ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

ಮಣಿಪಾಲ : ಅಲೆವೂರಿನ ನೈಲಪಾದೆಯ ಚಶ್ಮಾವತಿ ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ನಿನ್ನೆ ಮುಂಜಾನೆ ಮೃತಪಟ್ಟರೆ ಇನ್ನೋರ್ವ ವಿದ್ಯಾರ್ಥಿ ಬುಧವಾರ ಸಂಜೆಯ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತ್ರಿವೆಂಡಮ್‌ನ ಆರೊನ್ ರೋಜರ್ ಲೀನ್(17) ಹಾಗೂ ಕೋಲ್ಕತಾದ ಮಾಧವ್(18) ಮೃತ ವಿದ್ಯಾರ್ಥಿಗಳು.

ಆ.25ರ ರವಿವಾರ ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದರು. ನಾಲ್ಕು ಮಂದಿ ವಿದ್ಯಾರ್ಥಿಗಳು ತೆರಳಿದ್ದು, ಈ ಪೈಕಿ ಇಬ್ಬರು ವಿದ್ಯಾರ್ಥಿಗಳು ಎರಡು ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನೀರಿನಲ್ಲಿ ಮುಳುಗಡೆಯಾಗಿದ್ದವರನ್ನು ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದರು. ಮೃತಪಟ್ಟ ಇಬ್ಬರೂ ಮಣಿಪಾಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ.

Related posts

ಅನುಮಾನಾಸ್ಪದ ವ್ಯಕ್ತಿಗಳು, ಬೋಟ್‌ಗಳು ಕಂಡುಬಂದಲ್ಲಿ‌ ಮಾಹಿತಿ ನೀಡುವಂತೆ ಮೀನುಗಾರರಿಗೆ ಸೂಚನೆ

‘ಉಡುಪಿ ಸಂಜೀವಿನಿ’ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ಮನೆಗೆ ನುಗ್ಗಿದ ಕಳ್ಳರು; ಹಣ ಹಾಗೂ ಚಿನ್ನಾಭರಣ ಕಳವುಗೈದು ಎಸ್ಕೇಪ್!