ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧಿಕಾರ ಸ್ವೀಕಾರ

ಬೆಂಗಳೂರು : ಕರ್ನಾಟಕ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಗುರುವಾರ ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕರಿಸಿದರು. ವಿವಿಧ ಅಕಾಡೆಮಿಗಳ ಅಧ್ಯಕ್ಷರ ನೇಮಕಾತಿ ಹಿಂದೆಯೇ ಆಗಿದ್ದರು ಚುನಾವಣೆ ನೀತಿ ಸಂಹಿತೆ ದೀರ್ಘ ಅವಧಿ ಜಾರಿಯಲ್ಲಿದ್ದ ಕಾರಣ ಅಧಿಕಾರ ಸ್ವೀಕಾರ ವಿಳಂಬವಾಗಿದೆ.

ಅಧಿಕಾರ ಸ್ವೀಕರಿಸಿದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ ಯಕ್ಷಗಾನ ಉಳಿದರೆ ಕನ್ನಡ ಉಳಿಯುತ್ತದೆ, ಅಕಾಡೆಮಿ ಉಳಿಯುತ್ತದೆ. ಯಕ್ಷಗಾನ ರಾಜ್ಯದ ದೇಶದ ಕಲೆ ಆಗಬೇಕು ಎಲ್ಲರೂ ಸೇರಿ ಯಕ್ಷಗಾನದ ಏಳಿಗೆಗೆ ಪರಿಪೂರ್ಣವಾಗಿ ಕೆಲಸ ಮಾಡಬೇಕು ಕಲೆಯನ್ನು ಸರಕಾರ ಮತ್ತು ಜನರು ಉಳಿಸಿ ಬೆಳೆಸಬೇಕು ಯಕ್ಷಗಾನದ ಪರಿಚಾರಕನಾದ ನನಗೆ ಇಂತಹದೊಂದು ಸೇವೆ ಸಲ್ಲಿಸಲು ಸರಕಾರ ಅವಕಾಶ ಮಾಡಿಕೊಟ್ಟಿದೆ ಈ ಜವಾಬ್ದಾರಿ ನಿರ್ವಹಿಸಲು ಅವಕಾಶಕೊಟ್ಟವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಅಕಾಡೆಮಿ ರಿಜಿಸ್ಟಾರ್ ನಮ್ರತಾ ಎನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್, ಸದಸ್ಯ ಮೋಹನ್ ಕೊಪ್ಪಳ, ಜಿ. ವಿ. ಎಸ್ ಉಲ್ಲಾಳ್, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!