ಅಭಿಜಾತ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ನಿಧನಕ್ಕೆ ಡಾ.ತಲ್ಲೂರು ಶಿವರಾಮ ಶೆಟ್ಟಿ ಸಂತಾಪ

ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಅಭಿಜಾತ ಕಲಾವಿದರಾಗಿದ್ದ ಕುಂಬಳೆ ಶ್ರೀಧರ ರಾವ್ ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಯಕ್ಷಗಾನ ತಿರುಗಾಟ ಮೇಳದಲ್ಲಿ ಆರು ದಶಕಗಳಿಗೂ ಮಿಕ್ಕಿ ಕಲಾಸೇವೆಗೈದ ಕುಂಬಳೆ ಶ್ರೀಧರ ರಾಯರ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬ ಬಳಗದವರಿಗೆ ನೀಡಲೆಂದು ಡಾ.ತಲ್ಲೂರು ಶಿವರಾಮ ಶೆಟ್ಟಿಯವರು ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ