ಗಂಗಾವಳಿ ನದಿಯಲ್ಲಿ ಮತ್ತೆ ಶೋಧ ನಡೆಸಲಿರುವ ಮುಳುಗುತಜ್ಞ ಈಶ್ವರ್ ಮಲ್ಪೆ

ಉಡುಪಿ: ಅಮಾವಾಸ್ಯೆ ಹಾಗೂ ಹುಣ್ಣಿಮೆಯಲ್ಲಿ ನದಿಯ ನೀರಿನ ಹರಿವಿನ ಪ್ರಮಾಣ ಸಮುದ್ರದ ಉಬ್ಬರವನ್ನು ಅವಲಂಬಿಸಿ ಕೆಲವು ಸಲ ಇಳಿಮುಖಗೊಳ್ಳುವ ಸಾಧ್ಯತೆ ಇರುವುದರಿಂದ ಆಗಸ್ಟ್ 4ರ ಅಮಾವಾಸ್ಯೆಯಂದು ಈಶ್ವರ ಮಲ್ಪೆ ಅವರು ಅಂಕೋಲ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಹರಿಯುತ್ತಿರುವ ಗಂಗಾವಳಿ ನದಿಯಲ್ಲಿ ಮೃತದೇಹದ ಶೋಧ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

ಈ ಮೊದಲು ಗಂಗಾವಳಿ ನದಿಯಲ್ಲಿ ಸಾಕಷ್ಟು ಬಾರಿ ಶೋಧ ನಡೆಸಿರುವ ಈಶ್ವರ ಮಲ್ಪೆ ತಂಡಕ್ಕೆ ಮೃತದೇಹದ ಸುಳಿವು ಸಿಕ್ಕಿರಲಿಲ್ಲ. ಕೆಂಪು ಮಿಶ್ರಿತ ನೀರಿನಿಂದಾಗಿ ಪತ್ತೆ ಕಾರ್ಯಕ್ಕೆ ತೊಡಕಾಗಿತ್ತು. ಇದೇ ಕಾರಣದಿಂದ ಜಿಲ್ಲಾಡಳಿತ ಕೂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿತ್ತು.

ಆಗಸ್ಟ್ 4ರಂದು ಮುಂಜಾನೆ 3 ಗಂಟೆಗೆ ಮಲ್ಪೆಯಿಂದ ಇವರ ತಂಡ ತೆರಳಲಿದ್ದು, 7 ಗಂಟೆಗೆ ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ನಡೆಸಲಿದೆ ಎಂದು ಈಶ್ವರ್‌ ಮಲ್ಪೆ ತಿಳಿಸಿದ್ದಾರೆ.

Related posts

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ವೈದ್ಯಕೀಯ ಶಿಕ್ಷಣದಲ್ಲಿ ಆಧುನಿಕ VR-ಆಧಾರಿತ ಕೌಶಲ ತರಬೇತಿಗೆ ಮೆಡಿಸಿಮ್ ವಿಆರ್‌ನೊಂದಿಗೆ ಮಾಹೆ ಒಪ್ಪಂದ

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ