ಮದ್ಯದ ಮತ್ತಿನಲ್ಲಿದ್ದಾತನನ್ನು ಎತ್ತಿ ಎಸೆದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ

ಸುಳ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಮದ್ಯದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬನನ್ನು ಎತ್ತಿ ಎಸೆದ ಘಟನೆ ನಡೆದಿದೆ. ಇದರ ವೀಡಿಯೋ ವೈರಲ್ ಆಗಿದೆ.

ಕುಕ್ಕೆ ಶ್ರೀಸುಬ್ರಮಣ್ಯ ದೇವಸ್ಥಾನದ ಆನೆ ಯಶಸ್ವಿನಿಯನ್ನು ಮಾವುತ ನಿಭಾಯಿಸುತ್ತಿದ್ದರು. ಪೊಲೀಸರು ಸೇರಿದಂತೆ ಒಂದಿಬ್ಬರು ಬಳಿಗೆ ಬಂದರೂ ಆನೆ ಏನೂ ಮಾಡಿರಲಿಲ್ಲ. ಆದರೆ ಅದೇ ಸಮಯಕ್ಕೆ ವ್ಯಕ್ತಿಯೊಬ್ಬ ಹಾಯ್ದು ಹೋಗುತ್ತಿದ್ದಂತೆ ಆನೆ ಸೊಂಡಿಲಿನಲ್ಲಿ ಎತ್ತಿ ಎಸೆದಿದೆ. ಆನೆ ಎಸೆಯುತ್ತಿದ್ದಂತೆ ಆತ ಒಂದಷ್ಟು ದೂರಕ್ಕೆ ಹೋಗಿ ಬಿದ್ದಿದ್ದಾನೆ. ಈ ವೇಳೆ ಮಾವುತ “ಮದ್ಯಪಾನ ಮಾಡಿ ಯಾಕೆ ಆನೆಯ ಹತ್ತಿರ ಬರುತ್ತೀರಾ?” ಎಂದು ದಬಾಯಿಸುವುದು ವೀಡಿಯೋದಲ್ಲಿ ಕೇಳಿ ಬಂದಿದೆ.

ಯಶಸ್ವಿನಿ ಆನೆಗೆ ಮದ್ಯದ ವಾಸನೆ ಆಗುವುದಿಲ್ಲವಂತೆ. ಮದ್ಯಪಾನಿಗಳು ಅದರ ಹತ್ತಿರ ಸುಳಿದಾಡಿದರೆ ಎತ್ತಿ ಎಸೆಯುತ್ತದೆಯಂತೆ. ಈ ಹಿಂದೆಯೂ ಇದೇ ರೀತಿ ಮದ್ಯಸೇವನೆ ಮಾಡಿದವನನ್ನು ಆನೆ ಎತ್ತಿ ಎಸೆದಿರುವ ಘಟನೆ ನಡೆದಿತ್ತು.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ

ಮನೆಯಲ್ಲಿ ಕುಳಿತು ಹಣ ಸಂಪಾದಿಸಿ ಕರೆ ನಂಬಿ 12.15ಲಕ್ಷ ರೂ. ಕಳೆದುಕೊಂಡ ವ್ಯಕ್ತಿ