ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದು ತಂದೆ ಆತ್ಮಹತ್ಯೆಗೆ ಶರಣು!

ಉದ್ಯಾವರ : ವೈಯುಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ/ಮಾಲಕ ಮಹೇಶ್ ಪಾಲನ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಇಂದು ಬೆಳಿಗ್ಗೆ ಮೂರನೇ ತರಗತಿಯಲ್ಲಿ ಇರುವ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹೇಶ್ ಉದ್ಯಾವರ ಗುಡ್ಡೆಯಂಗಡಿಯಲ್ಲಿ ಟೆಂಪೋ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಬಿಲ್ಲವ ಮಹಾಜನ ಸಂಘ, ಉದ್ಯಾವರ ಯುವಕ ಮಂಡಲ ಮತ್ತು ಗುಡ್ಡೆಯಂಗಡಿ ಫ್ರೆಂಡ್ಸ್ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ತಂದೆ ಆಂಬುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೃತ ಮಹೇಶ್ ತಂದೆ, ತಾಯಿ, ಇಬ್ಬರು ಸಹೋದರರು, ಪತ್ನಿ, ಪುತ್ರಿ ಸಹಿತ ಬಂದು ಬಳಗದವರನ್ನು ಅಗಲಿದ್ದಾರೆ.

Related posts

ಪೆರ್ಡೂರಿನಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮೀನ ಸಂಕ್ರಮಣದಂದು ನಡೆದ ಕೆರೆದೀಪ, ಗರುಡವಾಹನ, ಕಟ್ಟೆಪೂಜೆ ಸಂಭ್ರಮ

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

‘ವಿಶ್ವಕರ್ಮ ಯೋಜನೆ’ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಂಸದ ಕೋಟ