ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿದ ಹುಚ್ಚುನಾಯಿ!

ಉಡುಪಿ : ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದ ಮಾರುತಿ ವೀಥಿಕಾದಲ್ಲಿ ಸಂಭವಿಸಿದೆ.
ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ. ಗಾಯಗೊಂಡ ಎಲ್ಲರೂ ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿ‌ರುವುದನ್ನು ಸ್ಥಳೀಯರು ಗಮನಿಸಿದರು. ಹಲವು ಮಂದಿಗೆ ಕಚ್ಚಿ ತೀರಾ ಸುಸ್ತಾದ ಈ ನಾಯಿಯು ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ನೋಡಿದ್ದಾರೆ. ನಗರಸಭೆ ಪೌರಾಯುಕ್ತ ರಾಯಪ್ಪ ಹಾಗೂ ಪ್ರಾಣಿದಯಾ ಸಂಘದವರಿಗೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಹಾಗೂ ಪ್ರಾಣಿದಯಾ ಸಂಘದ ಮಂಜುಳಾ ಪರಿಶೀಲನೆ ನಡೆಸಿದರು. ಪಶು ವೈದ್ಯರನ್ನು ಕರೆಸಿ ನಾಯಿಗೆ ಚಚ್ಚುಮದ್ದು ನೀಡಲಾಯಿತು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ