ನೆಲ್ಯಾಡಿ ಬಳಿ ಭೀಕರ ಅಪಘಾತ : ಮಾರುತಿ ಸ್ವಿಫ್ಟ್ ಕಾರು ಡಿವೈಡರ್ ಜಂಪ್; ಓರ್ವ ಮೃತ್ಯು

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಾರುತಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.

ಮೃತರನ್ನು ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ ಎಂಬವರ ಪುತ್ರ ಜಗದೀಶ್ (26) ಎಂದು ಗುರುತಿಸಲಾಗಿದೆ.

ಅವರ ಸ್ನೇಹಿತ ಕಾರು ಚಾಲಕ ಸಚಿನ್ ಎಂಬವರು ಗಾಯಗೊಂಡಿದ್ದಾರೆ. ಜಗದೀಶ್ ಹಾಗೂ ಅವರ ಸ್ನೇಹಿತರು ನಾಲ್ಕೈದು ಕಾರಿನಲ್ಲಿ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಗಡಿ ದೇವಸ್ಥಾನಕ್ಕೆ ಹೋದವರು ಅಲ್ಲಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಸಚಿನ್ ಚಲಾಯಿಸುತ್ತಿದ್ದ ಕಾರಿನಲ್ಲಿ ಜಗದೀಶ್ ಮಾತ್ರ ಇದ್ದರು ಎನ್ನಲಾಗಿದ್ದು, ವೇಗವಾಗಿ ಬಂದ ಕಾರು ಮಣ್ಣಗುಂಡಿಯಲ್ಲಿ ಡಿವೈಡರ್‍‌ಗೆ ಢಿಕ್ಕಿಯಾಗಿ ಡಿವೈಡರ್ ಮೇಲೆ ಏರಿ ನಿಂತಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ

ಗರ್ಭಧರಿಸಿದ್ದ ಗೋವಿನ ಹತ್ಯೆಗೈದು ಕರುವನ್ನು ನದಿಗೆ ಎಸೆದ ಗೋಕಳ್ಳರು