ನಮ್ಮ ತುಳುನಾಡ್ ಟ್ರಸ್ಟ್ ವತಿಯಿಂದ ವಿಕಲಚೇತನ ವ್ಯಕ್ತಿಗೆ ವಾಟರ್ ಬೆಡ್ ವಿತರಣೆ

ಮಂಗಳೂರು : ಕುಳಾಯಿ ಹೊಸಬೆಟ್ಟುವಿನ ಕೆರೆಕಾಡು ನಿವಾಸಿ ಯಶೋಧರ ವಿಕಲಚೇತನರಾಗಿದ್ದು ಮನೆಯವರ ಮನವಿ‌ಯಂತೆ ಅವರಿಗೆ ನಮ್ಮ ತುಳುನಾಡ್ ಟ್ರಸ್ಟ್ (ರಿ)ನ ಸದಸ್ಯ‌ರಾದ ಮಹೇಶ್ ಪೂಜಾರಿ ಮುಂಬೈ ಇವರ ಸಹಕಾರ‌ದೊಂದಿಗೆ ಟ್ರಸ್ಟಿನ ವತಿಯಿಂದ ವಾಟರ್ ಬೆಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಸ್ಥಾಪಕಧ್ಯಕ್ಷರಾದ ಸುಧಾಕರ ಶೆಟ್ಟಿ, ಅಧ್ಯಕ್ಷ‌ರಾದ ರೋಹಿತಾಶ್ವ, ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ, ಕಾರ್ಯದರ್ಶಿ ರಾಜೇಶ್. ಯು, ರಾಜ್ಯ ಸಂಚಾಲಕರಾದ ತುಳುನಾಡ ತುಡರ್ ಖ್ಯಾತಿಯ ಕೀರ್ತಿ ಕಾರ್ಕಳ ಹಾಗೂ ಸಂದೀಪ್ ಶೆಟ್ಟಿ ಅಡ್ಕ ಉಪಸ್ಥಿತರಿದ್ದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ