ಖ್ಯಾತ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಕುಟುಂಬ ಸಮೇತ ಶ್ರೀ ಕೃಷ್ಣ ಮಠಕ್ಕೆ ಭೇಟಿ – ಶ್ರೀಗಳಿಂದ ಸನ್ಮಾನ

ಉಡುಪಿ : ಖ್ಯಾತ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಶ್ರೀ ಕೃಷ್ಣ ದರ್ಶನ ಕೈಗೊಂಡ ಅವರು, ಪರ್ಯಾಯ ಪುತ್ತಿಗೆ ಮಠದವರು ನಡೆಸುವ ಕೋಟಿಗೀತಾ ಲೇಖನ ಯಜ್ಞದ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡರು. ತಮ್ಮ ಅಜ್ಜನವರು ತಮಗೆ ಕಲಿಸಿಕೊಟ್ಟ ಭಗವದ್ಗೀತೆಯ ವಿಚಾರಗಳನ್ನು ಶ್ಲೋಕಗಳನ್ನು ಸ್ವಾಮೀಜಿಯ ಮುಂದೆ ಹೇಳಿದರು.

ಪರ್ಯಾಯ ಮಠದ ವತಿಯಿಂದ ಈ ವೇಳೆ ವಿವಿಎಸ್ ಲಕ್ಷ್ಮಣ್ ಮತ್ತು ಕುಟುಂಬದವರನ್ನು ಸನ್ಮಾನಿಸಲಾಯಿತು. ಉಡುಪಿ ಶ್ರೀ ಕೃಷ್ಣ ಮಠದಿಂದ ಕೊಲ್ಲೂರು ಕ್ಷೇತ್ರ ಹಾಗೂ ಗೋಕರ್ಣ ಕ್ಷೇತ್ರದ ಸಂದರ್ಶನಕ್ಕೆ ತೆರಳಿದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ