಾಸಣಾ ಘಟಕಕ್ಕೆ ರವಾನಿಸಲು ಇಲಾಖೆಗೆ ನೆರವಾದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ